<p><strong>ಹಟ್ಟಿ ಚಿನ್ನದ ಗಣಿ</strong>: ಗುರುಗುಂಟಾ ಹೋಬಳಿ ವ್ಯಾಪ್ತಿಯ ಯರಜಂತಿ, ಬಂಡೆಭಾವಿ, ಯಲಗಟ್ಟಾ, ಮಾಚನೂರು, ಗೌಡೂರು, ಸೇರಿದಂತೆ ಒಟ್ಟು 190 ದೊಡ್ಡಿಗಳ ನಿವಾಸಿಗಳು ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.</p>.<p>ಕೇಂದ್ರ ಸರ್ಕಾರದ ಜೆಜೆಎಂ ಯೋಜನೆಗೆ ಗ್ರಹಣ ಹಿಡಿದಿದೆ. ಕಳಪೆ ಕಾಮಗಾರಿಯಿಂದಾಗಿ ಯೋಜನೆ ದಾರಿ ತಪ್ಪಿದೆ. ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ಸ್ಥಳೀಯ ಗ್ರಾಮ ಪಂಚಾಯಿತಿಗಳು ಹರಸಾಹಸ ಮಾಡಬೇಕಾಗಿದೆ.</p>.<p>ಈ ಬಾರಿ ಗುರುಗುಂಟಾ ಹೋಬಳಿಯಲ್ಲಿ ಜಿಲ್ಲೆಯಲ್ಲೇ ಅತಿ ಹೆಚ್ಚು 42 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಅಂತರ್ಜಲಮಟ್ಟ ಕುಸಿಯುತ್ತಿದೆ.</p>.<p>ಅನ್ವರಿ, ನಿಲೋಗಲ್, ವೀರಾಪುರ, ರೋಡಲಬಂಡ (ತವಗ), ಗೆಜ್ಜಲಗಟ್ಟಾ, ಕೋಠಾ ಸೇರಿ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ.</p>.<p>ಕಡ್ಡೋಣಿಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಇದು ಒಂದು ಸಾವಿರ ಜನಸಂಖ್ಯೆ ಹೊಂದಿದೆ. ಈ ಗ್ರಾಮ ಎತ್ತರದ ಪ್ರದೇಶದಲ್ಲಿ ಇರುವುದರಿಂದ ಅಂತರ್ಜಲ ಸಮಸ್ಯೆ ಇದೆ. ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ 2000ನೇ ಸಾಲಿನಲ್ಲಿ ₹18 ಲಕ್ಷ ವೆಚ್ಚದಲ್ಲಿ ಟ್ಯಾಂಕ್ ನಿರ್ಮಿಸಲಾಗಿದೆ. ಆದರೆ, ಇದುವರೆಗೂ ಹನಿ ನೀರೂ ಬಂದಿಲ್ಲ.</p>.<p>ಪೈದೊಡ್ಡಿ ಗ್ರಾಮಕ್ಕೆ 2009ರಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ವಿಶ್ವಸಂಸ್ಥೆ ನೆರವಿನಿಂದ ₹ 6 ಕೋಟಿ ವೆಚ್ಚದಲ್ಲಿ ನೀರಿನ ಘಟಕ ನಿರ್ಮಿಸಿದರೂ ನಿರ್ವಹಣೆ ಇಲ್ಲದೆ, ಅದು ಹಾಳಾಗಿದೆ.</p>.<p>ಯರಜಂತಿ ಗ್ರಾಮ ಸಹ ಗುಡ್ಡಗಾಡು ಪ್ರದೇಶದಲ್ಲಿದೆ. ಜನ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಇಲ್ಲಿ 2014-2015ರಲ್ಲಿ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಅಡಿ ₹25 ಲಕ್ಷ ವೆಚ್ಚದಲ್ಲಿ 1 ಲಕ್ಷ ಲೀಟರ್ ಸಂಗ್ರಹ ಸಾಮರ್ಥ್ಯದ ಓವರ್ ಹೆಡ್ ಟ್ಯಾಂಕ್ ನಿರ್ಮಿಸಲಾಗಿದೆ.</p>.<p>ಆದರೆ, ಜನರಿಗೆ ಕುಡಿಯುವ ನೀರು ದೊರಕುತ್ತಿಲ್ಲ.</p>.