ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಜಿಲ್ಲೆಗೆ ಆಮ್ಲಜನಕ ಹಂಚಿಕೆಗಾಗಿ ಡಿಸಿ ಪತ್ರ

Last Updated 7 ಮೇ 2021, 15:31 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮತ್ತು 28 ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದ ಕೋವಿಡ್‌ ಸೋಂಕಿತರಿಗೆ 10.38 ಟನ್‌ ಆಮ್ಲಜನಕ ಹಂಚಿಕೆ ಮಾಡಲಾಗಿದೆ. ಆದರೆ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಜಿಲ್ಲೆಗೆ ಹೆಚ್ಚು ಆಮ್ಲಜನಕ ಹಂಚಿಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಕೋರಿದ್ದಾರೆ.

ಜಿಲ್ಲೆಯಲ್ಲಿ ಮೂರು ಆಮ್ಲಜನಕ ರಿಫಿಲ್ಲಿಂಗ್‌ ಘಟಕಗಳಿದ್ದು, ಯಾದಗಿರಿ ಮತ್ತು ಕಲಬುರ್ಗಿ ಜಿಲ್ಲೆಗಳು ಇವುಗಳ ಮೇಲೆ ಅವಲಂಬಿತವಾಗಿವೆ. ರಾಯಚೂರು ಜಿಲ್ಲೆಯ 50 ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 300 ಹಾಸಿಗೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಗೆ ಒಟ್ಟು 20 ರಿಂದ 25 ಮೆಟ್ರಿಕ್‌ ಟನ್‌ ಆಮ್ಲಜನಕ ಅಗತ್ಯವಿದೆ. ಕನಿಷ್ಠ ಈಗಿರುವ ಆಮ್ಲಜನಕ ಹಂಚಿಕೆ ಪ್ರಮಾಣವನ್ನು 15 ಮೆಟ್ರಿಕ್‌ ಟನ್‌ಗೆ ಹೆಚ್ಚಿಸಬೇಕು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT