<p><strong>ರಾಯಚೂರು</strong>: ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯ ಅಂಗಸುಗೂರು ರಸ್ತೆಯ ರಾಜ್ಯ ಹೆದ್ದಾರಿ ಸಂಖ್ಯೆ 20ರಿಂದ ರಾಷ್ಟ್ರೀಯ ಹೆದ್ದಾರಿ-167ರ ಮಂತ್ರಾಲಯದ ರಸ್ತೆವರೆಗೆ ಬೈಪಾಸ್ ಚತುಷ್ಪಥ ರಸ್ತೆ ನಿರ್ಮಾಣ ಮಾಡಲು ಅನುಮೋದನೆ ನೀಡಿ, 2026-27 ನೇ ಸಾಲಿನ ಆಯವ್ಯಯದಲ್ಲಿ ₹250 ಕೋಟಿ ಅನುದಾನ ಒದಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ವಸಂತಕುಮಾರ ಮನವಿ ಮಾಡಿದ್ದಾರೆ.</p>.<p>ಬೆಂಗಳೂರಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿದರು.</p>.<p>‘ಅಂಗಸುಗೂರಿನ ರಾಜ್ಯ ಹೆದ್ದಾರಿ ಮಾರ್ಗವಾಗಿ ನಿತ್ಯ ಸಾವಿರಾರು ಜನ ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ಹೋಗಿ ಬರುತ್ತಾರೆ. ಈ ಮಾರ್ಗದಲ್ಲಿ ಸಂಚಾರ ಒತ್ತಡವೂ ಅಧಿಕವಾಗಿದೆ. ರಾಜ್ಯ ಸರ್ಕಾರ ಚತುಷ್ಪಥ ನಿರ್ಮಾಣ ಮಾಡಿದರೆ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಿದೆ’ ಎಂದು ಕೇಳಿಕೊಂಡರು.</p>.<p>ಸಿಂಧನೂರು ಶಾಸಕ ಬಸನಗೌಡ ಬಾದರ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯ ಅಂಗಸುಗೂರು ರಸ್ತೆಯ ರಾಜ್ಯ ಹೆದ್ದಾರಿ ಸಂಖ್ಯೆ 20ರಿಂದ ರಾಷ್ಟ್ರೀಯ ಹೆದ್ದಾರಿ-167ರ ಮಂತ್ರಾಲಯದ ರಸ್ತೆವರೆಗೆ ಬೈಪಾಸ್ ಚತುಷ್ಪಥ ರಸ್ತೆ ನಿರ್ಮಾಣ ಮಾಡಲು ಅನುಮೋದನೆ ನೀಡಿ, 2026-27 ನೇ ಸಾಲಿನ ಆಯವ್ಯಯದಲ್ಲಿ ₹250 ಕೋಟಿ ಅನುದಾನ ಒದಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ವಸಂತಕುಮಾರ ಮನವಿ ಮಾಡಿದ್ದಾರೆ.</p>.<p>ಬೆಂಗಳೂರಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿದರು.</p>.<p>‘ಅಂಗಸುಗೂರಿನ ರಾಜ್ಯ ಹೆದ್ದಾರಿ ಮಾರ್ಗವಾಗಿ ನಿತ್ಯ ಸಾವಿರಾರು ಜನ ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ಹೋಗಿ ಬರುತ್ತಾರೆ. ಈ ಮಾರ್ಗದಲ್ಲಿ ಸಂಚಾರ ಒತ್ತಡವೂ ಅಧಿಕವಾಗಿದೆ. ರಾಜ್ಯ ಸರ್ಕಾರ ಚತುಷ್ಪಥ ನಿರ್ಮಾಣ ಮಾಡಿದರೆ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಿದೆ’ ಎಂದು ಕೇಳಿಕೊಂಡರು.</p>.<p>ಸಿಂಧನೂರು ಶಾಸಕ ಬಸನಗೌಡ ಬಾದರ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>