<p>ಅರಕೇರಾ (ದೇವದುರ್ಗ): ವಿಷಪೂರಿತ ನೀರು ಕುಡಿದು 50ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹೆಗ್ಗಡದಿನ್ನಿ ಗ್ರಾಮದ ಬಳಿ ನಡೆದಿದೆ.</p>.<p>ಸಂಚಾರಿ ಕುರಿಗಾಹಿ ಭೀಮಪ್ಪ ಮಲ್ಲಿನಾಯಕನದೊಡ್ಡಿ ಅವರಿಗೆ ಈ ಕುರಿಗಳು ಸೇರಿವೆ. ಗುಂಡಿಯಲ್ಲಿ ಶೇಖರಣೆಯಾಗಿದ್ದ ನೀರನ್ನು 100 ಕುರಿಗಳು ಕುಡಿದಿದ್ದು, ಈ ಪೈಕಿ ಹೊಟ್ಟೆ ಉಬ್ಬಸದಿಂದ ಏಕಾಏಕಿ 50ಕ್ಕೂ ಹೆಚ್ಚು ಸಾವನ್ನಪ್ಪಿವೆ. ಬದುಕುಳಿದಿರುವ ಕುರಿಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ವಾಗುವ ಸಾಧ್ಯತೆ ಇದೆ ಎಂದು ಪಶು ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.</p>.<p>ಸುಮಾರು ₹5 ಲಕ್ಷ ಅಧಿಕ ನಷ್ಟವಾಗಿದ್ದು, ಕುರಿಗಾಹಿ ಕಣ್ಣೀರು ಹಾಕಿದರು. ನೀರಿನಲ್ಲಿ ಕ್ರಿಮಿನಾಶಕ ಬೆರೆಸಿರುವ ಶಂಕೆಯಿದ್ದು, ಸ್ಥಳಕ್ಕೆ ಗಬ್ಬೂರು ಠಾಣೆ ಪೊಲೀಸರು, ಪಶು ವೈದ್ಯಾಧಿಕಾರಿಗಳು, ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಸ್ಥಳಕ್ಕೆ ಶಾಸಕಿ ಕರೆಮ್ಮ ಜಿ ನಾಯಕ ಭೇಟಿ ನೀಡಿ ಕುರಿಗಾಹಿಗೆ ಸಾಂತ್ವನ ಹೇಳಿ ಸರ್ಕಾರದಿಂದ ಸೂಕ್ತ ಪರಿಹಾರ ಕೊಡುವ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಕೇರಾ (ದೇವದುರ್ಗ): ವಿಷಪೂರಿತ ನೀರು ಕುಡಿದು 50ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹೆಗ್ಗಡದಿನ್ನಿ ಗ್ರಾಮದ ಬಳಿ ನಡೆದಿದೆ.</p>.<p>ಸಂಚಾರಿ ಕುರಿಗಾಹಿ ಭೀಮಪ್ಪ ಮಲ್ಲಿನಾಯಕನದೊಡ್ಡಿ ಅವರಿಗೆ ಈ ಕುರಿಗಳು ಸೇರಿವೆ. ಗುಂಡಿಯಲ್ಲಿ ಶೇಖರಣೆಯಾಗಿದ್ದ ನೀರನ್ನು 100 ಕುರಿಗಳು ಕುಡಿದಿದ್ದು, ಈ ಪೈಕಿ ಹೊಟ್ಟೆ ಉಬ್ಬಸದಿಂದ ಏಕಾಏಕಿ 50ಕ್ಕೂ ಹೆಚ್ಚು ಸಾವನ್ನಪ್ಪಿವೆ. ಬದುಕುಳಿದಿರುವ ಕುರಿಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ವಾಗುವ ಸಾಧ್ಯತೆ ಇದೆ ಎಂದು ಪಶು ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.</p>.<p>ಸುಮಾರು ₹5 ಲಕ್ಷ ಅಧಿಕ ನಷ್ಟವಾಗಿದ್ದು, ಕುರಿಗಾಹಿ ಕಣ್ಣೀರು ಹಾಕಿದರು. ನೀರಿನಲ್ಲಿ ಕ್ರಿಮಿನಾಶಕ ಬೆರೆಸಿರುವ ಶಂಕೆಯಿದ್ದು, ಸ್ಥಳಕ್ಕೆ ಗಬ್ಬೂರು ಠಾಣೆ ಪೊಲೀಸರು, ಪಶು ವೈದ್ಯಾಧಿಕಾರಿಗಳು, ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಸ್ಥಳಕ್ಕೆ ಶಾಸಕಿ ಕರೆಮ್ಮ ಜಿ ನಾಯಕ ಭೇಟಿ ನೀಡಿ ಕುರಿಗಾಹಿಗೆ ಸಾಂತ್ವನ ಹೇಳಿ ಸರ್ಕಾರದಿಂದ ಸೂಕ್ತ ಪರಿಹಾರ ಕೊಡುವ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>