<p>ಹಟ್ಟಿ ಚಿನ್ನದ ಗಣಿ: ‘ಬೇಸಿಗೆಯಲ್ಲಿ ಅರವಟಿಗೆಯಿಂದ ಜನರಿಗೆ ಅನುಕೂಲವಾಗಲಿದೆ’ ಎಂದು ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರಘು ನಾಯಕ ಹೇಳಿದರು.</p>.<p>ಪಟ್ಟಣದ ಹಳೆ ಸಿನಿಮಾ ಟಾಕೀಸ್ ಹತ್ತಿರ ಶ್ರೀರಾಮ ಸೇನೆ ಸಂಘಟನೆಯಿಂದ ನಿರ್ಮಿಸಿದ ಕುಡಿಯುವ ನೀರಿನ ಅರವಟಿಗೆಗೆ ಚಾಲನೆ ನೀಡಿ ಮಾತನಾಡಿದರು.</p>.<p>‘ಶುದ್ದ, ತಂಪಾದ ಕುಡಿಯುವ ನೀರು ಕೊಡುವ ಸಮಾಜಮುಖಿ ಕಾರ್ಯ ನಿರಂತರವಾಗಿ ನಡೆಯಲಿದೆ. ಅರವಟಿಗೆಯಲ್ಲಿಯ ಮಡಕೆಗಳಿಗೆ ವಿವಿಧ ಸಂಘ–ಸಂಸ್ಥೆಗಳು, ಕೆಲವರು ವೈಯುಕ್ತಿಕವಾಗಿಯೂ ನೀರು ತುಂಬಿಸುವ ಕಾಯಕದಲ್ಲಿ ತೊಡಗಿದ್ದಾರೆ. ಇಂಥ ಕಾರ್ಯಕ್ಕೆ ಯುವಕರು ಮುಂದೆ ಬಂದು ಸಮಾಜ ಸೇವೆ ಮಾಡಬೇಕು’ ಎಂದು ಹೇಳಿದರು.</p>.<p>ಇದೇ ವೇಳೆ ಶ್ರೀರಾಮ ನವಮಿಯ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಯುಗಾದಿ ಹಬ್ಬದ ನಿಮಿತ್ತ ಬೇವು ವಿತರಣೆ ಮಾಡಲಾಯಿತು.</p>.<p>ಮುಖಂಡರಾದ ಹನುಮಂತ ರೆಡ್ಡಿ, ಬಸವರಾಜಗೌಡ ಗುರಿಕಾರ, ಪರಮೇಶ ಯಾದವ, ಶರಣುಗೌಡ ಗುರಿಕಾರ, ಪ.ಪಂ ಮಾಜಿ ಸದಸ್ಯ ರಂಗನಾಥ ಮುಂಡರಗಿ, ಎಂ.ಸಿ.ಚಂದ್ರಶೇಖರ ನಾಯಕ, ಸದಾನಂದ ಕಟ್ಟಿಮನಿ, ಚನ್ನಬಸವ ನಾಯಕ, ಸುರೇಶಗೌಡ ಗುರಿಕಾರ, ಅರುಣ್ ಹಾಗೂ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-32-1942097756</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಟ್ಟಿ ಚಿನ್ನದ ಗಣಿ: ‘ಬೇಸಿಗೆಯಲ್ಲಿ ಅರವಟಿಗೆಯಿಂದ ಜನರಿಗೆ ಅನುಕೂಲವಾಗಲಿದೆ’ ಎಂದು ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರಘು ನಾಯಕ ಹೇಳಿದರು.</p>.<p>ಪಟ್ಟಣದ ಹಳೆ ಸಿನಿಮಾ ಟಾಕೀಸ್ ಹತ್ತಿರ ಶ್ರೀರಾಮ ಸೇನೆ ಸಂಘಟನೆಯಿಂದ ನಿರ್ಮಿಸಿದ ಕುಡಿಯುವ ನೀರಿನ ಅರವಟಿಗೆಗೆ ಚಾಲನೆ ನೀಡಿ ಮಾತನಾಡಿದರು.</p>.<p>‘ಶುದ್ದ, ತಂಪಾದ ಕುಡಿಯುವ ನೀರು ಕೊಡುವ ಸಮಾಜಮುಖಿ ಕಾರ್ಯ ನಿರಂತರವಾಗಿ ನಡೆಯಲಿದೆ. ಅರವಟಿಗೆಯಲ್ಲಿಯ ಮಡಕೆಗಳಿಗೆ ವಿವಿಧ ಸಂಘ–ಸಂಸ್ಥೆಗಳು, ಕೆಲವರು ವೈಯುಕ್ತಿಕವಾಗಿಯೂ ನೀರು ತುಂಬಿಸುವ ಕಾಯಕದಲ್ಲಿ ತೊಡಗಿದ್ದಾರೆ. ಇಂಥ ಕಾರ್ಯಕ್ಕೆ ಯುವಕರು ಮುಂದೆ ಬಂದು ಸಮಾಜ ಸೇವೆ ಮಾಡಬೇಕು’ ಎಂದು ಹೇಳಿದರು.</p>.<p>ಇದೇ ವೇಳೆ ಶ್ರೀರಾಮ ನವಮಿಯ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಯುಗಾದಿ ಹಬ್ಬದ ನಿಮಿತ್ತ ಬೇವು ವಿತರಣೆ ಮಾಡಲಾಯಿತು.</p>.<p>ಮುಖಂಡರಾದ ಹನುಮಂತ ರೆಡ್ಡಿ, ಬಸವರಾಜಗೌಡ ಗುರಿಕಾರ, ಪರಮೇಶ ಯಾದವ, ಶರಣುಗೌಡ ಗುರಿಕಾರ, ಪ.ಪಂ ಮಾಜಿ ಸದಸ್ಯ ರಂಗನಾಥ ಮುಂಡರಗಿ, ಎಂ.ಸಿ.ಚಂದ್ರಶೇಖರ ನಾಯಕ, ಸದಾನಂದ ಕಟ್ಟಿಮನಿ, ಚನ್ನಬಸವ ನಾಯಕ, ಸುರೇಶಗೌಡ ಗುರಿಕಾರ, ಅರುಣ್ ಹಾಗೂ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-32-1942097756</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>