<p>ಮೇದಿನಾಪುರ ಗ್ರಾಮದಲ್ಲಿ ಕೊಳವೆಬಾವಿ ಕೊರೆಸಿದರೂ ಪ್ರಯೋಜನವಾಗಿಲ್ಲ. ಯಲಗಟ್ಟಾ ಗ್ರಾಮದಲ್ಲಿ ₹ 10 ಲಕ್ಷ ವೆಚ್ಚದಲ್ಲಿ ಆರ್ಒ ಪ್ಲಾಂಟ್ ಅಳವಡಿಸಿದರೂ ನೀರು ಬರುವ ಮುನ್ನವೇ ಯೋಜನೆ ವಿಫಲವಾಗಿದೆ.</p>.<p>ಹಟ್ಟಿ ಪಟ್ಟಣಕ್ಕೆ 20 ದಿನಗಳಿಗೊಮ್ಮೆ ಕುಡಿಯುವ ನೀರು ಬಿಡುತ್ತಿದ್ದು, ಬಂಗಾರದ ನಾಡಿನ ಜನತೆಗೆ ನೀರೇ ಬಂಗಾರವಾಗಿದೆ. ಹಟ್ಟಿ ಪಟ್ಟಣಕ್ಕೆ ನೀರು ಪೂರೈಸಲು ಟಣಮಕಲ್ಲು ಹತ್ತಿರ ಕೆಕೆಆರ್ಡಿಬಿ ಯೋಜನೆ ಅಡಿಯಲ್ಲಿ ₹4.30 ಕೋಟಿ ವೆಚ್ಚದಲ್ಲಿ ಜಾಕ್ವೆಲ್ ನಿರ್ಮಿಸಲಾಗಿದೆ. ಆದರೆ, ಪೈಪ್ಲೈನ್ ಹಾಕಿಲ್ಲ. ಆದ್ದರಿಂದ ನೀರಿನ ಸಮಸ್ಯೆ ತೀವ್ರವಾಗಿದೆ.</p>.<p>ಗುಡ್ಡಗಾಡು ಪ್ರದೇಶದ ಪ್ರತಿಯೊಂದು ಗ್ರಾಮದಲ್ಲೂ ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಆದರೆ, ಎಲ್ಲವೂ ನಿಷ್ಕ್ರಿಯಗೊಂಡಿವೆ. ಸಮಸ್ಯೆ ಬಗ್ಗೆ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.</p>.<p>ಅಧಿಕಾರಿಗಳು ಕಚೇರಿ ಬಿಟ್ಟು ಹೊರಗೆ ಬರುತ್ತಿಲ್ಲ.</p>.<p>ಮಹಿಳೆಯರು ಮಕ್ಕಳೊಂದಿಗೆ ಕೊಡಗಳನ್ನು ತೆಗೆದುಕೊಂಡು ಹೊಲಗಳಲ್ಲಿರುವ ಬೋರ್ವೆಲ್ ಗಳಲ್ಲಿನ ನೀರು ಪಡೆಯಲು ಅಲೆದಾಡಬೇಕಾಗಿದೆ.ಗುರುಗುಂಟಾ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು.</p><p>ಶಿವು, ಯಲಗಟ್ಟಾ ಗ್ರಾಮಸ್ಥ</p>.<div><blockquote>ಗುರುಗುಂಟಾ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆ ಕುರಿತು ಪಿಡಿಒ ಅವರೊಂದಿಗೆ ಚರ್ಚಿಸಿ, ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. </blockquote><span class="attribution">ಉಮೇಶ, ತಾ,ಪಂ ಇಒ ಲಿಂಗಸುಗೂರು</span></div>.<div><blockquote>ಗುರುಗುಂಟಾ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. </blockquote><span class="attribution">ಶಿವು, ಯಲಗಟ್ಟಾ ಗ್ರಾಮಸ್ಥ</span></div>.<div><blockquote>ಸರ್ಕಾರದಿಂದ ವೇತನ ಪಡೆಯುವ ಅಧಿಕಾರಿಗಳು ಎಸಿ ಕಚೇರಿಯಿಂದ ಹೊರಬಂದು ಜನರಿಗೆ ಕುಡಿಯುವ ನೀರು ಒದಗಿಸಿಕೊಡಬೇಕು. </blockquote><span class="attribution"> ರಮೇಶ ಪವಾರ, ಗುರುಗುಂಟಾ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ</strong>: ಗುರುಗುಂಟಾ ಹೋಬಳಿ ವ್ಯಾಪ್ತಿಯ ಯರಜಂತಿ, ಬಂಡೆಭಾವಿ, ಯಲಗಟ್ಟಾ, ಮಾಚನೂರು, ಗೌಡೂರು, ಸೇರಿದಂತೆ ಒಟ್ಟು 190 ದೊಡ್ಡಿಗಳ ನಿವಾಸಿಗಳು ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.