ಈ ಪ್ರದೇಶದಲ್ಲಿ ಸುಮಾರು 25 ವರ್ಷಗಳಿಂದ ಕಡು ಬಡವರು, ಹಿಂದುಳಿದವರು, ಅಲ್ಪಸಂಖ್ಯಾತ ವಾಸಿಸುತ್ತಿದ್ದು, ಇವರಿಗೆ ಹಕ್ಕುಪತ್ರ ನೀಡಿಲ್ಲ. ಜನರಿಗೆ ಸಮರ್ಪಕ ವಸತಿ, ಶೌಚಾಲಯ, ರಸ್ತೆ, ಕುಡಿಯುವ ನೀರು, ವಿದ್ಯುತ ಸೌಲಭ್ಯ ಇಲ್ಲದೆ ತೀವ್ರ ಸಮಸ್ಯೆಯಾಗಿದೆ. ಈ ಬಗ್ಗೆ ತಾಲ್ಲೂಕು ಕಚೇರಿ, ಪುರಸಭೆ ಹಾಗೂ ಜನ ಪ್ರತಿನಿಧಿಗಳಿಂದ ಮನವಿ ಸಲ್ಲಿಸಿದರು ಕೂಡ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.