<p>ಜಾಲಹಳ್ಳಿ: ಕೊಳವೆ ಬಾವಿಗೆ ಅಳವಡಿಸಿದ ವಿದ್ಯುತ್ ತಂತಿ ತಗುಲಿ ದೇವತಗಲ್ ಗ್ರಾಮದ ರೈತ ಅಯ್ಯಪ್ಪ ನಾಯಕ (38) ಸಾವನ್ನಪ್ಪಿದ ಘಟನೆ ಜರುಗಿದೆ.</p>.<p>ತನ್ನ ಜಮೀನಲ್ಲಿ ಮಂಗಳವಾರ ಬೆಳಗಿನ ಜಾವ 4 ಗಂಟೆಗೆ ಭತ್ತದ ಗದ್ದೆಗೆ ನೀರು ಬಿಡಲು ಹೋಗದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.</p>.<p>ಗ್ರಾಮೀಣ ಪ್ರದೇಶದಲ್ಲಿ ನಿತ್ಯ ಬೆಳಿಗ್ಗೆ 4ರಿಂದ 11 ಗಂಟೆಗೆ ಮಾತ್ರ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಅದ್ದರಿಂದ ತನ್ನ ಮೂರು ಎಕರೆ ಜಮೀನಲ್ಲಿ ಬೆಳೆದಿದ್ದ ಭತ್ತಕ್ಕೆ ನೀರು ಹರಿಸಲು ಹೋಗಿ ಮೃತಪಟ್ಟಿದ್ದಾರೆ.</p>.<p>ಭೇಟಿ: ಶಾಸಕಿ ಕರೆಮ್ಮ <a href="">ಜಿ.ನಾಯಕ</a> ಅವರು ಜಾಲಹಳ್ಳಿ ಸರ್ಕಾರಿ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಮೃತ ರೈತನ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಎಲ್ಲ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ತಿಳಿಸುವುದಾಗಿ ಹೇಳಿದರು.</p>.<p>ಆಸ್ಪತ್ರೆಯ ವೈದ್ಯಾಧಿಕಾರಿ <a href="">ಆರ್.ಎಸ್</a> ಹುಲಿಮನಿ, ಪಿಎಸ್ಐ ಬಸವರಾಜ ನಾಯಕ, ಮುಖಂಡರಾದ ಸಿದ್ದನಗೌಡ ಪಾಟೀಲ, ಇಸಾಕ್ ಮೇಸ್ತ್ರಿ, ಹನುಮಂತರಾಯ ವಕೀಲ, ಗೋವಿಂದರಾಜ ನಾಯಕ, ರಂಗಣ್ಣ ಕೋಲ್ಕಾರ್, ಭೀಮಣ್ಣ ಗುಮೇದಾರ, ಶ್ರೀನಿವಾಸ ನಾಯಕ, ಯಂಕೋಬ ನಾಯಕ ಕುದುರಿ, ನಾಗರಾಜ ಮ್ಯಾಕಲದೊಡ್ಡಿ, ಹುಸೇನಪ್ಪ ಗುತ್ತಿಗೆದಾರ, ಶಿವನಗೌಡ ನಾಯಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಾಲಹಳ್ಳಿ: ಕೊಳವೆ ಬಾವಿಗೆ ಅಳವಡಿಸಿದ ವಿದ್ಯುತ್ ತಂತಿ ತಗುಲಿ ದೇವತಗಲ್ ಗ್ರಾಮದ ರೈತ ಅಯ್ಯಪ್ಪ ನಾಯಕ (38) ಸಾವನ್ನಪ್ಪಿದ ಘಟನೆ ಜರುಗಿದೆ.</p>.<p>ತನ್ನ ಜಮೀನಲ್ಲಿ ಮಂಗಳವಾರ ಬೆಳಗಿನ ಜಾವ 4 ಗಂಟೆಗೆ ಭತ್ತದ ಗದ್ದೆಗೆ ನೀರು ಬಿಡಲು ಹೋಗದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.</p>.<p>ಗ್ರಾಮೀಣ ಪ್ರದೇಶದಲ್ಲಿ ನಿತ್ಯ ಬೆಳಿಗ್ಗೆ 4ರಿಂದ 11 ಗಂಟೆಗೆ ಮಾತ್ರ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಅದ್ದರಿಂದ ತನ್ನ ಮೂರು ಎಕರೆ ಜಮೀನಲ್ಲಿ ಬೆಳೆದಿದ್ದ ಭತ್ತಕ್ಕೆ ನೀರು ಹರಿಸಲು ಹೋಗಿ ಮೃತಪಟ್ಟಿದ್ದಾರೆ.</p>.<p>ಭೇಟಿ: ಶಾಸಕಿ ಕರೆಮ್ಮ <a href="">ಜಿ.ನಾಯಕ</a> ಅವರು ಜಾಲಹಳ್ಳಿ ಸರ್ಕಾರಿ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಮೃತ ರೈತನ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಎಲ್ಲ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ತಿಳಿಸುವುದಾಗಿ ಹೇಳಿದರು.</p>.<p>ಆಸ್ಪತ್ರೆಯ ವೈದ್ಯಾಧಿಕಾರಿ <a href="">ಆರ್.ಎಸ್</a> ಹುಲಿಮನಿ, ಪಿಎಸ್ಐ ಬಸವರಾಜ ನಾಯಕ, ಮುಖಂಡರಾದ ಸಿದ್ದನಗೌಡ ಪಾಟೀಲ, ಇಸಾಕ್ ಮೇಸ್ತ್ರಿ, ಹನುಮಂತರಾಯ ವಕೀಲ, ಗೋವಿಂದರಾಜ ನಾಯಕ, ರಂಗಣ್ಣ ಕೋಲ್ಕಾರ್, ಭೀಮಣ್ಣ ಗುಮೇದಾರ, ಶ್ರೀನಿವಾಸ ನಾಯಕ, ಯಂಕೋಬ ನಾಯಕ ಕುದುರಿ, ನಾಗರಾಜ ಮ್ಯಾಕಲದೊಡ್ಡಿ, ಹುಸೇನಪ್ಪ ಗುತ್ತಿಗೆದಾರ, ಶಿವನಗೌಡ ನಾಯಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>