<p><strong>ರಾಯಚೂರು:</strong> ‘ನಾಸು ಹರ್ಡೀಕರ್ ಅವರ ಸೇವಾ ಮನೋಭಾವ ಇಂದಿನ ಯುವಜನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ನಳಂದ ಡಿ.ಇಡಿ ಕಾಲೇಜಿನ ಪ್ರಾಚಾರ್ಯ ಚಂದ್ರಯ್ಶ ಬಾಡಿಯಾಲ ಹೇಳಿದರು.</p>.<p>ತಾಲ್ಲೂಕಿನ ಯರಮರಸ್ನ ನಳಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಭಾರತ ಸೇವಾದಳ ಜಿಲ್ಲಾ ಸಮಿತಿ ಹಾಗೂ ನಳಂದ ಶಿಕ್ಷಣ ಮಹಾವಿದ್ಯಾಲಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ನಾಸು ಹರ್ಡೀಕರ್ ಅವರ 137ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಯುವಕರು ಶಿಕ್ಷಣದ ಜತೆ ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿ ಹಾಗೂ ಸೇವಾ ಮನೋಭಾವ ಅಳವಡಿಸಿ ಕೊಂಡಾಗ ಇಂಥ ಸ್ವತಂತ್ರ ಸೇನಾನಿಗಳ ಜಯಂತಿ ಆಚರಣೆ ಮಾಡಿದ್ದಕ್ಕೆ ಸಾರ್ಥಕವಾಗುತ್ತದೆ’ ಎಂದು ಹೇಳಿದರು.</p>.<p>ಭಾರತ ಸೇವಾದಳದ ಜಿಲ್ಲಾ ಘಟಕದ ಉಪಾಧ್ಯಕ್ಷ ಜಿ.ಎಸ್.ಹಿರೇಮಠ ಮಾತನಾಡಿ, ‘ಪ್ರತಿಯೊಬ್ಬರು ರಾಷ್ಟ್ರ ಧ್ವಜ, ರಾಷ್ಟ್ರ ಲಾಂಛನ, ರಾಷ್ಟ್ರಗೀತೆ, ಸಂವಿಧಾನದ ಬಗ್ಗೆ ತಿಳಿದುಕೊಂಡು ರಾಷ್ಟ್ರದ ಏಕತೆಗಾಗಿ ಒಗ್ಗಟ್ಟಾಗಿ ದುಡಿಯಬೇಕು.ಈ ನಿಟ್ಟಿನಲ್ಲಿ ನಾಸು ಹರ್ಡೀಕರ್ ಅವರ ಜೀವನ ನಮಗೆಲ್ಲರಿಗೂ ಮಾದರಿಯಾಗಲಿ’ ಎಂದು ಹೇಳಿದರು.</p>.<p>ನಳಂದ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಸಿದ್ದಪ್ಪ ಮಾತನಾಡಿ, ‘ವಿದ್ಯಾರ್ಥಿ ಜೀವನದಲ್ಲಿ ಮಹನೀಯರ ಆದರ್ಶಗಳನ್ನು ಪಾಲಿಸಿಕೊಂಡು ಮುಂದಿನ ದಿನಗಳಲ್ಲಿ ನಿಸ್ವಾರ್ಥವಾಗಿ ದೇಶಸೇವೆ ಮಾಡಬೇಕು’ ಎಂದು ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಹ ಕಾರ್ಯದರ್ಶಿ ದಂಡಪ್ಪ ಬಿರಾದಾರ ಮಾತನಾಡಿದರು. ವಿದ್ಯಾಸಾಗರ ಚಿಣಮಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಹರ್ಡೀಕರ್ ಅವರ ಕುರಿತು ಭಾಷಣ ಸ್ಪರ್ಧೆಯಲ್ಲಿ ಶರೀಫ ಪ್ರಥಮ, ಭಾಗ್ಯಲಕ್ಷ್ಮಿ ದ್ವಿತೀಯ, ಹೇಮಾವತಿ ತೃತೀಯ ಬಹುಮಾನ. ರಾಷ್ಟ್ರೀಯ ಭಾವೈಕ್ಯತೆ ಕುರಿತು ಭಾಷಣ ಸ್ಪರ್ಧೆಯಲ್ಲಿ ನಂದಿನಿ ಪ್ರಥಮ, ಕಾಶಿಮ್ ಪಟೇಲ್ ದ್ವಿತೀಯ, ಕಾವೇರಿ ತೃತೀಯ ಬಹುಮಾನ ಪಡೆದುಕೊಂಡರು.</p>.