<p><strong>ರಾಯಚೂರು</strong>: ‘ರಾಜ್ಯ ಸರ್ಕಾರ ಗೊಬ್ಬರದ ಬೆಲೆ ಏರಿಸಿರುವುದನ್ನು ವಾಪಸ್ ಪಡೆಯಬೇಕು. ರಸಗೊಬ್ಬರದ ಮೇಲಿನ ಸಬ್ಸಿಡಿ ಹೆಚ್ಚಿಸಬೇಕು. ರಿಯಾಯಿತಿ ದರದಲ್ಲಿ ಗೊಬ್ಬರ ಒದಗಿಸಬೇಕು’ ಎಂದು ಒತ್ತಾಯಿಸಿ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಪೂವಿತಾ ಎಸ್. ಅವರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದರು.</p>.<p>‘ರೈತರು ತಮಗೆ ಬೇಕಾದ ಗೊಬ್ಬರ ಕೇಳಿದಾಗ ಡೀಲರ್ಗಳು ಕಡ್ಡಾಯವಾಗಿ ಬೇರೆ ಗೊಬ್ಬರ ಅಥವಾ ಕೀಟನಾಶಕಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸುವುದನ್ನು ನಿಲ್ಲಿಸಿ, ರೈತರು ಕೇಳಿದ ಗೊಬ್ಬರವನ್ನೇ ಪೂರೈಸಬೇಕು’ ಎಂದು ಒತ್ತಾಯಿಸಿದರು.</p>.<p>‘ಗೊಬ್ಬರದ ಕೃತಕ ಅಭಾವ ಸೃಷ್ಟಿಸಿ, ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ವಾಪಸ್ ಪಡೆಯಬೇಕು. ರಿಯಾಯಿತಿ ದರದಲ್ಲಿ ಕೃಷಿ ಚಟುವಟಿಕೆಗೆ ಡೀಸೆಲ್ ಪೂರೈಸಬೇಕು’ ಎಂದು ಆಗ್ರಹಿಸಿದರು.</p>.<p>‘ಪೋಡಿ ದುರಸ್ತಿ ಕಾಗದ ಪತ್ರ ಕಾಲಮಿತಿಯೊಳಗೆ ಪೂರೈಸಬೇಕು. ಪರವಾನಗಿ ಹೊಂದಿದ ಭೂಮಾಪಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಆಗ್ರಹಿಸಿದರು.</p>.<p>ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭಾಕರ ಪಾಟೀಲ ಇಂಗಳದಾಳ, ಸೂಗೂರಯ್ಯ ಆರ್.ಎಸ್.ಮಠ, ಬೂದೆಯ್ಯ ಸ್ವಾಮಿ ಗಟ್ಟೂರು, ಲಿಂಗಾರೆಡ್ಡಿ ಪಾಟೀಲ, ಲಕ್ಷ್ಮಣ ಯಕ್ಲಾಸಪುರ, ಗೋವಿಂದ ನಾಯಕ, ಬ್ರಹ್ಮಯ್ಯ ಆಚಾರ್, ಮಲ್ಲಯ್ಯ, ಗೋಕುಲಸಾಬ್ ಹಾಗೂ ವಿಠಲ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-32-501529297</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ‘ರಾಜ್ಯ ಸರ್ಕಾರ ಗೊಬ್ಬರದ ಬೆಲೆ ಏರಿಸಿರುವುದನ್ನು ವಾಪಸ್ ಪಡೆಯಬೇಕು. ರಸಗೊಬ್ಬರದ ಮೇಲಿನ ಸಬ್ಸಿಡಿ ಹೆಚ್ಚಿಸಬೇಕು. ರಿಯಾಯಿತಿ ದರದಲ್ಲಿ ಗೊಬ್ಬರ ಒದಗಿಸಬೇಕು’ ಎಂದು ಒತ್ತಾಯಿಸಿ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಪೂವಿತಾ ಎಸ್. ಅವರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದರು.</p>.<p>‘ರೈತರು ತಮಗೆ ಬೇಕಾದ ಗೊಬ್ಬರ ಕೇಳಿದಾಗ ಡೀಲರ್ಗಳು ಕಡ್ಡಾಯವಾಗಿ ಬೇರೆ ಗೊಬ್ಬರ ಅಥವಾ ಕೀಟನಾಶಕಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸುವುದನ್ನು ನಿಲ್ಲಿಸಿ, ರೈತರು ಕೇಳಿದ ಗೊಬ್ಬರವನ್ನೇ ಪೂರೈಸಬೇಕು’ ಎಂದು ಒತ್ತಾಯಿಸಿದರು.</p>.<p>‘ಗೊಬ್ಬರದ ಕೃತಕ ಅಭಾವ ಸೃಷ್ಟಿಸಿ, ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ವಾಪಸ್ ಪಡೆಯಬೇಕು. ರಿಯಾಯಿತಿ ದರದಲ್ಲಿ ಕೃಷಿ ಚಟುವಟಿಕೆಗೆ ಡೀಸೆಲ್ ಪೂರೈಸಬೇಕು’ ಎಂದು ಆಗ್ರಹಿಸಿದರು.</p>.<p>‘ಪೋಡಿ ದುರಸ್ತಿ ಕಾಗದ ಪತ್ರ ಕಾಲಮಿತಿಯೊಳಗೆ ಪೂರೈಸಬೇಕು. ಪರವಾನಗಿ ಹೊಂದಿದ ಭೂಮಾಪಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಆಗ್ರಹಿಸಿದರು.</p>.<p>ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭಾಕರ ಪಾಟೀಲ ಇಂಗಳದಾಳ, ಸೂಗೂರಯ್ಯ ಆರ್.ಎಸ್.ಮಠ, ಬೂದೆಯ್ಯ ಸ್ವಾಮಿ ಗಟ್ಟೂರು, ಲಿಂಗಾರೆಡ್ಡಿ ಪಾಟೀಲ, ಲಕ್ಷ್ಮಣ ಯಕ್ಲಾಸಪುರ, ಗೋವಿಂದ ನಾಯಕ, ಬ್ರಹ್ಮಯ್ಯ ಆಚಾರ್, ಮಲ್ಲಯ್ಯ, ಗೋಕುಲಸಾಬ್ ಹಾಗೂ ವಿಠಲ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-32-501529297</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>