<p><strong>ರಾಯಚೂರು:</strong> ರೈತರು ಹವಾಮಾನ ಹಾಗೂ ಭೂಮಿಗೆ ಅನುಗುಣವಾದ ಬೀಜಗಳ ತಳಿಗಳನ್ನು ಆಯ್ಕೆ ಮಾಡಿಕೊಂಡು ಕೃಷಿ ಮಾಡಬೇಕು. ವಿಶೇಷವಾಗಿ ಸೂರ್ಯಕಾಂತಿ ಬೀಜೋತ್ಪಾದನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡು ರೈತರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಅಮರೇಗೌಡ ಎ. ಹೇಳಿದರು.</p>.<p>ಇಲ್ಲಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಅಖಿಲ ಭಾರತ ಸಂಯೋಜಿತ ಬೀಜ ಸಂಶೋಧನಾ ಯೋಜನೆ, ಬೀಜ ಘಟಕ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ತಂತ್ರಜ್ಞರ ಸಂಸ್ಥೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಮುಂಗಾರು ಬೀಜ ದಿನೋತ್ಸವ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರೈತರು ವಿವಿಧ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಪಡೆದು ಅವುಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಅರುಣಕುಮಾರ ಹೊಸಮನಿ ಮಾತನಾಡಿ,‘ಮುಂಗಾರು ಹಂಗಾಮು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಮುಂಗಾರು ಬೆಳೆಗಳ ತಾಂತ್ರಿಕ ಮಾಹಿತಿ, ಸುಧಾರಿತ ಬೀಜೋತ್ಪಾದನಾ ತಂತ್ರಜ್ಞಾನ ಹಾಗೂ ರೈತರ ಸಹಭಾಗಿತ್ವದ ಬೀಜೋತ್ಪಾದನಾ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ’ ಎಂದು ತಿಳಿಸಿದರು.</p>.<p>ವಿಸ್ತರಣಾ ನಿರ್ದೇಶಕ ಎ.ಆರ್.ಕುರುಬರ್ ಮಾತನಾಡಿ,‘ವಿಶ್ವವಿದ್ಯಾಲಯದ ಬೀಜ ಘಟಕದ ಕಾರ್ಯ ಶ್ಲಾಘನೀಯವಾಗಿದೆ. ರೈತರು ಗುಣಮಟ್ಟದ ಬೀಜಗಳನ್ನು ವಿಶ್ವವಿದ್ಯಾಲಯದಿಂದ ಖರೀದಿಸಿ ಬಳಕೆ ಮಾಡಬೇಕು. ಜೊತೆಗೆ ಉತ್ತಮ ಗುಣಮಟ್ಟದ ಬೀಜೋತ್ಪಾದನೆ ಮಾಡಿದ ರೈತರನ್ನು ಅಭಿನಂದಿಸಿ, ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕೃಷಿ ತಂತ್ರಜ್ಞರ ಸಂಸ್ಥೆಯ ಅಧ್ಯಕ್ಷ ಆರ್.ಎ.ಪಾಟೀಲ ಮಾತನಾಡಿ,‘ಕೃವಿವಿ ಅಭಿವೃದ್ಧಿಪಡಿಸಿದ ತಳಿಗಳ ಬೀಜಗಳನ್ನು ರೈತರು ಬಳಸಿ ಸುಧಾರಿತ ಕೃಷಿ ಕ್ರಮಗಳನ್ನು ಅನುಸರಿಸುವ ಮೂಲಕ ಹೆಚ್ಚಿನ ಲಾಭ ಪಡೆಯಬಹುದು’ ಎಂದು ಹೇಳಿದರು.</p>.