<p><strong>ರಾಯಚೂರು:</strong> ಐತಿಹಾಸಿಕ ರಾಯಚೂರು ಸಿಟಿಯನ್ನು ಸುಂದರಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯು ವಿಶೇಷವಾಗಿ ರೂಪಿಸಿರುವ ರಾಯಚೂರ ಕೋಟೆಗೆ ದೀಪಾಲಂಕಾರ ಯೋಜನೆಯ ಮೊದಲ ಹಂತದ ಡೆಮೊ ವೀಕ್ಷಣೆ ಮಂಗಳವಾರ ನಡೆಯಿತು.</p>.<p>ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರವೇಶ ಮಾಡುವ ಕೋಟೆದ್ವಾರದ ಬಳಿಯ ಎಡಗಡೆಯ ಸ್ಥಳವಾದ ಬಯಲು ಗ್ರಂಥಾಲಯದ ಆವರಣದಲ್ಲಿ ಲೈಟಿಂಗ್ ವ್ಯವಸ್ಥೆ ಮಾಡಲಾಗಿತ್ತು. </p>.<p>ಸಂಜೆ ವೇಳೆಗೆ ಡೆಮೊ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ನಿತೀಶ್ ಕೆ ಹಾಗೂ ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೋಹಾಪತ್ರ ಅವರು ಲೈಟಿಂಗ್ ವ್ಯವಸ್ಥೆಯ ಪ್ರಾತ್ಯಕ್ಷಿಕೆಯ ವೀಕ್ಷಣೆ ನಡೆಸಿದರು.</p>.<p>ಬೆಂಗಳೂರಿನ ವಿಧಾನಸೌಧ ಮಾದರಿಯಲ್ಲಿ ರಾಯಚೂರು ಕೋಟೆಗೆ ದೀಪಾಲಂಕಾರ ಮಾಡಬೇಕು ಎಂದು ಜಿಲ್ಲಾಧಿಕಾರಿ ತಾಂತ್ರಿಕ ತಂಡಕ್ಕೆ ಸೂಚನೆ ನೀಡಿದರು.</p>.<p>ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬಗಳು ಮತ್ತು ಇನ್ನೀತರ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಹತ್ವದ ಸಂದೇಶ ಕೊಡುವ ನಿಟ್ಟಿನಲ್ಲಿ ಬಹುವರ್ಣದ ದೀಪಾಲಂಕಾರಕ್ಕಾಗಿ ಬೀಮ್ ಮೂವಿಂಗ್ ಹೆಡ್ ಲೈಟ್ಸನ ವ್ಯವಸ್ಥೆ ಮಾಡಬೇಕು ಎಂದು ತಂತ್ರಜ್ಞರಿಗೆ ಸೂಚನೆ ನೀಡಿದರು.</p>.<p>ನಗರದ ಶ್ರೀ ಬಸವೇಶ್ವರ ವೃತ್ತದಿಂದ ಕೇಂದ್ರ ಬಸ್ ನಿಲ್ದಾಣದ ಕೋಟೆ ದ್ವಾರದವರೆಗೆ ಮತ್ತು ಬಸ್ ನಿಲ್ದಾಣದ ಆವರಣಕ್ಕೆ ಹೊಂದಿಕೊಂಡ ಕೋಟೆ ಗೋಡೆಗೆ ಅಂದಾಜು 400 ಲೈಟ್ ಅಳವಡಿಸಿ ಮಾಡಲು ಸಿದ್ಧತೆ ಮಾಡಲಾಗುತ್ತಿದೆ ಎಂದು ತಾಂತ್ರಿಕ ತಂಡದವರು ಮಾಹಿತಿ ನೀಡಿದರು.</p>.<p>ಡಿಎಚ್ಒ ಡಾ.ಸುರೇಂದ್ರಬಾಬು, ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಡೈರೆಕ್ಟರ್ ಮೋಹನ ಕೃಷ್ಣ, ಮಹಾನಗರ ಪಾಲಿಕೆಯ ಎಲೆಕ್ಟ್ರಿಕಲ್ ವಿಭಾಗ, ಸಿವಿಲ್ ವಿಭಾಗದ ಎಂಜಿನಿಯರ್ ರಮೇಶ, ಮಹೇಶ, ನಿರ್ಮಿತಿ ಕೇಂದ್ರದ ಎಂಜಿನಿಯರ್ ಲೂತರ್, ಲೆಕ್ಸಾ ಲೈಟಿಂಗ್ ಟೆಕ್ನಾಲಜೀಸ್ ಪ್ರೈವೆಟ್ ಲಿಮಿಟೆಡ್ ನ ಗುರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಐತಿಹಾಸಿಕ ರಾಯಚೂರು ಸಿಟಿಯನ್ನು ಸುಂದರಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯು ವಿಶೇಷವಾಗಿ ರೂಪಿಸಿರುವ ರಾಯಚೂರ ಕೋಟೆಗೆ ದೀಪಾಲಂಕಾರ ಯೋಜನೆಯ ಮೊದಲ ಹಂತದ ಡೆಮೊ ವೀಕ್ಷಣೆ ಮಂಗಳವಾರ ನಡೆಯಿತು.