<p><strong>ರಾಯಚೂರು:</strong> ‘ಮಹಿಳೆಯರ ಹೆರಿಗೆ, ಮಕ್ಕಳ ಲಾಲನೆ-ಪಾಲನೆ, ವೈಯಕ್ತಿಕ ಆರೋಗ್ಯ ನಿರ್ವಹಣೆ ಹಾಗೂ ಮಹಿಳೆಯರಲ್ಲಿ ಮಾನಸಿಕ ಸ್ಥೈರ್ಯ ತುಂಬುವುದು ಕುಟುಂಬದ ಜವಾಬ್ದಾರಿಯಾಗಿದೆ. ಕಾರಣ ಬಾಲ್ಯವಿವಾಹ ಪ್ರಕರಣ ಶೂನ್ಯಕ್ಕಿಳಿಯಬೇಕಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ ಹೇಳಿದರು.</p>.<p>ಇಲ್ಲಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಸಂಘದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಬಾಲ್ಯದಲ್ಲಿಯೇ ಮಕ್ಕಳ ಮದುವೆ ಮಾಡುವುದರಿಂದ ಅಧಿಕ ಸಮಸ್ಯೆಗಳು ಉಲ್ಬಣಗೊಳ್ಳುತ್ತವೆ. ಆದ್ದರಿಂದ ಬಾಲ್ಯವಿವಾಹ ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಸೂಚಿಸಿದರು.</p>.<p>‘ಬಾಲ್ಯವಿವಾಹದಿಂದ ಮಕ್ಕಳಿಗೆ ಮೇಲಿಂದ ಮೇಲೆ ಕಾಯಿಲೆಗಳು ಬರುತ್ತವೆ. ಅಕಾಲಿಕ ಗರ್ಭಪಾತ, ಕೊರಳಿಗೆ ಹೊಕ್ಕಳು ಬಳ್ಳಿ ಸುತ್ತಿ ಮಗು ಜನಿಸುವುದು, ಶಿಶು ಮರಣ, ತಾಯಿ ಮರಣ ಮುಂತಾದವುಗಳ ಜೊತೆಗೆ ಕಾನೂನಾತ್ಮಕವಾಗಿ ಶಿಕ್ಷೆ ಇರುವ ಕುರಿತು ಸಾರ್ವಜನಿಕರಿಗೆ ತಿಳಿಹೇಳಬೇಕು’ ಎಂದರು.</p>.<p>‘ಹೆರಿಗೆ ನಂತರದಲ್ಲಿ ನವಜಾತ ಶಿಶುವಿಗೆ 12 ಮಾರಕ ರೋಗಗಳ ವಿರುದ್ಧ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯಕವಾಗುವ ಲಸಿಕೆಗಳನ್ನು ತೋಟದ ಮನೆಗಳು, ದೊಡ್ಡಿ, ಹಟ್ಟಿ, ತಾಂಡಾ, ಕ್ಯಾಂಪ್ಗಳಲ್ಲಿ ತಪ್ಪದೇ ನೀಡಬೇಕು. ಯಾರಾದರೂ ತಪ್ಪು ನಂಬಿಕೆ ಹೊಂದಿದ ಪಾಲಕರು ಇದ್ದರೆ ಅವರಿಗೆ ಸರಿಯಾಗಿ ಮನವರಿಕೆ ಮಾಡಬೇಕು’ ಎಂದು ಹೇಳಿದರು.</p>.<p>‘ಕಡಿಮೆ ತೂಕದ ಮಕ್ಕಳನ್ನು ಅಭಿಯಾನದ ರೂಪದಲ್ಲಿ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಜಂಟಿಯಾಗಿ ಗುರುತಿಸಿ ವೈದ್ಯಕೀಯ ಚಿಕಿತ್ಸೆ ಹಾಗೂ ಪೌಷ್ಟಿಕ ಆಹಾರ ಒದಗಿಸುವ ಹಾಗೂ ಅಪೌಷ್ಟಿಕ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡುವಲ್ಲಿ ನೆರವಾಗಬೇಕು’ ಎಂದು ತಿಳಿಸಿದರು.</p>.<p>‘ಹೆರಿಗೆ ನಂತರದಲ್ಲಿ ಜನನದ ಮಧ್ಯ ಅಂತರಕ್ಕಾಗಿ ಕುಟುಂಬ ಕಲ್ಯಾಣ ತಾತ್ಕಾಲಿಕ ವಿಧಾನ ಪಿಪಿಐಯುಸಿಡಿ ತಕ್ಷಣವೇ ಅಳವಡಿಕೆಗೆ ಒತ್ತು ನೀಡಲು ತಿಳಿಸಿದರು. ಅಲ್ಲದೆ, ಪುರುಷರಿಗೆ ಎನ್ಎಸ್ವಿ ಶಸ್ತ್ರಚಿಕಿತ್ಸೆ ಬಗ್ಗೆ ಹೆಚ್ಚಿನ ಜಾಗೃತಿ ನೀಡಿ ಹಾಗೂ ಶಸ್ತ್ರಚಿಕಿತ್ಸಾ ಶಿಬಿರಗಳನ್ನು ಎಲ್ಲ ತಾಲ್ಲೂಕುಗಳಲ್ಲಿ ಮಾಡಿಸಬೇಕು’ ಎಂದು ಹೇಳಿದರು.</p>.<p>ಪ್ರತಿ ಮಂಗಳವಾರ ಆಯುಷ್ಮಾನ್ ಆರೋಗ್ಯ ಶಿಬಿರಗಳನ್ನು ತಪ್ಪದೆ ಹಮ್ಮಿಕೊಂಡು ರಕ್ತದೊತ್ತಡ, ಸಕ್ಕರೆ ಕಾಯಿಲೆ ಸೇರಿದಂತೆ ಇತರೆ ಪರೀಕ್ಷೆ ಹಾಗೂ ಅಗತ್ಯ ಚಿಕಿತ್ಸೆ ನೀಡಬೇಕು. ಕ್ಷಯರೋಗ ಪತ್ತೆಗೆ ಇರುವ ಕಫ ಪರೀಕ್ಷೆ, ಟ್ರುನಾಟ್ ಹಾಗೂ ಸಿಬಿನಾಟ್ ಕೇಂದ್ರಗಳಲ್ಲಿ ಹೆಚ್ಚಿನ ಪರೀಕ್ಷೆ ಕೈಗೊಳ್ಳಬೇಕು ಎಂದು ಸಿಇಒ ಕಾಂದೂ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಶಂಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನ್ಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ, ಸಮಿತಿ ಸದಸ್ಯ ಕಾರ್ಯದರ್ಶಿ ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತಾ ಎಂ. ಎನ್, ಡಿ.ಎಸ್.ಒ ಡಾ.ಗಣೇಶ್, ಡಿ.ಎಫ್.ಡ.ಬ್ಲ್ಯುಒ ಡಾ.ಶಿವಕುಮಾರ, ಡಿ.ಟಿ.ಓ ಡಾ.ಮಹಮ್ಮದ್ ಶಾಕೀರ್, ಡಿ.ಎಮ್.ಓ ಡಾ.ಚಂದ್ರಶೇಖರಯ್ಯ ಸ್ವಾಮಿ, ಡಿ.ಎಲ್.ಓ ಡಾ.ಯಶೋದಾ, ವಿವಿಧ ತಾಲ್ಲೂಕು ಆರೋಗ್ಯಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಮಹಿಳೆಯರ ಹೆರಿಗೆ, ಮಕ್ಕಳ ಲಾಲನೆ-ಪಾಲನೆ, ವೈಯಕ್ತಿಕ ಆರೋಗ್ಯ ನಿರ್ವಹಣೆ ಹಾಗೂ ಮಹಿಳೆಯರಲ್ಲಿ ಮಾನಸಿಕ ಸ್ಥೈರ್ಯ ತುಂಬುವುದು ಕುಟುಂಬದ ಜವಾಬ್ದಾರಿಯಾಗಿದೆ. ಕಾರಣ ಬಾಲ್ಯವಿವಾಹ ಪ್ರಕರಣ ಶೂನ್ಯಕ್ಕಿಳಿಯಬೇಕಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ ಹೇಳಿದರು.</p>.<p>ಇಲ್ಲಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಸಂಘದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಬಾಲ್ಯದಲ್ಲಿಯೇ ಮಕ್ಕಳ ಮದುವೆ ಮಾಡುವುದರಿಂದ ಅಧಿಕ ಸಮಸ್ಯೆಗಳು ಉಲ್ಬಣಗೊಳ್ಳುತ್ತವೆ. ಆದ್ದರಿಂದ ಬಾಲ್ಯವಿವಾಹ ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಸೂಚಿಸಿದರು.</p>.<p>‘ಬಾಲ್ಯವಿವಾಹದಿಂದ ಮಕ್ಕಳಿಗೆ ಮೇಲಿಂದ ಮೇಲೆ ಕಾಯಿಲೆಗಳು ಬರುತ್ತವೆ. ಅಕಾಲಿಕ ಗರ್ಭಪಾತ, ಕೊರಳಿಗೆ ಹೊಕ್ಕಳು ಬಳ್ಳಿ ಸುತ್ತಿ ಮಗು ಜನಿಸುವುದು, ಶಿಶು ಮರಣ, ತಾಯಿ ಮರಣ ಮುಂತಾದವುಗಳ ಜೊತೆಗೆ ಕಾನೂನಾತ್ಮಕವಾಗಿ ಶಿಕ್ಷೆ ಇರುವ ಕುರಿತು ಸಾರ್ವಜನಿಕರಿಗೆ ತಿಳಿಹೇಳಬೇಕು’ ಎಂದರು.</p>.