<p>ತೊಗರಿ ತಳಿ ಟಿಎಸ್-3 ಆರ್ ಬೀಜೋತ್ಪಾದನೆಯಲ್ಲಿ ಅಧಿಕ ಇಳುವರಿ ಪಡೆದ ಸಿಂಧನೂರು ತಾಲ್ಲೂಕಿನ ಕುನ್ನಟಗಿ ಗ್ರಾಮದ ಯುವ ರೈತ ಶರಣಬಸಯ್ಯ ಅವರನ್ನು ಸನ್ಮಾನಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಬೀಜ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗ ಮುಖ್ಯಸ್ಥೆ ಎನ್.ಎಂ. ಶಕುಂತಲಾ, ಕರ್ನಾಟಕ ರಾಜ್ಯ ಬೀಜ ನಿಗಮದ ಉಪ ವ್ಯವಸ್ಥಾಪಕ ಪ್ರಭು ತುರಾಯಿ, ಉಪ ನಿರ್ದೇಶಕಿ ಗೀತಾ ಹಾಜರಿದ್ದರು.</p>.<p>ನಂತರ ನಡೆದ ತಾಂತ್ರಿಕ ಗೋಷ್ಠಿಯಲ್ಲಿ ವಿಜ್ಞಾನಿಗಳು ವಿವಿಧ ಕೃಷಿ ಮತ್ತು ಬೀಜೋತ್ಪಾದನಾ ವಿಷಯಗಳ ಕುರಿತು ರೈತರಿಗೆ ಮಾಹಿತಿ ನೀಡಿದರು. ಜಿಲ್ಲೆಯ ವಿವಿಧ ಗ್ರಾಮಗಳಿಂದ ಸುಮಾರು 800ಕ್ಕೂ ಹೆಚ್ಚು ರೈತರು ಹಾಗೂ ವಿವಿಧ ಸಂಸ್ಥೆಗಳ ಬೀಜೋತ್ಪಾದನಾ ಅಧಿಕಾರಿಗಳು ಭಾಗವಹಿಸಿದ್ದರು.</p>.<p>ವಿಜಯಕುಮಾರ ಕೆ. ಸ್ವಾಗತಿಸಿದರು. ಉಮೇಶ ಹಿರೇಮಠ ನಿರೂಪಿಸಿದರು. ಮೇಘಾ ಬಿ. ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-32-290770234</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ರೈತರು ಹವಾಮಾನ ಹಾಗೂ ಭೂಮಿಗೆ ಅನುಗುಣವಾದ ಬೀಜಗಳ ತಳಿಗಳನ್ನು ಆಯ್ಕೆ ಮಾಡಿಕೊಂಡು ಕೃಷಿ ಮಾಡಬೇಕು. ವಿಶೇಷವಾಗಿ ಸೂರ್ಯಕಾಂತಿ ಬೀಜೋತ್ಪಾದನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡು ರೈತರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಅಮರೇಗೌಡ ಎ. ಹೇಳಿದರು.</p>.<p>ಇಲ್ಲಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಅಖಿಲ ಭಾರತ ಸಂಯೋಜಿತ ಬೀಜ ಸಂಶೋಧನಾ ಯೋಜನೆ, ಬೀಜ ಘಟಕ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ತಂತ್ರಜ್ಞರ ಸಂಸ್ಥೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಮುಂಗಾರು ಬೀಜ ದಿನೋತ್ಸವ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರೈತರು ವಿವಿಧ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಪಡೆದು ಅವುಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಅರುಣಕುಮಾರ ಹೊಸಮನಿ ಮಾತನಾಡಿ,‘ಮುಂಗಾರು