</p>.<p>ಕೇಂದ್ರ ಸರ್ಕಾರದ ಜೆಜೆಎಂ ಯೋಜನೆಗೆ ಗ್ರಹಣ ಹಿಡಿದಿದೆ. ಕಳಪೆ ಕಾಮಗಾರಿಯಿಂದಾಗಿ ಯೋಜನೆ ದಾರಿ ತಪ್ಪಿದೆ. ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ಸ್ಥಳೀಯ ಗ್ರಾಮ ಪಂಚಾಯಿತಿಗಳು ಹರಸಾಹಸ ಮಾಡಬೇಕಾಗಿದೆ.</p>.<p>ಈ ಬಾರಿ ಗುರುಗುಂಟಾ ಹೋಬಳಿಯಲ್ಲಿ ಜಿಲ್ಲೆಯಲ್ಲೇ ಅತಿ ಹೆಚ್ಚು 42 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಅಂತರ್ಜಲಮಟ್ಟ ಕುಸಿಯುತ್ತಿದೆ.</p>.<p>ಅನ್ವರಿ, ನಿಲೋಗಲ್, ವೀರಾಪುರ, ರೋಡಲಬಂಡ (ತವಗ), ಗೆಜ್ಜಲಗಟ್ಟಾ, ಕೋಠಾ ಸೇರಿ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ.</p>.<p>ಕಡ್ಡೋಣಿಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಇದು ಒಂದು ಸಾವಿರ ಜನಸಂಖ್ಯೆ ಹೊಂದಿದೆ. ಈ ಗ್ರಾಮ ಎತ್ತರದ ಪ್ರದೇಶದಲ್ಲಿ ಇರುವುದರಿಂದ ಅಂತರ್ಜಲ ಸಮಸ್ಯೆ ಇದೆ. ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ 2000ನೇ ಸಾಲಿನಲ್ಲಿ ₹18 ಲಕ್ಷ ವೆಚ್ಚದಲ್ಲಿ ಟ್ಯಾಂಕ್ ನಿರ್ಮಿಸಲಾಗಿದೆ. ಆದರೆ, ಇದುವರೆಗೂ ಹನಿ ನೀರೂ ಬಂದಿಲ್ಲ.</p>.<p>ಪೈದೊಡ್ಡಿ ಗ್ರಾಮಕ್ಕೆ 2009ರಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ವಿಶ್ವಸಂಸ್ಥೆ ನೆರವಿನಿಂದ ₹ 6 ಕೋಟಿ ವೆಚ್ಚದಲ್ಲಿ ನೀರಿನ ಘಟಕ ನಿರ್ಮಿಸಿದರೂ ನಿರ್ವಹಣೆ ಇಲ್ಲದೆ, ಅದು ಹಾಳಾಗಿದೆ.</p>.<p>ಯರಜಂತಿ ಗ್ರಾಮ ಸಹ ಗುಡ್ಡಗಾಡು ಪ್ರದೇಶದಲ್ಲಿದೆ. ಜನ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಇಲ್ಲಿ 2014-2015ರಲ್ಲಿ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಅಡಿ ₹25 ಲಕ್ಷ ವೆಚ್ಚದಲ್ಲಿ 1 ಲಕ್ಷ ಲೀಟರ್ ಸಂಗ್ರಹ ಸಾಮರ್ಥ್ಯದ ಓವರ್ ಹೆಡ್ ಟ್ಯಾಂಕ್ ನಿರ್ಮಿಸಲಾಗಿದೆ.</p>.<p>ಆದರೆ, ಜನರಿಗೆ ಕುಡಿಯುವ ನೀರು ದೊರಕುತ್ತಿಲ್ಲ.</p>.