<p>ರಾಯಚೂರು: ಅತಿಯಾದ ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳು ಹಾಗೂ ಇತರೆ ರಾಸಾಯನಿಕಗಳ ಬಳಕೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದರ ಜೊತೆಗೆ ಮುಂದಿನ ಪೀಳಿಗೆಯ ಮಕ್ಕಳ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಪರಿಸರ ಅಧಿಕಾರಿ ಗಣಪತಿ ಹೆಗಡೆ ಹೇಳಿದರು.</p>.<p>ಇಲ್ಲಿನ ಐಎಂಎ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ಜೀವನಕ್ಕೆ ಆಧಾರವಾದ ಗಾಳಿ, ನೀರು ಮತ್ತು ಭೂಮಿಯನ್ನು ಸ್ವಚ್ಛವಾಗಿಟ್ಟುಕೊಂಡರೆ ಮಾತ್ರ ನಮ್ಮ ಆರೋಗ್ಯ ಮತ್ತು ಜೀವನವೂ ಸ್ವಚ್ಛ, ಸುರಕ್ಷಿತವಾಗಿರುತ್ತದೆ. ಪ್ರಕೃತಿಯ ಈ ಮೂರು ಮೂಲಭೂತ ಸಂಪನ್ಮೂಲಗಳಲ್ಲಿ ಯಾವುದೇ ರೀತಿಯ ಮಾಲಿನ್ಯ ಉಂಟಾದರೆ ಅದರ ಪರಿಣಾಮ ಮಾನವನ ಆರೋಗ್ಯದ ಮೇಲೆ ಬೀಳುತ್ತದೆ. ಭವಿಷ್ಯದಲ್ಲಿ ವಿವಿಧ ರೀತಿಯ ಅನಾರೋಗ್ಯಗಳು ಹೆಚ್ಚಾಗುವ ಸಾಧ್ಯತೆ ಇದೆ’ ಎಂದು ತಿಳಿಸಿದರು.</p>.<p>ಪರಿಸರ ಸಂರಕ್ಷಣೆಗಾಗಿ ಪ್ರತಿಯೊಬ್ಬರೂ ಕಡಿಮೆ ಬಳಕೆ, ಮರುಬಳಕೆ ಮತ್ತು ಮರುಸಂಸ್ಕರಣೆ ಎಂಬ ತತ್ವಗಳನ್ನು ಅಳವಡಿಸಿಕೊಳ್ಳಬೇಕು. ಸಾಧ್ಯವಾದಷ್ಟು ಕಡಿಮೆ ತ್ಯಾಜ್ಯ ಉತ್ಪಾದಿಸಬೇಕು ಹಾಗೂ ಉತ್ಪಾದನೆಯಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಹೇಳಿದರು.</p>.<p>ಗ್ರೀನ್ ರಾಯಚೂರು ಸಂಸ್ಥೆಯ ಮುಖ್ಯಸ್ಥೆ ಸರಸ್ವತಿ ಕಿಲಿಕಿಲಿ ಮಾತನಾಡಿದರು. ಗಿರೀಶ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಂಚಾಲಕ ದಂಡಪ್ಪ ಬಿರಾದಾರ, ಉಪನ್ಯಾಸಕ ಮಲ್ಲನ ಗೌಡ್ರು, ಎಸ್. ಎನ್. ಜ್ಯೋತಿ, ಗುರುರಾಜ ಪನ್ನೂರು, ಅನುಪಮ, ನಾಗವೇಣಿ ಸಾರೊಡೆ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-32-1441423015</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಅತಿಯಾದ ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳು ಹಾಗೂ ಇತರೆ ರಾಸಾಯನಿಕಗಳ ಬಳಕೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದರ ಜೊತೆಗೆ ಮುಂದಿನ ಪೀಳಿಗೆಯ ಮಕ್ಕಳ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಪರಿಸರ ಅಧಿಕಾರಿ ಗಣಪತಿ ಹೆಗಡೆ ಹೇಳಿದರು.</p>.<p>ಇಲ್ಲಿನ ಐಎಂಎ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ಜೀವನಕ್ಕೆ ಆಧಾರವಾದ ಗಾಳಿ, ನೀರು ಮತ್ತು ಭೂಮಿಯನ್ನು ಸ್ವಚ್ಛವಾಗಿಟ್ಟುಕೊಂಡರೆ ಮಾತ್ರ ನಮ್ಮ ಆರೋಗ್ಯ ಮತ್ತು ಜೀವನವೂ ಸ್ವಚ್ಛ, ಸುರಕ್ಷಿತವಾಗಿರುತ್ತದೆ. ಪ್ರಕೃತಿಯ ಈ ಮೂರು ಮೂಲಭೂತ ಸಂಪನ್ಮೂಲಗಳಲ್ಲಿ ಯಾವುದೇ ರೀತಿಯ ಮಾಲಿನ್ಯ ಉಂಟಾದರೆ ಅದರ ಪರಿಣಾಮ ಮಾನವನ ಆರೋಗ್ಯದ ಮೇಲೆ ಬೀಳುತ್ತದೆ. ಭವಿಷ್ಯದಲ್ಲಿ ವಿವಿಧ ರೀತಿಯ ಅನಾರೋಗ್ಯಗಳು ಹೆಚ್ಚಾಗುವ ಸಾಧ್ಯತೆ ಇದೆ’ ಎಂದು ತಿಳಿಸಿದರು.</p>.<p>ಪರಿಸರ ಸಂರಕ್ಷಣೆಗಾಗಿ ಪ್ರತಿಯೊಬ್ಬರೂ ಕಡಿಮೆ ಬಳಕೆ, ಮರುಬಳಕೆ ಮತ್ತು ಮರುಸಂಸ್ಕರಣೆ ಎಂಬ ತತ್ವಗಳನ್ನು ಅಳವಡಿಸಿಕೊಳ್ಳಬೇಕು. ಸಾಧ್ಯವಾದಷ್ಟು ಕಡಿಮೆ ತ್ಯಾಜ್ಯ ಉತ್ಪಾದಿಸಬೇಕು ಹಾಗೂ ಉತ್ಪಾದನೆಯಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಹೇಳಿದರು.</p>.<p>ಗ್ರೀನ್ ರಾಯಚೂರು ಸಂಸ್ಥೆಯ ಮುಖ್ಯಸ್ಥೆ ಸರಸ್ವತಿ ಕಿಲಿಕಿಲಿ ಮಾತನಾಡಿದರು. ಗಿರೀಶ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಂಚಾಲಕ ದಂಡಪ್ಪ ಬಿರಾದಾರ, ಉಪನ್ಯಾಸಕ ಮಲ್ಲನ ಗೌಡ್ರು, ಎಸ್. ಎನ್. ಜ್ಯೋತಿ, ಗುರುರಾಜ ಪನ್ನೂರು, ಅನುಪಮ, ನಾಗವೇಣಿ ಸಾರೊಡೆ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-32-1441423015</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>