ನದಿಪಾತ್ರದ ಆತ್ಕೂರು ಹಾಗು ಡಿ.ರಾಂಪುರದಿಂದ ಗ್ರಾಮದ ಮೂಲಕ ನಡುಗಡ್ಡೆಯ ಐತಿಹಾಸಿಕ ದತ್ತಾತ್ರೇಯ ದೇವಸ್ಥಾನಕ್ಕೆ ತೆಪ್ಪದ ಮೂಲಕ ಭಕ್ತರು ತೆರಳಲುವಾಗ ಮೊಸಳೆಗಳ ಹಿಂಡು ಕಂಡು ಬೆಚ್ಚಿ ಬಿದ್ದಿದ್ದಾರೆ. ಭಕ್ತರು ತಮ್ಮ ಮೊಬೈಲ್ಗಳಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ.
ಆತ್ಕೂರು ಗ್ರಾಮದಿಂದ ನಡುಗಡ್ಡೆಯ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ಮೇಲ್ಸೇತುವೆ ಕಾಮಗಾರಿ ನನೆಗುದಿಗೆ ಬಿದ್ದಿದ್ದು ಇದರಿಂದಾಗಿ ತೆಪ್ಪದ ಸವಾರಿ ಅನಿವಾರ್ಯವಾಗಿದೆ. ಕಳೆದ ವರ್ಷ ಆತ್ಕೂರು ಗ್ರಾಮದಲ್ಲಿ ಬಾಲಕನೊಬ್ಬ ನೀರು ತುಂಬಿಕೊಳ್ಳುವಾಗ ಮೊಸಳೆ ದಾಳಿಯಿಂದ ಮೃತಪಟ್ಟಿದ್ದು ಈಗ ಮೊಸಳೆಗಳ ಪ್ರತ್ಯಕ್ಷ ಮತ್ತಷ್ಟು ಆತಂಕಗೊಳಿಸಿದೆ.