ಆದರೆ, ನಿರೀಕ್ಷಿಸಿದಂತೆ ಕೃಷ್ಣಾನದಿಯಲ್ಲಿ ಪ್ರವಾಹ ಏರಿಕೆ ಆಗಿಲ್ಲ. ಇನ್ನೂ ಇಳಿಮುಖವಾಗಿದೆ. ನಾರಾಯಣಪುರ ಜಲಾಶಯದಿಂದ ಕೃಷ್ಣಾನದಿಗೆ ಹೊರಬಿಡುತ್ತಿದ್ದ ನೀರಿನ ಪ್ರಮಾಣ 6 ಸಾವಿರ ಕ್ಯುಸೆಕ್ಗೆ ತಲುಪಿದ್ದರೆ, ಚಿತ್ತಾಪುರ ತಾಲ್ಲೂಕಿನ ಸನ್ನತಿ ಬ್ಯಾರೇಜ್ನಿಂದ ಭೀಮಾನದಿಗೆ 3.7 ಲಕ್ಷ ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ. ಪ್ರವಾಹ ಒಂದು ಭಾಗದಲ್ಲಿ ಕಡಿಮೆಯಾಗಿದ್ದು, ಇನ್ನೊಂದು ಕಡೆ ಹೆಚ್ಚಳವಾದರೂ ನದಿತೀರದಲ್ಲಿ ಯಾವುದೇ ಅಪಾಯವಿಲ್ಲ. ಕೃಷ್ಣಾನದಿಯಲ್ಲಿ 4 ರಿಂದ 5 ಲಕ್ಷ ಕ್ಯುಸೆಕ್ ಪ್ರವಾಹ ಪ್ರತಿವರ್ಷವೂ ಸಾಮಾನ್ಯವಾಗಿ ಹರಿಯುತ್ತದೆ.