<p>ರಾಯಚೂರು: ಪರಿಶಿಷ್ಟಜಾತಿಗಳ ಒಳ ಮೀಸಲಾತಿಗೆ ಸುಪ್ರಿಂಕೋರ್ಟ್ ನೀಡಿದ್ದ ತೀರ್ಪಿನ ಮೇರೆಗೆ ಉಪಜಾತಿಗಳ ಅಂಕಿ ಅಂಶಗಳೊಂದಿಗೆ ಕೆನೆಪದರ ಜಾರಿಗೆ ಸೂಚಿಸಿತ್ತು. ಅದೇ ಮಾದರಿಯಲ್ಲಿ ಕೆನೆಪದರ ಅನ್ವಯ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಡಾ.ಅಂಬೇಡ್ಕರ್ ಪಿಪಲ್ಸ್ ಪಾರ್ಟಿಯ ಕಾರ್ಯಾಧ್ಯಕ್ಷ ಮಹೇಂದ್ರ ಕುಮಾರ ಮಿತ್ರ ಒತ್ತಾಯಿಸಿದರು.</p>.<p>ಮೀಸಲಾತಿ ಹಂಚಿಕೆ ವಿಷಯವನ್ನಷ್ಟೇ ಸರ್ಕಾರ, ಆಯೋಗ ಗಮನಹರಿಸಿದೆ ಹೊರತು ಕೆನೆಪದರ ಅಳವಡಿಸಲು ಮುಂದಾಗುತ್ತಿಲ್ಲ ಎಂದು ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ದೂರಿದರು.</p>.<p>ನ್ಯಾಯಮೂರ್ತಿ ನಾಗಮೋಹನದಾಸ್ ನೀಡಿರುವ ವರದಿಯಲ್ಲಿ 101 ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ ಅಸಂವಿಧಾನಿಕವಾಗಿ ಸೇರ್ಪಡೆಗೊಂಡಿರುವ 12 ಸ್ಪಶ್ಯ ಜಾತಿಗಳನ್ನು (ಲಂಬಾಣಿ, ಭೋವಿ, ಕೊರಚ, ಕೊರಮ, ಬೇಡ, ಬುಡ್ಗ ಜಂಗಮ, ಭೈರಾಗಿ, ಹಂದಿ ಜೋಗಿಸ್, ಕೆಂಪಾರಿಸ್, ಶಿಳ್ಳೆಕ್ಯಾತ್, ಮೋಗೆ ಘಂಟಿಚೋರ್ಸ್) 341(2) ಪ್ರಕಾರ ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈ ಬಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿಲ್ಲ. ಸ್ಪಶ್ಯ ಜಾತಿಗಳನ್ನು ಎಸ್.ಸಿ ಪಟ್ಟಿಯಿಂದ ಕೈಬಿಡಲು ನ್ಯಾಯಮೂರ್ತಿ ಸಂತೋಷ ಹೆಗ್ಡೆ ನೇತೃತ್ವದಲ್ಲಿ ಆಯೋಗ ರಚಿಸಬೇಕು ಎಂದು ಒತ್ತಾಯಿಸಿದರು.</p>.<p>ಹುಸೇನ್ ಬಾಷಾ ಪಲಕನಮರಡಿ, ನರಸಿಂಹ ಗಧಾರ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-32-1500003081</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಪರಿಶಿಷ್ಟಜಾತಿಗಳ ಒಳ ಮೀಸಲಾತಿಗೆ ಸುಪ್ರಿಂಕೋರ್ಟ್ ನೀಡಿದ್ದ ತೀರ್ಪಿನ ಮೇರೆಗೆ ಉಪಜಾತಿಗಳ ಅಂಕಿ ಅಂಶಗಳೊಂದಿಗೆ ಕೆನೆಪದರ ಜಾರಿಗೆ ಸೂಚಿಸಿತ್ತು. ಅದೇ ಮಾದರಿಯಲ್ಲಿ ಕೆನೆಪದರ ಅನ್ವಯ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಡಾ.ಅಂಬೇಡ್ಕರ್ ಪಿಪಲ್ಸ್ ಪಾರ್ಟಿಯ ಕಾರ್ಯಾಧ್ಯಕ್ಷ ಮಹೇಂದ್ರ ಕುಮಾರ ಮಿತ್ರ ಒತ್ತಾಯಿಸಿದರು.</p>.<p>ಮೀಸಲಾತಿ ಹಂಚಿಕೆ ವಿಷಯವನ್ನಷ್ಟೇ ಸರ್ಕಾರ, ಆಯೋಗ ಗಮನಹರಿಸಿದೆ ಹೊರತು ಕೆನೆಪದರ ಅಳವಡಿಸಲು ಮುಂದಾಗುತ್ತಿಲ್ಲ ಎಂದು ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ದೂರಿದರು.</p>.<p>ನ್ಯಾಯಮೂರ್ತಿ ನಾಗಮೋಹನದಾಸ್ ನೀಡಿರುವ ವರದಿಯಲ್ಲಿ 101 ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ ಅಸಂವಿಧಾನಿಕವಾಗಿ ಸೇರ್ಪಡೆಗೊಂಡಿರುವ 12 ಸ್ಪಶ್ಯ ಜಾತಿಗಳನ್ನು (ಲಂಬಾಣಿ, ಭೋವಿ, ಕೊರಚ, ಕೊರಮ, ಬೇಡ, ಬುಡ್ಗ ಜಂಗಮ, ಭೈರಾಗಿ, ಹಂದಿ ಜೋಗಿಸ್, ಕೆಂಪಾರಿಸ್, ಶಿಳ್ಳೆಕ್ಯಾತ್, ಮೋಗೆ ಘಂಟಿಚೋರ್ಸ್) 341(2) ಪ್ರಕಾರ ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈ ಬಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿಲ್ಲ. ಸ್ಪಶ್ಯ ಜಾತಿಗಳನ್ನು ಎಸ್.ಸಿ ಪಟ್ಟಿಯಿಂದ ಕೈಬಿಡಲು ನ್ಯಾಯಮೂರ್ತಿ ಸಂತೋಷ ಹೆಗ್ಡೆ ನೇತೃತ್ವದಲ್ಲಿ ಆಯೋಗ ರಚಿಸಬೇಕು ಎಂದು ಒತ್ತಾಯಿಸಿದರು.</p>.<p>ಹುಸೇನ್ ಬಾಷಾ ಪಲಕನಮರಡಿ, ನರಸಿಂಹ ಗಧಾರ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-32-1500003081</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>