<p>ರಾಯಚೂರು: ಲಿಂಗಸುಗೂರು ತಾಲ್ಲೂಕಿನ ಬಯ್ಯಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋಗಾಪುರ ಗ್ರಾಮದ ಅಂಗನವಾಡಿ ಕೇಂದ್ರ–2ರಲ್ಲಿ 2016ನೇ ಸಾಲಿನಲ್ಲಿ ನಡೆದ ಅಂಗನವಾಡಿ ಸಹಾಯಕಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಕನ್ನಡ ಸೇನೆ ಕರ್ನಾಟಕ ಸಂಘಟನೆಯ ಜಿಲ್ಲಾ ಸಮಿತಿ ಒತ್ತಾಯಿಸಿದೆ.</p>.<p>ಸಮಿತಿ ಪದಾಧಿಕಾರಿಗಳು ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನವಿನ್ಕುಮಾರ ಅವರಿಗೆ ಮನವಿ ಸಲ್ಲಿಸಿದರು.</p>.<p>ಈ ಹುದ್ದೆಗೆ ಭೋಗಾಪುರ ಗ್ರಾಮದ ಚೌಡಮ್ಮ ಗ್ಯಾನಪ್ಪ ಹಾಗೂ ಬಗಡಿ ತಾಂಡಾದ ನಿವಾಸಿ ವಿಜಯಶ್ರೀ ರಮೇಶ ಸೇರಿ ಇಬ್ಬರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಆದರೆ, ಸ್ಥಳೀಯ ಅಭ್ಯರ್ಥಿಯಾಗಿರುವ ಚೌಡಮ್ಮ ಅವರ ದಾಖಲೆ ಪರಿಗಣಿಸದೇ, ಸ್ಥಳೀಯರಲ್ಲದ ವಿಜಯಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ದೂರಿದರು. ಈ ನೇಮಕಾತಿಯನ್ನು ಸಮಗ್ರವಾಗಿ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಘಟನೆಯ ಜಿಲ್ಲಾಧ್ಯಕ್ಷ ಎಂ. ಬಸವರಾಜ ಮಾತನಾಡಿದರು.</p>.<p>ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ.ಎಂ ಹಾಗೂ ಜಿಲ್ಲಾ ಕಾರ್ಯಾಧ್ಯಕ್ಷ ಹನುಮೇಶ ನಾಯಕ ಮೇಟಿ, ನಗರ ಘಟಕದ ಅಧ್ಯಕ್ಷ ಮಂಜುನಾಥ, ಮುಖಂಡರಾದ ಶಿವರಾಜ ಬಡಿಗೇರ, ನಿವೇದಿತಾ, ಉಪಾಧ್ಯಕ್ಷ ಶರಣು ಜಿ.ಪವಾರ್, ಶಿವು ಕೆಂಪು, ಅಮರೇಶ ನಾಯಕ, ಪದ್ಮಾ, ಚೌಡಮ್ಮ ಯಮನೂರಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-32-243499647</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಲಿಂಗಸುಗೂರು ತಾಲ್ಲೂಕಿನ ಬಯ್ಯಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋಗಾಪುರ ಗ್ರಾಮದ ಅಂಗನವಾಡಿ ಕೇಂದ್ರ–2ರಲ್ಲಿ 2016ನೇ ಸಾಲಿನಲ್ಲಿ ನಡೆದ ಅಂಗನವಾಡಿ ಸಹಾಯಕಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಕನ್ನಡ ಸೇನೆ ಕರ್ನಾಟಕ ಸಂಘಟನೆಯ ಜಿಲ್ಲಾ ಸಮಿತಿ ಒತ್ತಾಯಿಸಿದೆ.</p>.<p>ಸಮಿತಿ ಪದಾಧಿಕಾರಿಗಳು ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನವಿನ್ಕುಮಾರ ಅವರಿಗೆ ಮನವಿ ಸಲ್ಲಿಸಿದರು.</p>.<p>ಈ ಹುದ್ದೆಗೆ ಭೋಗಾಪುರ ಗ್ರಾಮದ ಚೌಡಮ್ಮ ಗ್ಯಾನಪ್ಪ ಹಾಗೂ ಬಗಡಿ ತಾಂಡಾದ ನಿವಾಸಿ ವಿಜಯಶ್ರೀ ರಮೇಶ ಸೇರಿ ಇಬ್ಬರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಆದರೆ, ಸ್ಥಳೀಯ ಅಭ್ಯರ್ಥಿಯಾಗಿರುವ ಚೌಡಮ್ಮ ಅವರ ದಾಖಲೆ ಪರಿಗಣಿಸದೇ, ಸ್ಥಳೀಯರಲ್ಲದ ವಿಜಯಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ದೂರಿದರು. ಈ ನೇಮಕಾತಿಯನ್ನು ಸಮಗ್ರವಾಗಿ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಘಟನೆಯ ಜಿಲ್ಲಾಧ್ಯಕ್ಷ ಎಂ. ಬಸವರಾಜ ಮಾತನಾಡಿದರು.</p>.<p>ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ.ಎಂ ಹಾಗೂ ಜಿಲ್ಲಾ ಕಾರ್ಯಾಧ್ಯಕ್ಷ ಹನುಮೇಶ ನಾಯಕ ಮೇಟಿ, ನಗರ ಘಟಕದ ಅಧ್ಯಕ್ಷ ಮಂಜುನಾಥ, ಮುಖಂಡರಾದ ಶಿವರಾಜ ಬಡಿಗೇರ, ನಿವೇದಿತಾ, ಉಪಾಧ್ಯಕ್ಷ ಶರಣು ಜಿ.ಪವಾರ್, ಶಿವು ಕೆಂಪು, ಅಮರೇಶ ನಾಯಕ, ಪದ್ಮಾ, ಚೌಡಮ್ಮ ಯಮನೂರಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-32-243499647</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>