ಹಂಗಾಮು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಮುಂಗಾರು ಬೆಳೆಗಳ ತಾಂತ್ರಿಕ ಮಾಹಿತಿ, ಸುಧಾರಿತ ಬೀಜೋತ್ಪಾದನಾ ತಂತ್ರಜ್ಞಾನ ಹಾಗೂ ರೈತರ ಸಹಭಾಗಿತ್ವದ ಬೀಜೋತ್ಪಾದನಾ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ’ ಎಂದು ತಿಳಿಸಿದರು.</p>.<p>ವಿಸ್ತರಣಾ ನಿರ್ದೇಶಕ ಎ.ಆರ್.ಕುರುಬರ್ ಮಾತನಾಡಿ,‘ವಿಶ್ವವಿದ್ಯಾಲಯದ ಬೀಜ ಘಟಕದ ಕಾರ್ಯ ಶ್ಲಾಘನೀಯವಾಗಿದೆ. ರೈತರು ಗುಣಮಟ್ಟದ ಬೀಜಗಳನ್ನು ವಿಶ್ವವಿದ್ಯಾಲಯದಿಂದ ಖರೀದಿಸಿ ಬಳಕೆ ಮಾಡಬೇಕು. ಜೊತೆಗೆ ಉತ್ತಮ ಗುಣಮಟ್ಟದ ಬೀಜೋತ್ಪಾದನೆ ಮಾಡಿದ ರೈತರನ್ನು ಅಭಿನಂದಿಸಿ, ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕೃಷಿ ತಂತ್ರಜ್ಞರ ಸಂಸ್ಥೆಯ ಅಧ್ಯಕ್ಷ ಆರ್.ಎ.ಪಾಟೀಲ ಮಾತನಾಡಿ,‘ಕೃವಿವಿ ಅಭಿವೃದ್ಧಿಪಡಿಸಿದ ತಳಿಗಳ ಬೀಜಗಳನ್ನು ರೈತರು ಬಳಸಿ ಸುಧಾರಿತ ಕೃಷಿ ಕ್ರಮಗಳನ್ನು ಅನುಸರಿಸುವ ಮೂಲಕ ಹೆಚ್ಚಿನ ಲಾಭ ಪಡೆಯಬಹುದು’ ಎಂದು ಹೇಳಿದರು.</p>.<p>ತೊಗರಿ ತಳಿ ಟಿಎಸ್-3 ಆರ್ ಬೀಜೋತ್ಪಾದನೆಯಲ್ಲಿ ಅಧಿಕ ಇಳುವರಿ ಪಡೆದ ಸಿಂಧನೂರು ತಾಲ್ಲೂಕಿನ ಕುನ್ನಟಗಿ ಗ್ರಾಮದ ಯುವ ರೈತ ಶರಣಬಸಯ್ಯ ಅವರನ್ನು ಸನ್ಮಾನಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಬೀಜ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗ ಮುಖ್ಯಸ್ಥೆ ಎನ್.ಎಂ. ಶಕುಂತಲಾ, ಕರ್ನಾಟಕ ರಾಜ್ಯ ಬೀಜ ನಿಗಮದ ಉಪ ವ್ಯವಸ್ಥಾಪಕ ಪ್ರಭು ತುರಾಯಿ, ಉಪ ನಿರ್ದೇಶಕಿ ಗೀತಾ ಹಾಜರಿದ್ದರು.</p>.<p>ನಂತರ ನಡೆದ ತಾಂತ್ರಿಕ ಗೋಷ್ಠಿಯಲ್ಲಿ ವಿಜ್ಞಾನಿಗಳು ವಿವಿಧ ಕೃಷಿ ಮತ್ತು ಬೀಜೋತ್ಪಾದನಾ ವಿಷಯಗಳ ಕುರಿತು ರೈತರಿಗೆ ಮಾಹಿತಿ ನೀಡಿದರು. ಜಿಲ್ಲೆಯ ವಿವಿಧ ಗ್ರಾಮಗಳಿಂದ ಸುಮಾರು 800ಕ್ಕೂ ಹೆಚ್ಚು ರೈತರು ಹಾಗೂ ವಿವಿಧ ಸಂಸ್ಥೆಗಳ ಬೀಜೋತ್ಪಾದನಾ ಅಧಿಕಾರಿಗಳು ಭಾಗವಹಿಸಿದ್ದರು.</p>.<p>ವಿಜಯಕುಮಾರ ಕೆ. ಸ್ವಾಗತಿಸಿದರು. ಉಮೇಶ ಹಿರೇಮಠ ನಿರೂಪಿಸಿದರು. ಮೇಘಾ ಬಿ. ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-32-290770234</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>