<p><strong>ಜಾಲಹಳ್ಳಿ</strong>: ಅರಕೇರಾ ತಾಲ್ಲೂಕಿನ ಬೂಮನಗುಂಡ ಗ್ರಾಮದ ಕುರ್ಲೆರದೊಡ್ಡಿಯಲ್ಲಿ ಶನಿವಾರ ರಾತ್ರಿ ಸಿಡಿಲು ಬಡಿದು ಹುಲ್ಲಿನ ಬಣವೆಗಳು ಭಸ್ಮವಾಗಿವೆ.</p>.<p>ರೈತರಾದ ದುರುಗಪ್ಪ, ಸಾಬಯ್ಯ, ನರಸಣ್ಣ, ಆಂಜನಯ್ಯ, ರಾಮಯ್ಯ, ದೇವರಾಜ ಎಂಬು ವವರಿಗೆ ಸೇರಿದ ಒಂಬತ್ತು ಬಣವೆಗಳು ನಾಶವಾಗಿವೆ.</p>.<p>ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ಸಿಡಿಲು ಬಡಿದು ಮೊದಲಿಗೆ ಒಂದು ಬಣವೆಗೆ ಬೆಂಕಿ ಹೊತ್ತಿಕೊಂಡು ನಂತರ ಪಕ್ಕದಲ್ಲಿರುವ ಬಣವೆಗಳಿಗೆ ಹರಡಿದೆ. ಒಂಬತ್ತು ಬಣವೆಗಳಲ್ಲಿ ಜೋಳದ ಕಣಕಿ, ಭತ್ತದ ಹುಲ್ಲು, ಶೇಂಗಾ ಹೊಟ್ಟನ್ನು ಸಂಗ್ರಹಿಸಲಾಗಿತ್ತು.</p>.<p>ಅರಕೇರ, ದೇವದುರ್ಗ ಅಗ್ನಿಶಾಮಕ ಸಿಬ್ಬಂದಿ ಶನಿವಾರ ರಾತ್ರಿಯಿಂದ ಭಾನುವಾರ ಬೆಳಗಿನ ಜಾವ 3 ಗಂಟೆವರೆಗೆ ಬೆಂಕಿ ನಂದಿಸಲು ಹರಸಾಹಸ ಪಟ್ಟರು.</p>.<p>ಬೆಂಕಿ ಕಿಡಿಯಿಂದ ಭಾನುವಾರ ಬೆಳಿಗ್ಗೆ 10 ಗಂಟೆಯ ನಂತರ ಬಣವೆ ಮತ್ತೆ ಹೊತ್ತಿ ಉರಿದಿದೆ. ಪುನಃ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-32-249517166</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಾಲಹಳ್ಳಿ</strong>: ಅರಕೇರಾ ತಾಲ್ಲೂಕಿನ ಬೂಮನಗುಂಡ ಗ್ರಾಮದ ಕುರ್ಲೆರದೊಡ್ಡಿಯಲ್ಲಿ ಶನಿವಾರ ರಾತ್ರಿ ಸಿಡಿಲು ಬಡಿದು ಹುಲ್ಲಿನ ಬಣವೆಗಳು ಭಸ್ಮವಾಗಿವೆ.</p>.<p>ರೈತರಾದ ದುರುಗಪ್ಪ, ಸಾಬಯ್ಯ, ನರಸಣ್ಣ, ಆಂಜನಯ್ಯ, ರಾಮಯ್ಯ, ದೇವರಾಜ ಎಂಬು ವವರಿಗೆ ಸೇರಿದ ಒಂಬತ್ತು ಬಣವೆಗಳು ನಾಶವಾಗಿವೆ.</p>.<p>ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ಸಿಡಿಲು ಬಡಿದು ಮೊದಲಿಗೆ ಒಂದು ಬಣವೆಗೆ ಬೆಂಕಿ ಹೊತ್ತಿಕೊಂಡು ನಂತರ ಪಕ್ಕದಲ್ಲಿರುವ ಬಣವೆಗಳಿಗೆ ಹರಡಿದೆ. ಒಂಬತ್ತು ಬಣವೆಗಳಲ್ಲಿ ಜೋಳದ ಕಣಕಿ, ಭತ್ತದ ಹುಲ್ಲು, ಶೇಂಗಾ ಹೊಟ್ಟನ್ನು ಸಂಗ್ರಹಿಸಲಾಗಿತ್ತು.</p>.<p>ಅರಕೇರ, ದೇವದುರ್ಗ ಅಗ್ನಿಶಾಮಕ ಸಿಬ್ಬಂದಿ ಶನಿವಾರ ರಾತ್ರಿಯಿಂದ ಭಾನುವಾರ ಬೆಳಗಿನ ಜಾವ 3 ಗಂಟೆವರೆಗೆ ಬೆಂಕಿ ನಂದಿಸಲು ಹರಸಾಹಸ ಪಟ್ಟರು.</p>.<p>ಬೆಂಕಿ ಕಿಡಿಯಿಂದ ಭಾನುವಾರ ಬೆಳಿಗ್ಗೆ 10 ಗಂಟೆಯ ನಂತರ ಬಣವೆ ಮತ್ತೆ ಹೊತ್ತಿ ಉರಿದಿದೆ. ಪುನಃ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-32-249517166</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>