<p><strong>ಸಿರವಾರ</strong>: ರಾಯಚೂರು– ಲಿಂಗಸುಗೂರು ರಾಜ್ಯ ಹೆದ್ದಾರಿಗೆ ಹೊಂದಿಕೊಂಡ ತಾಲ್ಲೂಕಿನ ಅತ್ತನೂರು ಗ್ರಾಮದಲ್ಲಿ ವರ್ಷ ಪೂರ್ತಿ ಕುಡಿಯುವ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಇದೆ. ಇಲ್ಲಿನ ಸಮಸ್ಯೆ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದರೂ ಪರಿಹಾರ ಮಾತ್ರ ಸಿಕ್ಕಿಲ್ಲ.</p>.<p>ಗ್ರಾಮಸ್ಥರಿಗೆ 1 ಕಿ.ಮೀ ದೂರದ ಕೆರೆಯ ನೀರೇ ಗತಿಯಾಗಿದ್ದು ಅಲ್ಲಿಂದ ಪ್ರತಿದಿನ ಬೆಳಿಗ್ಗೆ ನೀರು ತರುವುದೇ ಕೆಲಸವಾಗಿದೆ. ಸೈಕಲ್, ಬಂಡಿ, ದ್ವಿಚಕ್ರ ವಾಹನಗಳ ಮೂಲಕ ನೀರು ತರಬೇಕಾಗಿದ್ದು ಬೇಸಿಗೆಯಲ್ಲಿ ಅರ್ಧ ದಿನ ನೀರಿಗಾಗಿ ಮೀಸಲಿಡಬೇಕಾದ ಅನಿವಾರ್ಯತೆ ಉಂಟಾಗುತ್ತದೆ.</p>.<p>‘ಗ್ರಾಮದಲ್ಲಿ ಕೊಳವೆಬಾವಿ ಮತ್ತು ಪೈಪ್ಲೈನ್ ವ್ಯವಸ್ಥೆ ಇದ್ದರೂ ಕೊಳವೆಬಾವಿ ನೀರು ಬಳಕೆಗೆ ಯೋಗ್ಯವಿಲ್ಲದ ಕಾರಣ ಕೆರೆ ನೀರು ಅನಿವಾರ್ಯವಾಗಿದೆ. ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಗಗನ ಕುಸುಮವಾಗಿದ್ದು ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸಂಕಷ್ಟ ಎದುರಿಸುವಂತಾಗಿದೆ’ ಎಂದು ಗ್ರಾಮಸ್ಥ ಮುತ್ತಣ್ಣ ಬಾರಿಕೇರ್ ಆರೋಪಿಸುತ್ತಾರೆ.</p>.<p>ಪೈಪ್ ಲೈನ್ ಮೂಲಕ ಕೆರೆ ನೀರು ಪೂರೈಸಬೇಕು ಎನ್ನುವ ಮನವಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಪಂದಿಸದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಶಾಶ್ವತ ಕುಡಿಯುವ ನೀರಿಗಾಗಿ ಗ್ರಾಮದಿಂದ 3 ಕಿ.ಮೀ ದೂರದಲ್ಲಿ ಸ್ಥಳ ಗುರುತಿಸಿ ಸರ್ಕಾರ ₹15 ಕೋಟಿ ಅನುದಾನ ಮಂಜೂರು ಮಾಡಿದ್ದರೂ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಕಾಮಗಾರಿ ಪ್ರಗತಿ ಕಂಡಿಲ್ಲ. ಈ ಯೋಜನೆಯ ಬಗ್ಗೆ ಯಾವುದೇ ಮಾಹಿತಿಯೂ ಸಿಗದಂತಾಗಿದೆ. ಶಾಶ್ವತ ಕುಡಿಯುವ ನೀರಿನ ಯೋಜನೆಯ ಕುರಿತು ವಿಧಾನಸಭೆ ಕಲಾಪದಲ್ಲಿ ಸ್ಥಳೀಯ ಶಾಸಕರು ಎರಡು ಬಾರಿ ಪ್ರಸ್ತಾವ ಮಾಡಿದ್ದರೂ ಸರ್ಕಾರ ಪರಿಹಾರ ಒದಗಿಸಿಲ್ಲ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-32-1293047551</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ</strong>: ರಾಯಚೂರು– ಲಿಂಗಸುಗೂರು ರಾಜ್ಯ ಹೆದ್ದಾರಿಗೆ ಹೊಂದಿಕೊಂಡ ತಾಲ್ಲೂಕಿನ ಅತ್ತನೂರು ಗ್ರಾಮದಲ್ಲಿ ವರ್ಷ ಪೂರ್ತಿ ಕುಡಿಯುವ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಇದೆ. ಇಲ್ಲಿನ ಸಮಸ್ಯೆ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದರೂ ಪರಿಹಾರ ಮಾತ್ರ ಸಿಕ್ಕಿಲ್ಲ.</p>.<p>ಗ್ರಾಮಸ್ಥರಿಗೆ 1 ಕಿ.ಮೀ ದೂರದ ಕೆರೆಯ ನೀರೇ ಗತಿಯಾಗಿದ್ದು ಅಲ್ಲಿಂದ ಪ್ರತಿದಿನ ಬೆಳಿಗ್ಗೆ ನೀರು ತರುವುದೇ ಕೆಲಸವಾಗಿದೆ. ಸೈಕಲ್, ಬಂಡಿ, ದ್ವಿಚಕ್ರ ವಾಹನಗಳ ಮೂಲಕ ನೀರು ತರಬೇಕಾಗಿದ್ದು ಬೇಸಿಗೆಯಲ್ಲಿ ಅರ್ಧ ದಿನ ನೀರಿಗಾಗಿ ಮೀಸಲಿಡಬೇಕಾದ ಅನಿವಾರ್ಯತೆ ಉಂಟಾಗುತ್ತದೆ.</p>.<p>‘ಗ್ರಾಮದಲ್ಲಿ ಕೊಳವೆಬಾವಿ ಮತ್ತು ಪೈಪ್ಲೈನ್ ವ್ಯವಸ್ಥೆ ಇದ್ದರೂ ಕೊಳವೆಬಾವಿ ನೀರು ಬಳಕೆಗೆ ಯೋಗ್ಯವಿಲ್ಲದ ಕಾರಣ ಕೆರೆ ನೀರು ಅನಿವಾರ್ಯವಾಗಿದೆ. ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಗಗನ ಕುಸುಮವಾಗಿದ್ದು ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸಂಕಷ್ಟ ಎದುರಿಸುವಂತಾಗಿದೆ’ ಎಂದು ಗ್ರಾಮಸ್ಥ ಮುತ್ತಣ್ಣ ಬಾರಿಕೇರ್ ಆರೋಪಿಸುತ್ತಾರೆ.</p>.<p>ಪೈಪ್ ಲೈನ್ ಮೂಲಕ ಕೆರೆ ನೀರು ಪೂರೈಸಬೇಕು ಎನ್ನುವ ಮನವಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಪಂದಿಸದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಶಾಶ್ವತ ಕುಡಿಯುವ ನೀರಿಗಾಗಿ ಗ್ರಾಮದಿಂದ 3 ಕಿ.ಮೀ ದೂರದಲ್ಲಿ ಸ್ಥಳ ಗುರುತಿಸಿ ಸರ್ಕಾರ ₹15 ಕೋಟಿ ಅನುದಾನ ಮಂಜೂರು ಮಾಡಿದ್ದರೂ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಕಾಮಗಾರಿ ಪ್ರಗತಿ ಕಂಡಿಲ್ಲ. ಈ ಯೋಜನೆಯ ಬಗ್ಗೆ ಯಾವುದೇ ಮಾಹಿತಿಯೂ ಸಿಗದಂತಾಗಿದೆ. ಶಾಶ್ವತ ಕುಡಿಯುವ ನೀರಿನ ಯೋಜನೆಯ ಕುರಿತು ವಿಧಾನಸಭೆ ಕಲಾಪದಲ್ಲಿ ಸ್ಥಳೀಯ ಶಾಸಕರು ಎರಡು ಬಾರಿ ಪ್ರಸ್ತಾವ ಮಾಡಿದ್ದರೂ ಸರ್ಕಾರ ಪರಿಹಾರ ಒದಗಿಸಿಲ್ಲ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-32-1293047551</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>