<p>ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-32-1979830911</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ನಾಸು ಹರ್ಡೀಕರ್ ಅವರ ಸೇವಾ ಮನೋಭಾವ ಇಂದಿನ ಯುವಜನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ನಳಂದ ಡಿ.ಇಡಿ ಕಾಲೇಜಿನ ಪ್ರಾಚಾರ್ಯ ಚಂದ್ರಯ್ಶ ಬಾಡಿಯಾಲ ಹೇಳಿದರು.</p>.<p>ತಾಲ್ಲೂಕಿನ ಯರಮರಸ್ನ ನಳಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಭಾರತ ಸೇವಾದಳ ಜಿಲ್ಲಾ ಸಮಿತಿ ಹಾಗೂ ನಳಂದ ಶಿಕ್ಷಣ ಮಹಾವಿದ್ಯಾಲಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ನಾಸು ಹರ್ಡೀಕರ್ ಅವರ 137ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಯುವಕರು ಶಿಕ್ಷಣದ ಜತೆ ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿ ಹಾಗೂ ಸೇವಾ ಮನೋಭಾವ ಅಳವಡಿಸಿ ಕೊಂಡಾಗ ಇಂಥ ಸ್ವತಂತ್ರ ಸೇನಾನಿಗಳ ಜಯಂತಿ ಆಚರಣೆ ಮಾಡಿದ್ದಕ್ಕೆ ಸಾರ್ಥಕವಾಗುತ್ತದೆ’ ಎಂದು ಹೇಳಿದರು.</p>.<p>ಭಾರತ ಸೇವಾದಳದ ಜಿಲ್ಲಾ ಘಟಕದ ಉಪಾಧ್ಯಕ್ಷ ಜಿ.ಎಸ್.ಹಿರೇಮಠ ಮಾತನಾಡಿ, ‘ಪ್ರತಿಯೊಬ್ಬರು ರಾಷ್ಟ್ರ ಧ್ವಜ, ರಾಷ್ಟ್ರ ಲಾಂಛನ, ರಾಷ್ಟ್ರಗೀತೆ, ಸಂವಿಧಾನದ ಬಗ್ಗೆ ತಿಳಿದುಕೊಂಡು ರಾಷ್ಟ್ರದ ಏಕತೆಗಾಗಿ ಒಗ್ಗಟ್ಟಾಗಿ ದುಡಿಯಬೇಕು.ಈ ನಿಟ್ಟಿನಲ್ಲಿ ನಾಸು ಹರ್ಡೀಕರ್ ಅವರ ಜೀವನ ನಮಗೆಲ್ಲರಿಗೂ ಮಾದರಿಯಾಗಲಿ’ ಎಂದು ಹೇಳಿದರು.</p>.<p>ನಳಂದ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಸಿದ್ದಪ್ಪ ಮಾತನಾಡಿ, ‘ವಿದ್ಯಾರ್ಥಿ ಜೀವನದಲ್ಲಿ ಮಹನೀಯರ ಆದರ್ಶಗಳನ್ನು ಪಾಲಿಸಿಕೊಂಡು ಮುಂದಿನ ದಿನಗಳಲ್ಲಿ ನಿಸ್ವಾರ್ಥವಾಗಿ ದೇಶಸೇವೆ ಮಾಡಬೇಕು’ ಎಂದು ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಹ ಕಾರ್ಯದರ್ಶಿ ದಂಡಪ್ಪ ಬಿರಾದಾರ ಮಾತನಾಡಿದರು. ವಿದ್ಯಾಸಾಗರ ಚಿಣಮಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಹರ್ಡೀಕರ್ ಅವರ ಕುರಿತು ಭಾಷಣ ಸ್ಪರ್ಧೆಯಲ್ಲಿ ಶರೀಫ ಪ್ರಥಮ, ಭಾಗ್ಯಲಕ್ಷ್ಮಿ ದ್ವಿತೀಯ, ಹೇಮಾವತಿ ತೃತೀಯ ಬಹುಮಾನ. ರಾಷ್ಟ್ರೀಯ ಭಾವೈಕ್ಯತೆ ಕುರಿತು ಭಾಷಣ ಸ್ಪರ್ಧೆಯಲ್ಲಿ ನಂದಿನಿ ಪ್ರಥಮ, ಕಾಶಿಮ್ ಪಟೇಲ್ ದ್ವಿತೀಯ, ಕಾವೇರಿ ತೃತೀಯ ಬಹುಮಾನ ಪಡೆದುಕೊಂಡರು.</p>.<p>ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-32-1979830911</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>