<p><strong>ರಾಯಚೂರು: </strong>ಪತ್ನಿ ಮೇಲೆ ಅನೈತಿಕ ಸಂಬಂಧದ ಆರೋಪ ಮಾಡಿದ ವ್ಯಕ್ತಿಯೊಬ್ಬ ತನ್ನ ಇಬ್ಬರು ಗಂಡು ಮಕ್ಕಳನ್ನು ಶನಿವಾರ ಕತ್ತು ಹಿಸುಕಿ ಸಾಯಿಸಿದ ಘಟನೆಯು ದೇವದುರ್ಗ ತಾಲ್ಲೂಕಿನ ಜಕ್ಲೇರದೊಡ್ಡಿ ಗ್ರಾಮದಲ್ಲಿ ನಡೆದಿರುವುದು ಭಾನುವಾರ ಬೆಳಕಿಗೆ ಬಂದಿದೆ.</p>.<p>ಶಿವರಾಜ ನಿಂಗಪ್ಪ (5) ಮತ್ತು ರಾಘವೇಂದ್ರ ನಿಂಗಪ್ಪ (3) ಮುಗ್ಧ ಮಕ್ಕಳಿಬ್ಬರು ಶಂಕಿತ ವ್ಯಕ್ತಿತ್ವದ ತಂದೆಯಿಂದ ಪ್ರಾಣಬಿಟ್ಟಿವೆ. ಶನಿವಾರ ಮಧ್ಯರಾತ್ರಿಯೇ ದೇವದುರ್ಗ ಪೊಲೀಸ್ ಠಾಣೆಗೆ ಧಾವಿಸಿ ಪತಿ ನಿಂಗಪ್ಪನ ವಿರುದ್ಧ ಪತ್ನಿ ಪ್ರಭಾವತಿ ಅವರು ದೂರು ಸಲ್ಲಿಸಿದ್ದಾರೆ. </p>.<p>ಮಕ್ಕಳಿಬ್ಬರು ತನಗೆ ಹುಟ್ಟಿಲ್ಲ, ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ ಎಂದು ನಿಂಗಪ್ಪ ನಿಂದನೆ ಮಾಡಿದ್ದಲ್ಲದೆ, ಎಲ್ಲರನ್ನು ಕತ್ತು ಹಿಸುಕಿ ಕೊಲ್ಲುವುದಾಗಿ ಬೆದರಿಕೆವೊಡ್ಡಿದ್ದ ಎಂಬುದನ್ನು ದೂರಿನಲ್ಲಿ ಪ್ರಭಾವತಿ ತಿಳಿಸಿದ್ದಾರೆ.</p>.<p>ಕೆ.ಇರಬಗೇರಾ ಗ್ರಾಮದಲ್ಲಿದ್ದ ಮಕ್ಕಳಿಬ್ಬರನ್ನು ಜಕ್ಲೇರದೊಡ್ಡಿಗೆ ಕರೆತಂದು ಕತ್ತು ಹಿಸುಕಿ ಸಾಯಿಸಿದ್ದು, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಪತ್ನಿ ಮೇಲೆ ಅನೈತಿಕ ಸಂಬಂಧದ ಆರೋಪ ಮಾಡಿದ ವ್ಯಕ್ತಿಯೊಬ್ಬ ತನ್ನ ಇಬ್ಬರು ಗಂಡು ಮಕ್ಕಳನ್ನು ಶನಿವಾರ ಕತ್ತು ಹಿಸುಕಿ ಸಾಯಿಸಿದ ಘಟನೆಯು ದೇವದುರ್ಗ ತಾಲ್ಲೂಕಿನ ಜಕ್ಲೇರದೊಡ್ಡಿ ಗ್ರಾಮದಲ್ಲಿ ನಡೆದಿರುವುದು ಭಾನುವಾರ ಬೆಳಕಿಗೆ ಬಂದಿದೆ.</p>.<p>ಶಿವರಾಜ ನಿಂಗಪ್ಪ (5) ಮತ್ತು ರಾಘವೇಂದ್ರ ನಿಂಗಪ್ಪ (3) ಮುಗ್ಧ ಮಕ್ಕಳಿಬ್ಬರು ಶಂಕಿತ ವ್ಯಕ್ತಿತ್ವದ ತಂದೆಯಿಂದ ಪ್ರಾಣಬಿಟ್ಟಿವೆ. ಶನಿವಾರ ಮಧ್ಯರಾತ್ರಿಯೇ ದೇವದುರ್ಗ ಪೊಲೀಸ್ ಠಾಣೆಗೆ ಧಾವಿಸಿ ಪತಿ ನಿಂಗಪ್ಪನ ವಿರುದ್ಧ ಪತ್ನಿ ಪ್ರಭಾವತಿ ಅವರು ದೂರು ಸಲ್ಲಿಸಿದ್ದಾರೆ. </p>.<p>ಮಕ್ಕಳಿಬ್ಬರು ತನಗೆ ಹುಟ್ಟಿಲ್ಲ, ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ ಎಂದು ನಿಂಗಪ್ಪ ನಿಂದನೆ ಮಾಡಿದ್ದಲ್ಲದೆ, ಎಲ್ಲರನ್ನು ಕತ್ತು ಹಿಸುಕಿ ಕೊಲ್ಲುವುದಾಗಿ ಬೆದರಿಕೆವೊಡ್ಡಿದ್ದ ಎಂಬುದನ್ನು ದೂರಿನಲ್ಲಿ ಪ್ರಭಾವತಿ ತಿಳಿಸಿದ್ದಾರೆ.</p>.<p>ಕೆ.ಇರಬಗೇರಾ ಗ್ರಾಮದಲ್ಲಿದ್ದ ಮಕ್ಕಳಿಬ್ಬರನ್ನು ಜಕ್ಲೇರದೊಡ್ಡಿಗೆ ಕರೆತಂದು ಕತ್ತು ಹಿಸುಕಿ ಸಾಯಿಸಿದ್ದು, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>