<p><strong>ರಾಯಚೂರು: </strong>ನಗರದಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿ ಬಹುಮಹಡಿ ಕಟ್ಟಡಗಳನ್ನು ನಿರ್ಮಾಣ ಮಾಡಿರುವ ಮಾಲೀಕರಿಗೆ ಕೂಡಲೇ ನೋಟಿಸ್ ಜಾರಿಗೊಳಿಸಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೈ.ಗೋಪಾಲರೆಡ್ಡಿ ಸೂಚಿಸಿದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ನಗರದಲ್ಲಿ ಯಾವುದೇ ಬಡಾವಣೆಗೆ ಅನುಮೋದನೆ ನೀಡುವ ಮೊದಲು ಅಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಮಾಡಲಾಗಿದೆಯೇ ಎಂಬುದನ್ನು ಪರಿಶೀಲಿಸುವುದು ಕಡ್ಡಾಯ. ಎಂಜಿನಿಯರುಗಳು ಖುದ್ದಾಗಿ ಪರಿಶೀಲಿಸದೆ ಅನುಮೋದಿಸಿದರೆ ಕ್ರಮ ಕೈಗೊಳ್ಳಲಾಗುವುದು. ಇನ್ನು ಮೇಲಾದರೂ ನಗರವನ್ನು ಸುಂದರಗೊಳಿಸಲು ಮುಂದಾಗಬೇಕಿದೆ ಎಂದು ತಿಳಿಸಿದರು.</p>.<p>ಹೊಸ ಹೊಸ ಬಡಾವಣೆಗಳ ಅಭಿವೃದ್ಧಿಗಾಗಿ ಸಲ್ಲಿಕೆಯಾಗುವ ವಿನ್ಯಾಸಗಳನ್ನು ಕಣ್ಣುಮುಚ್ಚಿ ಅನುಮೋದಿಸಬಾರದು. ನಿಯಮಗಳು ಪಾಲನೆ ಆಗಿದೆಯೋ ಇಲ್ಲವೋ ಎಂಬುದನ್ನು ಖಚಿತ ಮಾಡಿಕೊಳ್ಳಬೇಕು ಎಂದು ಹೇಳಿದರು.</p>.<p>ಸದಸ್ಯ ಎ.ಚಂದ್ರಶೇಖರ್ ಮಾತನಾಡಿ, ವಾಹನಗಳ ನಿಲುಗಡೆ ಹಾಗೂ ಹೆಚ್ಚುವರಿ ಜಾಗ ಬಿಡುವ ನಿಯಮಗಳ ಪಾಲನೆ ಆಗುತ್ತಿಲ್ಲ. ಅಧಿಕಾರಿಗಳು ಇದನ್ನು ಗಮನಿಸಬೇಕು ಎಂದರು.</p>.<p>ಸದಸ್ಯ ಭೀಮಣ್ಣಾ ಮಾತನಾಡಿ, ನಗರದ ವಿವಿಧ ಬಡಾವಣೆಗಳಲ್ಲಿ ಉದ್ಯಾನಕ್ಕಾಗಿ ಮೀಸಲಿಟ್ಟ ಜಾಗಗಳಲ್ಲಿ ನಿವೇಶನಗಳನ್ನು ಅಭಿವೃದ್ಧಿ ಮಾಡಿದ್ದಾರೆ. ಕೆಲವು ಕಡೆಗಳಲ್ಲಿ ಮನೆಗಳನ್ನು ಕಟ್ಟುತ್ತಿದ್ದಾರೆ. ಕೂಡಲೇ ಅನಧಿಕೃತ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.</p>.<p>ಸದಸ್ಯ ಶೇಖರ್ ವಾರದ್ ಮಾತನಾಡಿ, ಲೇಔಟ್ಗಳಲ್ಲಿ ನಾಗರಿಕ ಸೌಲಭ್ಯಗಳಿಗಾಗಿ ಕೆಲವು ನಿವೇಶನಗಳನ್ನು ಮೀಸಲು ಇಡಲಾಗಿದೆ. ವಾಸ್ತವದಲ್ಲಿ ಆ ನಿವೇಶನಗಳೆಲ್ಲವೂ ಅತಿಕ್ರಮಣಗೊಂಡಿವೆ. ಅವುಗಳನ್ನು ನಗರಾಭಿವೃದ್ಧಿ ಪ್ರಾಧಿಕಾರದ ವಶಕ್ಕೆ ಪಡೆದುಕೊಳ್ಳಬೇಕು ಎಂದು ಹೇಳಿದರು.</p>.<p>ಬೊಳಮಾನದೊಡ್ಡಿ ಮಾರ್ಗದಲ್ಲಿ ಅಭಿವೃದ್ಧಿ ಮಾಡಿರುವ ಪ್ರಾಧಿಕಾರದ ಬಡಾವಣೆಯಲ್ಲಿ, ಬಾಕಿ ಇರುವ ನಿವೇಶನಗಳನ್ನು ಹಂಚಿಕೆ ಮಾಡುವ ಬಗ್ಗೆ ಮತ್ತು ನಾಲ್ಕು ಉದ್ಯಾನಗಳನ್ನು ಅಭಿವೃದ್ಧಿ ಮಾಡುವ ಕುರಿತು ಚರ್ಚಿಸಲಾಯಿತು.</p>.<p>ಸದಸ್ಯೆ ವಾಣಿಶ್ರೀ, ಪೌರಾಯುಕ್ತ ಡಾ.