<p>ರಾಯಚೂರು: ‘ಬಾಬಾಸಾಹೇಬರು ಅಸಮಾನತೆಯಿಂದ ಬಳಲುತ್ತಿದ್ದ ಸಮಾಜವನ್ನು ನೋಡಿ ಸುಮ್ಮನಿರಲಾಗದೆ ಇಂಥದೊಂದು ಸಂಘರ್ಷದ, ಹೋರಾಟದ ದಾರಿಯನ್ನು ಆಯ್ಕೆ ಮಾಡಿಕೊಂಡಿದ್ದರು’ ಎಂದು ರಾಜ್ಯಸಭಾ ಮಾಜಿ ಸದಸ್ಯ ಎಲ್.ಹನುಮಂತಯ್ಯ ಅಭಿಪ್ರಾಯಪಟ್ಟರು.</p>.<p>ಆದಿಕವಿ ಶ್ರೀ ಮಹಿರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಡಾ.ಬಾಬಾಸಾಹೇಬ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.</p>.<p>‘ಆಧುನಿಕ ಕಾಲಘಟ್ಟದಲ್ಲೂ, ಸಾಮಾಜಿಕ ವಾತಾವರಣ ಸುಧಾರಿಸದೆ ಇನ್ನೂ ಅಸ್ಪೃಶ್ಯತೆ ಜೀವಂತಇದೆ’ ಎಂದು ಹೇಳಿದರು.</p>.<p>‘ಅಂಬೇಡ್ಕರ್ ಮಂಡಿಸಿದ ಹಿಂದೂ ಕೋಡ್ಬಿಲ್ ದೇಶದ ಎಲ್ಲ ವರ್ಗದ ಮಹಿಳೆಯರಿಗೆ ಅನುಕೂಲವಾಯಿತು. ಈ ಬಿಲ್ ಮಹಿಳೆಯರಿಗೆ ಆಸ್ತಿಯಲ್ಲಿ ಪಾಲು ಸಿಗಬೇಕು ಎಂದು ಪ್ರತಿಪಾದಿಸಿತು. ವಿಧವಾ ವಿವಾಹ ಪದ್ಧತಿ ಜಾರಿಗೊಳಿಸುವ ಮೊದಲ ಪ್ರಯತ್ನ ಮಾಡಿದ್ದು ಅಂಬೇಡ್ಕರ್. ಅವರು ತಳಸಮುದಾಯಗಳ ಮೀಸಲಾತಿಗಾಗಿಯಷ್ಟೇ ಹೋರಾಟ ಮಾಡಲಿಲ್ಲ, ದೇಶದ ಎಲ್ಲ ಜನರ ಒಳಿತಿಗಾಗಿ ಹೋರಾಡಿದರು’ ಎಂದರು.</p>.<p>ಅಧ್ಯಕ್ಷತೆವಹಿಸಿದ್ದ ಕುಲಪತಿ ಪ್ರೊ. ಶಿವಾನಂದ ಕೆಳಗಿನಮನಿ ಮಾತನಾಡಿದರು.</p>.<p>ಕುಲಸಚಿವ ಡಾ.ಎ.ಚೆನ್ನಪ್ಪ, ಮೌಲ್ಯಮಾಪನ ಕುಲಸಚಿವರಾದ ಪ್ರೊ. ಜ್ಯೋತಿ ಧಮ್ಮಪ್ರಕಾಶ್, ಹಣಕಾಸು ಅಧಿಕಾರಿಗಾಯತ್ರಿ ಉಪಸ್ಥಿತರಿದ್ದರು. ಎನ್ಎಸ್ಎಸ್ ಅಧಿಕಾರಿ ಡಾ.ಜಿ.ಎಸ್.ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಜಯಂತಿ ನಿಮಿತ್ತ ‘ಡಾ.ಬಾಬಾಸಾಹೇಬ್ ಅಂಬೇಡ್ಕರ್ರವರ ಚಿಂತನೆಗಳು ಮತ್ತು ಸಮಕಾಲೀನ ಭಾರತ’ ವಿಷಯ ಕುರಿತು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವೆಂಕಟೇಶ ಎನ್., ಶಿವರಾಜ, ಸಂಗೀತ ನಾಯಕ, ವೆಂಕಟೇಶ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಉಪನ್ಯಾಸಕ ದುರುಗಪ್ಪ ಗಣೇಕಲ್ ಸ್ವಾಗತಿಸಿದರು. ಉಪನ್ಯಾಸಕಿ ಶಿವಲೀಲಾ ನಿರೂಪಿಸಿದರು. ಡಾ. ಪದ್ಮಜಾ ದೇಸಾಯಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-32-295786261</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ‘ಬಾಬಾಸಾಹೇಬರು ಅಸಮಾನತೆಯಿಂದ ಬಳಲುತ್ತಿದ್ದ ಸಮಾಜವನ್ನು ನೋಡಿ ಸುಮ್ಮನಿರಲಾಗದೆ ಇಂಥದೊಂದು ಸಂಘರ್ಷದ, ಹೋರಾಟದ ದಾರಿಯನ್ನು ಆಯ್ಕೆ ಮಾಡಿಕೊಂಡಿದ್ದರು’ ಎಂದು ರಾಜ್ಯಸಭಾ ಮಾಜಿ ಸದಸ್ಯ ಎಲ್.