</p>.<p>ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರವೇಶ ಮಾಡುವ ಕೋಟೆದ್ವಾರದ ಬಳಿಯ ಎಡಗಡೆಯ ಸ್ಥಳವಾದ ಬಯಲು ಗ್ರಂಥಾಲಯದ ಆವರಣದಲ್ಲಿ ಲೈಟಿಂಗ್ ವ್ಯವಸ್ಥೆ ಮಾಡಲಾಗಿತ್ತು. </p>.<p>ಸಂಜೆ ವೇಳೆಗೆ ಡೆಮೊ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ನಿತೀಶ್ ಕೆ ಹಾಗೂ ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೋಹಾಪತ್ರ ಅವರು ಲೈಟಿಂಗ್ ವ್ಯವಸ್ಥೆಯ ಪ್ರಾತ್ಯಕ್ಷಿಕೆಯ ವೀಕ್ಷಣೆ ನಡೆಸಿದರು.</p>.<p>ಬೆಂಗಳೂರಿನ ವಿಧಾನಸೌಧ ಮಾದರಿಯಲ್ಲಿ ರಾಯಚೂರು ಕೋಟೆಗೆ ದೀಪಾಲಂಕಾರ ಮಾಡಬೇಕು ಎಂದು ಜಿಲ್ಲಾಧಿಕಾರಿ ತಾಂತ್ರಿಕ ತಂಡಕ್ಕೆ ಸೂಚನೆ ನೀಡಿದರು.</p>.<p>ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬಗಳು ಮತ್ತು ಇನ್ನೀತರ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಹತ್ವದ ಸಂದೇಶ ಕೊಡುವ ನಿಟ್ಟಿನಲ್ಲಿ ಬಹುವರ್ಣದ ದೀಪಾಲಂಕಾರಕ್ಕಾಗಿ ಬೀಮ್ ಮೂವಿಂಗ್ ಹೆಡ್ ಲೈಟ್ಸನ ವ್ಯವಸ್ಥೆ ಮಾಡಬೇಕು ಎಂದು ತಂತ್ರಜ್ಞರಿಗೆ ಸೂಚನೆ ನೀಡಿದರು.</p>.<p>ನಗರದ ಶ್ರೀ ಬಸವೇಶ್ವರ ವೃತ್ತದಿಂದ ಕೇಂದ್ರ ಬಸ್ ನಿಲ್ದಾಣದ ಕೋಟೆ ದ್ವಾರದವರೆಗೆ ಮತ್ತು ಬಸ್ ನಿಲ್ದಾಣದ ಆವರಣಕ್ಕೆ ಹೊಂದಿಕೊಂಡ ಕೋಟೆ ಗೋಡೆಗೆ ಅಂದಾಜು 400 ಲೈಟ್ ಅಳವಡಿಸಿ ಮಾಡಲು ಸಿದ್ಧತೆ ಮಾಡಲಾಗುತ್ತಿದೆ ಎಂದು ತಾಂತ್ರಿಕ ತಂಡದವರು ಮಾಹಿತಿ ನೀಡಿದರು.</p>.<p>ಡಿಎಚ್ಒ ಡಾ.ಸುರೇಂದ್ರಬಾಬು, ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಡೈರೆಕ್ಟರ್ ಮೋಹನ ಕೃಷ್ಣ, ಮಹಾನಗರ ಪಾಲಿಕೆಯ ಎಲೆಕ್ಟ್ರಿಕಲ್ ವಿಭಾಗ, ಸಿವಿಲ್ ವಿಭಾಗದ ಎಂಜಿನಿಯರ್ ರಮೇಶ, ಮಹೇಶ, ನಿರ್ಮಿತಿ ಕೇಂದ್ರದ ಎಂಜಿನಿಯರ್ ಲೂತರ್, ಲೆಕ್ಸಾ ಲೈಟಿಂಗ್ ಟೆಕ್ನಾಲಜೀಸ್ ಪ್ರೈವೆಟ್ ಲಿಮಿಟೆಡ್ ನ ಗುರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>