<p>ಮೇದಿನಾಪುರ ಗ್ರಾಮದಲ್ಲಿ ಕೊಳವೆಬಾವಿ ಕೊರೆಸಿದರೂ ಪ್ರಯೋಜನವಾಗಿಲ್ಲ. ಯಲಗಟ್ಟಾ ಗ್ರಾಮದಲ್ಲಿ ₹ 10 ಲಕ್ಷ ವೆಚ್ಚದಲ್ಲಿ ಆರ್ಒ ಪ್ಲಾಂಟ್ ಅಳವಡಿಸಿದರೂ ನೀರು ಬರುವ ಮುನ್ನವೇ ಯೋಜನೆ ವಿಫಲವಾಗಿದೆ.</p>.<p>ಹಟ್ಟಿ ಪಟ್ಟಣಕ್ಕೆ 20 ದಿನಗಳಿಗೊಮ್ಮೆ ಕುಡಿಯುವ ನೀರು ಬಿಡುತ್ತಿದ್ದು, ಬಂಗಾರದ ನಾಡಿನ ಜನತೆಗೆ ನೀರೇ ಬಂಗಾರವಾಗಿದೆ. ಹಟ್ಟಿ ಪಟ್ಟಣಕ್ಕೆ ನೀರು ಪೂರೈಸಲು ಟಣಮಕಲ್ಲು ಹತ್ತಿರ ಕೆಕೆಆರ್ಡಿಬಿ ಯೋಜನೆ ಅಡಿಯಲ್ಲಿ ₹4.30 ಕೋಟಿ ವೆಚ್ಚದಲ್ಲಿ ಜಾಕ್ವೆಲ್ ನಿರ್ಮಿಸಲಾಗಿದೆ. ಆದರೆ, ಪೈಪ್ಲೈನ್ ಹಾಕಿಲ್ಲ. ಆದ್ದರಿಂದ ನೀರಿನ ಸಮಸ್ಯೆ ತೀವ್ರವಾಗಿದೆ.</p>.<p>ಗುಡ್ಡಗಾಡು ಪ್ರದೇಶದ ಪ್ರತಿಯೊಂದು ಗ್ರಾಮದಲ್ಲೂ ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಆದರೆ, ಎಲ್ಲವೂ ನಿಷ್ಕ್ರಿಯಗೊಂಡಿವೆ. ಸಮಸ್ಯೆ ಬಗ್ಗೆ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.</p>.<p>ಅಧಿಕಾರಿಗಳು ಕಚೇರಿ ಬಿಟ್ಟು ಹೊರಗೆ ಬರುತ್ತಿಲ್ಲ.</p>.<p>ಮಹಿಳೆಯರು ಮಕ್ಕಳೊಂದಿಗೆ ಕೊಡಗಳನ್ನು ತೆಗೆದುಕೊಂಡು ಹೊಲಗಳಲ್ಲಿರುವ ಬೋರ್ವೆಲ್ ಗಳಲ್ಲಿನ ನೀರು ಪಡೆಯಲು ಅಲೆದಾಡಬೇಕಾಗಿದೆ.ಗುರುಗುಂಟಾ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು.</p><p>ಶಿವು, ಯಲಗಟ್ಟಾ ಗ್ರಾಮಸ್ಥ</p>.<div><blockquote>ಗುರುಗುಂಟಾ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆ ಕುರಿತು ಪಿಡಿಒ ಅವರೊಂದಿಗೆ ಚರ್ಚಿಸಿ, ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. </blockquote><span class="attribution">ಉಮೇಶ, ತಾ,ಪಂ ಇಒ ಲಿಂಗಸುಗೂರು</span></div>.<div><blockquote>ಗುರುಗುಂಟಾ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. </blockquote><span class="attribution">ಶಿವು, ಯಲಗಟ್ಟಾ ಗ್ರಾಮಸ್ಥ</span></div>.<div><blockquote>ಸರ್ಕಾರದಿಂದ ವೇತನ ಪಡೆಯುವ ಅಧಿಕಾರಿಗಳು ಎಸಿ ಕಚೇರಿಯಿಂದ ಹೊರಬಂದು ಜನರಿಗೆ ಕುಡಿಯುವ ನೀರು ಒದಗಿಸಿಕೊಡಬೇಕು. </blockquote><span class="attribution"> ರಮೇಶ ಪವಾರ, ಗುರುಗುಂಟಾ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>