<p>‘ಹೆರಿಗೆ ನಂತರದಲ್ಲಿ ನವಜಾತ ಶಿಶುವಿಗೆ 12 ಮಾರಕ ರೋಗಗಳ ವಿರುದ್ಧ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯಕವಾಗುವ ಲಸಿಕೆಗಳನ್ನು ತೋಟದ ಮನೆಗಳು, ದೊಡ್ಡಿ, ಹಟ್ಟಿ, ತಾಂಡಾ, ಕ್ಯಾಂಪ್ಗಳಲ್ಲಿ ತಪ್ಪದೇ ನೀಡಬೇಕು. ಯಾರಾದರೂ ತಪ್ಪು ನಂಬಿಕೆ ಹೊಂದಿದ ಪಾಲಕರು ಇದ್ದರೆ ಅವರಿಗೆ ಸರಿಯಾಗಿ ಮನವರಿಕೆ ಮಾಡಬೇಕು’ ಎಂದು ಹೇಳಿದರು.</p>.<p>‘ಕಡಿಮೆ ತೂಕದ ಮಕ್ಕಳನ್ನು ಅಭಿಯಾನದ ರೂಪದಲ್ಲಿ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಜಂಟಿಯಾಗಿ ಗುರುತಿಸಿ ವೈದ್ಯಕೀಯ ಚಿಕಿತ್ಸೆ ಹಾಗೂ ಪೌಷ್ಟಿಕ ಆಹಾರ ಒದಗಿಸುವ ಹಾಗೂ ಅಪೌಷ್ಟಿಕ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡುವಲ್ಲಿ ನೆರವಾಗಬೇಕು’ ಎಂದು ತಿಳಿಸಿದರು.</p>.<p>‘ಹೆರಿಗೆ ನಂತರದಲ್ಲಿ ಜನನದ ಮಧ್ಯ ಅಂತರಕ್ಕಾಗಿ ಕುಟುಂಬ ಕಲ್ಯಾಣ ತಾತ್ಕಾಲಿಕ ವಿಧಾನ ಪಿಪಿಐಯುಸಿಡಿ ತಕ್ಷಣವೇ ಅಳವಡಿಕೆಗೆ ಒತ್ತು ನೀಡಲು ತಿಳಿಸಿದರು. ಅಲ್ಲದೆ, ಪುರುಷರಿಗೆ ಎನ್ಎಸ್ವಿ ಶಸ್ತ್ರಚಿಕಿತ್ಸೆ ಬಗ್ಗೆ ಹೆಚ್ಚಿನ ಜಾಗೃತಿ ನೀಡಿ ಹಾಗೂ ಶಸ್ತ್ರಚಿಕಿತ್ಸಾ ಶಿಬಿರಗಳನ್ನು ಎಲ್ಲ ತಾಲ್ಲೂಕುಗಳಲ್ಲಿ ಮಾಡಿಸಬೇಕು’ ಎಂದು ಹೇಳಿದರು.</p>.<p>ಪ್ರತಿ ಮಂಗಳವಾರ ಆಯುಷ್ಮಾನ್ ಆರೋಗ್ಯ ಶಿಬಿರಗಳನ್ನು ತಪ್ಪದೆ ಹಮ್ಮಿಕೊಂಡು ರಕ್ತದೊತ್ತಡ, ಸಕ್ಕರೆ ಕಾಯಿಲೆ ಸೇರಿದಂತೆ ಇತರೆ ಪರೀಕ್ಷೆ ಹಾಗೂ ಅಗತ್ಯ ಚಿಕಿತ್ಸೆ ನೀಡಬೇಕು. ಕ್ಷಯರೋಗ ಪತ್ತೆಗೆ ಇರುವ ಕಫ ಪರೀಕ್ಷೆ, ಟ್ರುನಾಟ್ ಹಾಗೂ ಸಿಬಿನಾಟ್ ಕೇಂದ್ರಗಳಲ್ಲಿ ಹೆಚ್ಚಿನ ಪರೀಕ್ಷೆ ಕೈಗೊಳ್ಳಬೇಕು ಎಂದು ಸಿಇಒ ಕಾಂದೂ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಶಂಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನ್ಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ, ಸಮಿತಿ ಸದಸ್ಯ ಕಾರ್ಯದರ್ಶಿ ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತಾ ಎಂ. ಎನ್, ಡಿ.ಎಸ್.ಒ ಡಾ.ಗಣೇಶ್, ಡಿ.ಎಫ್.ಡ.ಬ್ಲ್ಯುಒ ಡಾ.ಶಿವಕುಮಾರ, ಡಿ.ಟಿ.ಓ ಡಾ.ಮಹಮ್ಮದ್ ಶಾಕೀರ್, ಡಿ.ಎಮ್.ಓ ಡಾ.ಚಂದ್ರಶೇಖರಯ್ಯ ಸ್ವಾಮಿ, ಡಿ.ಎಲ್.ಓ ಡಾ.ಯಶೋದಾ, ವಿವಿಧ ತಾಲ್ಲೂಕು ಆರೋಗ್ಯಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>