<p>ರಾಯಚೂರು: ಜನಗಣತಿ ಕಾರ್ಯಗಳಲ್ಲಿ ತೊಡಗಿರುವ ಗಣತಿದಾರರು ಬಿಸಿಗಾಳಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ರಾಜ್ಯ ಜನಗಣತಿ ನೋಡಲ್ ಅಧಿಕಾರಿ ಮನೋಜಕುಮಾರ ಮೀನಾ ಸಲಹೆ ನೀಡಿದ್ದಾರೆ.</p>.<p>ಬೆಳಿಗ್ಗೆ ಬೇಗ ಮತ್ತು ಸಂಜೆ ಕ್ಷೇತ್ರ ಭೇಟಿಗಳನ್ನು ಯೋಜಿಸಬೇಕು, ಮಧ್ಯಾಹ್ನ 12ರಿಂದ 3:30ರವರೆಗೆ ಬಿಸಿಲಿನಿಂದ ತಪ್ಪಿಸಬೇಕು. ನೆರಳು ಅಥವಾ ತಂಪಾದ ಸ್ಥಳಗಳಲ್ಲಿ ಕಾಲಕಾಲಕ್ಕೆ ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.</p>.<p>ದಾಹವಾಗದಿದ್ದರೂ ಪ್ರತಿ 20–30 ನಿಮಿಷಕ್ಕೊಮ್ಮೆ ನೀರು ಕುಡಿಯಬೇಕು, ಸಾಧ್ಯವಾದಲ್ಲಿ ಮಜ್ಜಿಗೆ, ನಿಂಬೆ ಷರಬತ್ತು, ಎಳನೀರು ಸೇರಿದಂತೆ ಪಾನೀಯಗಳನ್ನು ಸೇವಿಸಬೇಕು ಎಂದು ತಿಳಿಸಿದ್ದಾರೆ.</p>.<p>ತಲೆಸುತ್ತು, ದಣಿವು, ತಲೆನೋವು, ವಾಂತಿ, ಅತಿಯಾದ ಬೆವರು ಅಥವಾ ಗೊಂದಲ ಮುಂತಾದ ಉಷ್ಣ ಸಂಬಂಧಧಿತ ಲಕ್ಷಣಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ನೆರಳು ಅಥವಾ ತಂಪಾದ ಸ್ಥಳಕ್ಕೆ ಹೋಗಿ, ಸಮರ್ಪಕವಾಗಿ ನೀರು ಸೇವಿಸಿ ಮತ್ತು ತಕ್ಷಣ ವೈದ್ಯಕೀಯ ಸಹಾಯ ಪಡೆಯಬೇಕು ಎಂದು ಹೇಳಿದ್ದಾರೆ.</p>.<p>ಮೊದಲಿನಿಂದ ಆರೋಗ್ಯ ಸಮಸ್ಯೆ ಇರುವವರು ಹೆಚ್ಚುವರಿ ಮುನ್ನೆಚ್ಚರಿಕೆ ವಹಿಸಬೇಕು. ಕ್ಷೇತ್ರ ಕರ್ತವ್ಯದ ವೇಳೆ ಸಮೀಪದ ಆರೋಗ್ಯ ಕೇಂದ್ರಗಳ ವಿವರ ಮತ್ತು ತುರ್ತು ಸಂಪರ್ಕ ದೂರವಾಣಿ ಸಂಖ್ಯೆಗಳನ್ನು ಸದಾ ಕೈಗೆಟುಕುವಂತೆ ಇಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-32-795326709</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಜನಗಣತಿ ಕಾರ್ಯಗಳಲ್ಲಿ ತೊಡಗಿರುವ ಗಣತಿದಾರರು ಬಿಸಿಗಾಳಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ರಾಜ್ಯ ಜನಗಣತಿ ನೋಡಲ್ ಅಧಿಕಾರಿ ಮನೋಜಕುಮಾರ ಮೀನಾ ಸಲಹೆ ನೀಡಿದ್ದಾರೆ.</p>.<p>ಬೆಳಿಗ್ಗೆ ಬೇಗ ಮತ್ತು ಸಂಜೆ ಕ್ಷೇತ್ರ ಭೇಟಿಗಳನ್ನು ಯೋಜಿಸಬೇಕು, ಮಧ್ಯಾಹ್ನ 12ರಿಂದ 3:30ರವರೆಗೆ ಬಿಸಿಲಿನಿಂದ ತಪ್ಪಿಸಬೇಕು. ನೆರಳು ಅಥವಾ ತಂಪಾದ ಸ್ಥಳಗಳಲ್ಲಿ ಕಾಲಕಾಲಕ್ಕೆ ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.</p>.<p>ದಾಹವಾಗದಿದ್ದರೂ ಪ್ರತಿ 20–30 ನಿಮಿಷಕ್ಕೊಮ್ಮೆ ನೀರು ಕುಡಿಯಬೇಕು, ಸಾಧ್ಯವಾದಲ್ಲಿ ಮಜ್ಜಿಗೆ, ನಿಂಬೆ ಷರಬತ್ತು, ಎಳನೀರು ಸೇರಿದಂತೆ ಪಾನೀಯಗಳನ್ನು ಸೇವಿಸಬೇಕು ಎಂದು ತಿಳಿಸಿದ್ದಾರೆ.</p>.<p>ತಲೆಸುತ್ತು, ದಣಿವು, ತಲೆನೋವು, ವಾಂತಿ, ಅತಿಯಾದ ಬೆವರು ಅಥವಾ ಗೊಂದಲ ಮುಂತಾದ ಉಷ್ಣ ಸಂಬಂಧಧಿತ ಲಕ್ಷಣಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ನೆರಳು ಅಥವಾ ತಂಪಾದ ಸ್ಥಳಕ್ಕೆ ಹೋಗಿ, ಸಮರ್ಪಕವಾಗಿ ನೀರು ಸೇವಿಸಿ ಮತ್ತು ತಕ್ಷಣ ವೈದ್ಯಕೀಯ ಸಹಾಯ ಪಡೆಯಬೇಕು ಎಂದು ಹೇಳಿದ್ದಾರೆ.</p>.<p>ಮೊದಲಿನಿಂದ ಆರೋಗ್ಯ ಸಮಸ್ಯೆ ಇರುವವರು ಹೆಚ್ಚುವರಿ ಮುನ್ನೆಚ್ಚರಿಕೆ ವಹಿಸಬೇಕು. ಕ್ಷೇತ್ರ ಕರ್ತವ್ಯದ ವೇಳೆ ಸಮೀಪದ ಆರೋಗ್ಯ ಕೇಂದ್ರಗಳ ವಿವರ ಮತ್ತು ತುರ್ತು ಸಂಪರ್ಕ ದೂರವಾಣಿ ಸಂಖ್ಯೆಗಳನ್ನು ಸದಾ ಕೈಗೆಟುಕುವಂತೆ ಇಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-32-795326709</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>