ಜೂನ್ 26 ರಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಯಚೂರು ಪ್ರವಾಸಿ ಮಂದಿರದಿಂದ ಕರೇಗುಡ್ಡಕ್ಕೆ ಗ್ರಾಮವಾಸ್ತವ್ಯಕ್ಕಾಗಿ ಸರ್ಕಾರಿ ಬಸ್ನಲ್ಲಿ ತೆರಳುವಾಗ, ವೈಟಿಪಿಎಸ್ ಕಾರ್ಮಿಕರು ದಿಢೀರ್ ರಸ್ತೆ ತಡೆ ನಡೆಸಿದ್ದರು. ಇದನ್ನು ಭದ್ರತಾ ವೈಫಲ್ಯವೆಂದು ಪರಿಗಣಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಯರಗೇರಾ ವೃತ್ತದ ಸಿಪಿಐ ದತ್ತಾತ್ರೇಯ ಕಾರ್ನಾಡ್ ಮತ್ತು ರಾಯಚೂರು ಗ್ರಾಮೀಣ ಠಾಣೆಯ ಪಿಎಸ್ಐ ನಿಂಗಪ್ಪ ಅವರನ್ನು ಅಮಾನತು ಮಾಡಲಾಗಿತ್ತು. ಇದೀಗ ಸಿಪಿಐ ಅಮಾನತು ಆದೇಶ ಮಾತ್ರ ರದ್ದುಗೊಳಿಸಲಾಗಿದೆ.