<p>ರಾಯಚೂರು: ಸಂವಿಧಾನದ 371 (ಜೆ) ಕಲಂ ಜಾರಿಗೆ ಬಂದಿದ್ದರೂ ಕಲ್ಯಾಣ ಕರ್ನಾಟಕ ಭಾಗಕ್ಕೆ ನಿರೀಕ್ಷಿತ ಮಟ್ಟದಲ್ಲಿ ನ್ಯಾಯ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ಹಾದಿ ರೂಪಿಸಲು ಮೇ 24ರಂದು ರಾಯಚೂರಿನಲ್ಲಿ ಹೈದರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರದ ನೇತೃತ್ವದಲ್ಲಿ 371(ಜೆ) ಹೋರಾಟಗಾರರ ಸಮಾವೇಶ ಹಾಗೂ ದುಂಡು ಮೇಜಿನ ಸಭೆ ಆಯೋಜಿಸಲಾಗಿದೆ ಎಂದು ಹೈದರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರದ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ತಿಳಿಸಿದರು.</p>.<p>ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘24ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ರಾಯಚೂರಿನ ಸ್ಟೇಷನ್ ರಸ್ತೆಯಲ್ಲಿರುವ ಕೊಠಾರಿ ಫಂಕ್ಷನ್ ಹಾಲ್ (ಎಸ್.ಎಲ್.ವಿ ಹೋಟೆಲ್ ಹತ್ತಿರ)ನಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಜನಪ್ರತಿನಿಧಿಗಳು, ಮಾಜಿ ಶಾಸಕರು ಹಾಗೂ ಸಂಸದರು ಪಾಲ್ಗೊಳ್ಳಲಿದ್ದಾರೆ. 7 ಜಿಲ್ಲೆಗಳ ಪ್ರತಿನಿಧಿಗಳನ್ನೊಳಗೊಂಡ ಸಕ್ರಿಯ ಹೋರಾಟ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದರು.</p>.<p>ಚಾಮರಸ ಮಾಲಿಪಾಟೀಲ, ಹರವಿ ನಾಗನಗೌಡ, ಆರ್.ಬಸವರಾಜ, ಬೂದೆಪ್ಪ ಕರ್ಲಿ, ಚಂದ್ರಶೇಖರ ನೆಲಹಾಳ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-32-1197802672</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಸಂವಿಧಾನದ 371 (ಜೆ) ಕಲಂ ಜಾರಿಗೆ ಬಂದಿದ್ದರೂ ಕಲ್ಯಾಣ ಕರ್ನಾಟಕ ಭಾಗಕ್ಕೆ ನಿರೀಕ್ಷಿತ ಮಟ್ಟದಲ್ಲಿ ನ್ಯಾಯ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ಹಾದಿ ರೂಪಿಸಲು ಮೇ 24ರಂದು ರಾಯಚೂರಿನಲ್ಲಿ ಹೈದರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರದ ನೇತೃತ್ವದಲ್ಲಿ 371(ಜೆ) ಹೋರಾಟಗಾರರ ಸಮಾವೇಶ ಹಾಗೂ ದುಂಡು ಮೇಜಿನ ಸಭೆ ಆಯೋಜಿಸಲಾಗಿದೆ ಎಂದು ಹೈದರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರದ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ತಿಳಿಸಿದರು.</p>.<p>ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘24ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ರಾಯಚೂರಿನ ಸ್ಟೇಷನ್ ರಸ್ತೆಯಲ್ಲಿರುವ ಕೊಠಾರಿ ಫಂಕ್ಷನ್ ಹಾಲ್ (ಎಸ್.ಎಲ್.ವಿ ಹೋಟೆಲ್ ಹತ್ತಿರ)ನಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಜನಪ್ರತಿನಿಧಿಗಳು, ಮಾಜಿ ಶಾಸಕರು ಹಾಗೂ ಸಂಸದರು ಪಾಲ್ಗೊಳ್ಳಲಿದ್ದಾರೆ. 7 ಜಿಲ್ಲೆಗಳ ಪ್ರತಿನಿಧಿಗಳನ್ನೊಳಗೊಂಡ ಸಕ್ರಿಯ ಹೋರಾಟ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದರು.</p>.<p>ಚಾಮರಸ ಮಾಲಿಪಾಟೀಲ, ಹರವಿ ನಾಗನಗೌಡ, ಆರ್.ಬಸವರಾಜ, ಬೂದೆಪ್ಪ ಕರ್ಲಿ, ಚಂದ್ರಶೇಖರ ನೆಲಹಾಳ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-32-1197802672</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>