ರಾಯಚೂರಿನಿಂದ ಬೆಳಗಾವಿ 354 ಕಿಲೋ ಮೀಟರ್ ಉದ್ದದ ರಾಜ್ಯ ಹೆದ್ದಾರಿಯನ್ನು ಲೋಕೋಪಯೋಗಿ ಇಲಾಖೆಯು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ. ಪ್ರತಿವರ್ಷ ಮಳೆಗಾಲದ ನಂತರ ಗುಂಡಿಗಳನ್ನು ದುರಸ್ತಿ ಮಾಡುವುದಕ್ಕೆ ಯೋಜನೆ ರೂಪಿಸಲಾಗುತ್ತದೆ. ಈ ರಾಜ್ಯಹೆದ್ದಾರಿಯಲ್ಲಿ ನಿರ್ಮಾಣವಾದ ಗುಂಡಿಗಳನ್ನು ಮುಚ್ಚುವುದಕ್ಕೆಕಳೆದ ವರ್ಷವೇ ಯೋಜನೆ ಆಗಿತ್ತು. ಆದರೆ, ಅನುಷ್ಠಾನ ಮಾತ್ರ ಇನ್ನೂ ಆಗುತ್ತಿಲ್ಲ. ರಾಯಚೂರು ಜಿಲ್ಲಾ ಲೋಕೋಪಯೋಗಿ ಇಲಾಖೆಯಲ್ಲಿ ಒಂದು ವರ್ಷದಲ್ಲಿ ನಾಲ್ಕು ಜನ ಕಾರ್ಯನಿರ್ವಾಹಕ ಎಂಜಿನಿಯರುಗಳು ವರ್ಗಾವಣೆ ಆಗಿದ್ದಾರೆ.