ಕೇಂದ್ರದ ಸಾರ್ವಜನಿಕ ಕುಂದುಕೊರತೆ, ಪಿಂಚಣಿ ಹಾಗೂ ಆಡಳಿತಾತ್ಮಕ ಸುಧಾರಣೆ ಇಲಾಖೆಯು ಕಳೆದ ಸೆಪ್ಟೆಂಬರ್ 4 ರಂದು ಆನ್ಲೈನ್ನಲ್ಲಿ ಈ ಬಗ್ಗೆ ಕಾರ್ಯಾಗಾರ ಆಯೋಜಿಸಿತ್ತು. ಅದರಲ್ಲಿ ಸಂಬಂಧಿತ ಇಲಾಖೆಯ ಸಚಿವರು, ನೀತಿ ಆಯೋಗದ ಕಾರ್ಯದರ್ಶಿ ಹಾಗೂ 117 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿ ಒಟ್ಟು 817 ಪ್ರತಿನಿಧಿಗಳು ಭಾಗಿಯಾಗಿದ್ದರು.