ದೇವಾನಂದ ದೊಡ್ಡಮನಿ, ಪ್ರಾಧಿಕಾರದ ಆಯುಕ್ತ ಶರಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ನಗರದಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿ ಬಹುಮಹಡಿ ಕಟ್ಟಡಗಳನ್ನು ನಿರ್ಮಾಣ ಮಾಡಿರುವ ಮಾಲೀಕರಿಗೆ ಕೂಡಲೇ ನೋಟಿಸ್ ಜಾರಿಗೊಳಿಸಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೈ.ಗೋಪಾಲರೆಡ್ಡಿ ಸೂಚಿಸಿದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ನಗರದಲ್ಲಿ ಯಾವುದೇ ಬಡಾವಣೆಗೆ ಅನುಮೋದನೆ ನೀಡುವ ಮೊದಲು ಅಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಮಾಡಲಾಗಿದೆಯೇ ಎಂಬುದನ್ನು ಪರಿಶೀಲಿಸುವುದು ಕಡ್ಡಾಯ. ಎಂಜಿನಿಯರುಗಳು ಖುದ್ದಾಗಿ ಪರಿಶೀಲಿಸದೆ ಅನುಮೋದಿಸಿದರೆ ಕ್ರಮ ಕೈಗೊಳ್ಳಲಾಗುವುದು. ಇನ್ನು ಮೇಲಾದರೂ ನಗರವನ್ನು ಸುಂದರಗೊಳಿಸಲು ಮುಂದಾಗಬೇಕಿದೆ ಎಂದು ತಿಳಿಸಿದರು.</p>.<p>ಹೊಸ ಹೊಸ ಬಡಾವಣೆಗಳ ಅಭಿವೃದ್ಧಿಗಾಗಿ ಸಲ್ಲಿಕೆಯಾಗುವ ವಿನ್ಯಾಸಗಳನ್ನು ಕಣ್ಣುಮುಚ್ಚಿ ಅನುಮೋದಿಸಬಾರದು. ನಿಯಮಗಳು ಪಾಲನೆ ಆಗಿದೆಯೋ ಇಲ್ಲವೋ ಎಂಬುದನ್ನು ಖಚಿತ ಮಾಡಿಕೊಳ್ಳಬೇಕು ಎಂದು ಹೇಳಿದರು.</p>.<p>ಸದಸ್ಯ ಎ.ಚಂದ್ರಶೇಖರ್ ಮಾತನಾಡಿ, ವಾಹನಗಳ ನಿಲುಗಡೆ ಹಾಗೂ ಹೆಚ್ಚುವರಿ ಜಾಗ ಬಿಡುವ ನಿಯಮಗಳ ಪಾಲನೆ ಆಗುತ್ತಿಲ್ಲ. ಅಧಿಕಾರಿಗಳು ಇದನ್ನು ಗಮನಿಸಬೇಕು ಎಂದರು.</p>.<p>ಸದಸ್ಯ ಭೀಮಣ್ಣಾ ಮಾತನಾಡಿ, ನಗರದ ವಿವಿಧ ಬಡಾವಣೆಗಳಲ್ಲಿ ಉದ್ಯಾನಕ್ಕಾಗಿ ಮೀಸಲಿಟ್ಟ ಜಾಗಗಳಲ್ಲಿ ನಿವೇಶನಗಳನ್ನು ಅಭಿವೃದ್ಧಿ ಮಾಡಿದ್ದಾರೆ. ಕೆಲವು ಕಡೆಗಳಲ್ಲಿ ಮನೆಗಳನ್ನು ಕಟ್ಟುತ್ತಿದ್ದಾರೆ. ಕೂಡಲೇ ಅನಧಿಕೃತ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.</p>.<p>ಸದಸ್ಯ ಶೇಖರ್ ವಾರದ್ ಮಾತನಾಡಿ, ಲೇಔಟ್ಗಳಲ್ಲಿ ನಾಗರಿಕ ಸೌಲಭ್ಯಗಳಿಗಾಗಿ ಕೆಲವು ನಿವೇಶನಗಳನ್ನು ಮೀಸಲು ಇಡಲಾಗಿದೆ. ವಾಸ್ತವದಲ್ಲಿ ಆ ನಿವೇಶನಗಳೆಲ್ಲವೂ ಅತಿಕ್ರಮಣಗೊಂಡಿವೆ. ಅವುಗಳನ್ನು ನಗರಾಭಿವೃದ್ಧಿ ಪ್ರಾಧಿಕಾರದ ವಶಕ್ಕೆ ಪಡೆದುಕೊಳ್ಳಬೇಕು ಎಂದು ಹೇಳಿದರು.</p>.<p>ಬೊಳಮಾನದೊಡ್ಡಿ ಮಾರ್ಗದಲ್ಲಿ ಅಭಿವೃದ್ಧಿ ಮಾಡಿರುವ ಪ್ರಾಧಿಕಾರದ ಬಡಾವಣೆಯಲ್ಲಿ, ಬಾಕಿ ಇರುವ ನಿವೇಶನಗಳನ್ನು ಹಂಚಿಕೆ ಮಾಡುವ ಬಗ್ಗೆ ಮತ್ತು ನಾಲ್ಕು ಉದ್ಯಾನಗಳನ್ನು ಅಭಿವೃದ್ಧಿ ಮಾಡುವ ಕುರಿತು ಚರ್ಚಿಸಲಾಯಿತು.</p>.<p>ಸದಸ್ಯೆ ವಾಣಿಶ್ರೀ, ಪೌರಾಯುಕ್ತ ಡಾ.ದೇವಾನಂದ ದೊಡ್ಡಮನಿ, ಪ್ರಾಧಿಕಾರದ ಆಯುಕ್ತ ಶರಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>