<p><strong>ರಾಯಚೂರು:</strong> ಜಿಲ್ಲಾ ನ್ಯಾಯಾಲಯ ಆವರಣದ ಬಳಿ ನಡೆದ ಗಣರಾಜ್ಯೋತ್ಸವ ಆಚರಣೆಯ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಅಗೌರವ ತೋರಿದ ಜಿಲ್ಲಾ ಪ್ರಧಾನ ಹಾಘೂ ಸತ್ರ ನ್ಯಾಯಾಧೀಶರ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ರಾಯಚೂರು ಜಿಲ್ಲಾ ನ್ಯಾಯವಾದಿಗಳ ಸಂಘದ ನೇತೃತ್ವದಲ್ಲಿ ವಕೀಲರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.</p>.<p>ಗಣರಾಜ್ಯೋತ್ಸವ ಆಚರಣೆಯ ವೇಳೆ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟಾಗ ಜಿಲ್ಲಾ ನ್ಯಾಯಾಧೀಶರು ಅಂಬೇಡ್ಕರ್ ಅವರ ಭಾವಚಿತ್ರ ತೆಗೆದರೆ ಮಾತ್ರ ಧ್ವಜಾರೋಹಣ ಮಾಡುತ್ತೇನೆ ಎಂದು ಧ್ವಜ ಸ್ತಂಭದಲ್ಲಿ ಇಟ್ಟ ಫೋಟೋ ತೆಗೆದಿರಿಸಿ ಆನಂತರ ಧ್ವಜಾರೋಹಣ ಮಾಡಿದ ಘಟನೆ ಖಂಡನೀಯ.</p>.<p>ಜಿಲ್ಲಾ ನ್ಯಾಯಧೀಶರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಸೇವೆಯಿಂದ ವಜಾಗೊಳಿಸಬೇಕು. ಉಚ್ಛ ನ್ಯಾಯಾಲಯದ ಅಧೀನ ನ್ಯಾಯಾಲಯದಲ್ಲಿ ಬರುವ ಎಲ್ಲಾ ನ್ಯಾಯಾಲಯಗಳಲ್ಲಿ ಕಡ್ಡಾಯವಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಬೇಕು ಎಂದು ಒತ್ತಾಯಿಸಿದರು.</p>.<p>ಪ್ರತಿಭಟನೆಯಲ್ಲಿ ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಜೆ.ಬಸವರಾಜ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಯಕ, ಎಸ್. ಮಾರೆಪ್ಪ, ಕರುಣಾಕರ ಕಟ್ಟಿಮನಿ, ಲಕ್ಷ್ಮಣ, ಶಿವಕುಮಾರ ಮ್ಯಾಗಳಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಜಿಲ್ಲಾ ನ್ಯಾಯಾಲಯ ಆವರಣದ ಬಳಿ ನಡೆದ ಗಣರಾಜ್ಯೋತ್ಸವ ಆಚರಣೆಯ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಅಗೌರವ ತೋರಿದ ಜಿಲ್ಲಾ ಪ್ರಧಾನ ಹಾಘೂ ಸತ್ರ ನ್ಯಾಯಾಧೀಶರ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ರಾಯಚೂರು ಜಿಲ್ಲಾ ನ್ಯಾಯವಾದಿಗಳ ಸಂಘದ ನೇತೃತ್ವದಲ್ಲಿ ವಕೀಲರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.</p>.<p>ಗಣರಾಜ್ಯೋತ್ಸವ ಆಚರಣೆಯ ವೇಳೆ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟಾಗ ಜಿಲ್ಲಾ ನ್ಯಾಯಾಧೀಶರು ಅಂಬೇಡ್ಕರ್ ಅವರ ಭಾವಚಿತ್ರ ತೆಗೆದರೆ ಮಾತ್ರ ಧ್ವಜಾರೋಹಣ ಮಾಡುತ್ತೇನೆ ಎಂದು ಧ್ವಜ ಸ್ತಂಭದಲ್ಲಿ ಇಟ್ಟ ಫೋಟೋ ತೆಗೆದಿರಿಸಿ ಆನಂತರ ಧ್ವಜಾರೋಹಣ ಮಾಡಿದ ಘಟನೆ ಖಂಡನೀಯ.</p>.<p>ಜಿಲ್ಲಾ ನ್ಯಾಯಧೀಶರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಸೇವೆಯಿಂದ ವಜಾಗೊಳಿಸಬೇಕು. ಉಚ್ಛ ನ್ಯಾಯಾಲಯದ ಅಧೀನ ನ್ಯಾಯಾಲಯದಲ್ಲಿ ಬರುವ ಎಲ್ಲಾ ನ್ಯಾಯಾಲಯಗಳಲ್ಲಿ ಕಡ್ಡಾಯವಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಬೇಕು ಎಂದು ಒತ್ತಾಯಿಸಿದರು.</p>.<p>ಪ್ರತಿಭಟನೆಯಲ್ಲಿ ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಜೆ.ಬಸವರಾಜ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಯಕ, ಎಸ್. ಮಾರೆಪ್ಪ, ಕರುಣಾಕರ ಕಟ್ಟಿಮನಿ, ಲಕ್ಷ್ಮಣ, ಶಿವಕುಮಾರ ಮ್ಯಾಗಳಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>