ಹನುಮಂತಯ್ಯ ಅಭಿಪ್ರಾಯಪಟ್ಟರು.</p>.<p>ಆದಿಕವಿ ಶ್ರೀ ಮಹಿರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಡಾ.ಬಾಬಾಸಾಹೇಬ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.</p>.<p>‘ಆಧುನಿಕ ಕಾಲಘಟ್ಟದಲ್ಲೂ, ಸಾಮಾಜಿಕ ವಾತಾವರಣ ಸುಧಾರಿಸದೆ ಇನ್ನೂ ಅಸ್ಪೃಶ್ಯತೆ ಜೀವಂತಇದೆ’ ಎಂದು ಹೇಳಿದರು.</p>.<p>‘ಅಂಬೇಡ್ಕರ್ ಮಂಡಿಸಿದ ಹಿಂದೂ ಕೋಡ್ಬಿಲ್ ದೇಶದ ಎಲ್ಲ ವರ್ಗದ ಮಹಿಳೆಯರಿಗೆ ಅನುಕೂಲವಾಯಿತು. ಈ ಬಿಲ್ ಮಹಿಳೆಯರಿಗೆ ಆಸ್ತಿಯಲ್ಲಿ ಪಾಲು ಸಿಗಬೇಕು ಎಂದು ಪ್ರತಿಪಾದಿಸಿತು. ವಿಧವಾ ವಿವಾಹ ಪದ್ಧತಿ ಜಾರಿಗೊಳಿಸುವ ಮೊದಲ ಪ್ರಯತ್ನ ಮಾಡಿದ್ದು ಅಂಬೇಡ್ಕರ್. ಅವರು ತಳಸಮುದಾಯಗಳ ಮೀಸಲಾತಿಗಾಗಿಯಷ್ಟೇ ಹೋರಾಟ ಮಾಡಲಿಲ್ಲ, ದೇಶದ ಎಲ್ಲ ಜನರ ಒಳಿತಿಗಾಗಿ ಹೋರಾಡಿದರು’ ಎಂದರು.</p>.<p>ಅಧ್ಯಕ್ಷತೆವಹಿಸಿದ್ದ ಕುಲಪತಿ ಪ್ರೊ. ಶಿವಾನಂದ ಕೆಳಗಿನಮನಿ ಮಾತನಾಡಿದರು.</p>.<p>ಕುಲಸಚಿವ ಡಾ.ಎ.ಚೆನ್ನಪ್ಪ, ಮೌಲ್ಯಮಾಪನ ಕುಲಸಚಿವರಾದ ಪ್ರೊ. ಜ್ಯೋತಿ ಧಮ್ಮಪ್ರಕಾಶ್, ಹಣಕಾಸು ಅಧಿಕಾರಿಗಾಯತ್ರಿ ಉಪಸ್ಥಿತರಿದ್ದರು. ಎನ್ಎಸ್ಎಸ್ ಅಧಿಕಾರಿ ಡಾ.ಜಿ.ಎಸ್.ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಜಯಂತಿ ನಿಮಿತ್ತ ‘ಡಾ.ಬಾಬಾಸಾಹೇಬ್ ಅಂಬೇಡ್ಕರ್ರವರ ಚಿಂತನೆಗಳು ಮತ್ತು ಸಮಕಾಲೀನ ಭಾರತ’ ವಿಷಯ ಕುರಿತು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವೆಂಕಟೇಶ ಎನ್., ಶಿವರಾಜ, ಸಂಗೀತ ನಾಯಕ, ವೆಂಕಟೇಶ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಉಪನ್ಯಾಸಕ ದುರುಗಪ್ಪ ಗಣೇಕಲ್ ಸ್ವಾಗತಿಸಿದರು. ಉಪನ್ಯಾಸಕಿ ಶಿವಲೀಲಾ ನಿರೂಪಿಸಿದರು. ಡಾ. ಪದ್ಮಜಾ ದೇಸಾಯಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-32-295786261</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>