ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಮತದಾನಕ್ಕಾಗಿ‌ ಬಂದಿದ್ದ ಐದು ಕಾರ್ಮಿಕರು ಮಸಣಕ್ಕೆ

Last Updated 27 ಡಿಸೆಂಬರ್ 2020, 6:43 IST
ಅಕ್ಷರ ಗಾತ್ರ

ರಾಯಚೂರು: ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ಮಾಡಿ ದೇವದುರ್ಗದಿಂದ ಬೆಂಗಳೂರಿಗೆ ಮರಳುತ್ತಿದ್ದ ಕಾರ್ಮಿಕರಿದ್ದ ಕ್ರೂಸರ್ ವಾಹನ ಹಾಗೂ ಸರ್ಕಾರಿ ಬಸ್ ನಡುವೆ ಡಿಕ್ಕಿಯಾಗಿ ಐದು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಜನರು ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ಬಿ.ಜಿ.ಕೆರೆ‌‌ ಗ್ರಾಮದ ಬಳಿ ಶನಿವಾರ ರಾತ್ರಿ ನಡೆದಿದೆ.

ದೇವದುರ್ಗ ತಾಲ್ಲೂಕಿನ ಎಚ್.ಸಿದ್ದಾಪುರ ಗ್ರಾಮದ ತಿಮ್ಮಣ್ಣ(40), ರತ್ನಮ್ಮ(35), ಸೋಮನಮರಡಿ ಗ್ರಾಮದ ನಿವಾಸಿ ಮಹೇಶ(19), ಗಣಜಲಿ ಗ್ರಾಮದ ನಿವಾಸಿ ದುರಗಪ್ಪ (16) ಮೃತಪಟ್ಟವರು. ಗಾಯಗೊಂಡವರನ್ನು ಚಿತ್ರದುರ್ಗದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ತಿಳಿಸಲಾಗಿದೆ.

ಡಿಸೆಂಬರ್ 22 ರಂದು ಮತದಾನ ಮಾಡಲು ಗ್ರಾಮಕ್ಕೆ ಬಂದಿದ್ದ ಅವರು ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಅಪಘಾತ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT