<p>ರಾಯಚೂರು: ಇಡಪನೂರು ಪೊಲೀಸ್ ಠಾಣೆ ವ್ಯಾಪ್ತಿಯ ಗಿಲ್ಲೆಸುಗೂರು ಕ್ಯಾಂಪ್ನಲ್ಲಿ ರಸ್ತೆಯಲ್ಲಿ ಅನಧಿಕೃತವಾಗಿ ಸಿ.ಎಚ್.ಪೌಡರ್ನಿಂದ ತಯಾರಿಸಿದ ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>ಗಿಲ್ಲೆಸುಗೂರು ಕ್ಯಾಂಪ್ನ ರಾಜಕುಮಾರ ಬಂಧಿತ.</p>.<p>ಖಚಿತ ಮಾಹಿತಿ ಮೇರೆಗೆ ಪಿಎಸ್ಐ, ಪೊಲೀಸ್ ಸಿಬ್ಬಂದಿ ಹಾಗೂ ಇಬ್ಬರು ಪಂಚರೊಂದಿಗೆ ಸ್ಥಳಕ್ಕೆ ತೆರಳಿ ಮರೆಯಲ್ಲಿ ನಿಂತು ಪರಿಶೀಲಿಸಿದಾಗ, ಆರೋಪಿಯು 3 ಪ್ಲಾಸ್ಟಿಕ್ ಕೊಡಗಳು ಹಾಗೂ ಒಂದು ದೊಡ್ಡ ಪ್ಲಾಸ್ಟಿಕ್ ಕ್ಯಾನ್ ಇಟ್ಟುಕೊಂಡು ಜಗ್ನಿಂದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ನಲ್ಲಿ ಸೇಂದಿ ತುಂಬಿ ಜನರಿಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ.</p>.<p>ಆರೋಪಿಯಿಂದ 3 ಪ್ಲಾಸ್ಟಿಕ್ ಕೊಡಗಳಲ್ಲಿಯ 54 ಲೀಟರ್ ಹಾಗೂ ಒಂದು ದೊಡ್ಡ ಪ್ಲಾಸ್ಟಿಕ್ ಕ್ಯಾನ್ನಲ್ಲಿಯ 30 ಲೀಟರ್ ಸೇರಿ ಒಟ್ಟು 84 ಲೀಟರ್ ಕಲಬೆರಕೆ ಸೇಂದಿ, ₹1680 ವಶಪಡಿಸಿಕೊಳ್ಳಲಾಗಿದೆ.</p>.<p>ಇಡಪನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-32-1348177623</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಇಡಪನೂರು ಪೊಲೀಸ್ ಠಾಣೆ ವ್ಯಾಪ್ತಿಯ ಗಿಲ್ಲೆಸುಗೂರು ಕ್ಯಾಂಪ್ನಲ್ಲಿ ರಸ್ತೆಯಲ್ಲಿ ಅನಧಿಕೃತವಾಗಿ ಸಿ.ಎಚ್.ಪೌಡರ್ನಿಂದ ತಯಾರಿಸಿದ ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>ಗಿಲ್ಲೆಸುಗೂರು ಕ್ಯಾಂಪ್ನ ರಾಜಕುಮಾರ ಬಂಧಿತ.</p>.<p>ಖಚಿತ ಮಾಹಿತಿ ಮೇರೆಗೆ ಪಿಎಸ್ಐ, ಪೊಲೀಸ್ ಸಿಬ್ಬಂದಿ ಹಾಗೂ ಇಬ್ಬರು ಪಂಚರೊಂದಿಗೆ ಸ್ಥಳಕ್ಕೆ ತೆರಳಿ ಮರೆಯಲ್ಲಿ ನಿಂತು ಪರಿಶೀಲಿಸಿದಾಗ, ಆರೋಪಿಯು 3 ಪ್ಲಾಸ್ಟಿಕ್ ಕೊಡಗಳು ಹಾಗೂ ಒಂದು ದೊಡ್ಡ ಪ್ಲಾಸ್ಟಿಕ್ ಕ್ಯಾನ್ ಇಟ್ಟುಕೊಂಡು ಜಗ್ನಿಂದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ನಲ್ಲಿ ಸೇಂದಿ ತುಂಬಿ ಜನರಿಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ.</p>.<p>ಆರೋಪಿಯಿಂದ 3 ಪ್ಲಾಸ್ಟಿಕ್ ಕೊಡಗಳಲ್ಲಿಯ 54 ಲೀಟರ್ ಹಾಗೂ ಒಂದು ದೊಡ್ಡ ಪ್ಲಾಸ್ಟಿಕ್ ಕ್ಯಾನ್ನಲ್ಲಿಯ 30 ಲೀಟರ್ ಸೇರಿ ಒಟ್ಟು 84 ಲೀಟರ್ ಕಲಬೆರಕೆ ಸೇಂದಿ, ₹1680 ವಶಪಡಿಸಿಕೊಳ್ಳಲಾಗಿದೆ.</p>.<p>ಇಡಪನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-32-1348177623</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>