<p><strong>ರಾಯಚೂರು:</strong> ತುಂಗಭದ್ರಾ ಜಲಾಶಯದಿಂದ 1,40,000 ಕ್ಯೂಸೆಕ್ ನೀರು ಹರಿಸುವ ಸಾಧ್ಯತೆ ಇರುವ ಕಾರಣ ತುಂಗಭದ್ರಾ ನದಿಯ ಕೆಳಭಾಗದ ಹಳ್ಳಿಗಳ ಜನರಿಗೆ ತೊಂದರೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಸೂಚನೆ ನೀಡಿದ್ದಾರೆ.</p>.<p>ತುಂಗಭದ್ರಾ ಜಲಾಶಯದ ಅಧಿಕಾರಿಗಳಿಂದ ಎಚ್ಚರಿಕೆ ಸಂದೇಶ ಬಂದಿರುವುದರಿಂದ ಅಧಿಕಾರಿಗಳು, ತುಂಗಭದ್ರಾ ಅಣೆಕಟ್ಟಿನ ಕೆಳಭಾಗದ ಪ್ರದೇಶದ ಬಗ್ಗೆ ಕಾಳಜಿ ವಹಿಸಬೇಕು ಎಂದು ಹೇಳಿದ್ದಾರೆ.</p>.<p>ಶೀಲಹಳ್ಳಿ ಸೇತುವೆ ಮುಳುಗಡೆ: ರಾಯಚೂರು ಜಿಲ್ಲೆಯಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ 8 ಮಿ.ಮೀ ಹಾಗೂ ಲಿಂಗಸುಗೂರು ಪಟ್ಟಣದಲ್ಲಿ 4.9 ಮಿ.ಮೀ ಮಳೆಯಾಗಿದೆ.</p>.<p>ರಾಯಚೂರು ತಾಲ್ಲೂಕಿನಲ್ಲಿ 7 ಮಿ.ಮೀ, ಸಿರವಾರ ತಾಲ್ಲೂಕಿನಲ್ಲಿ 6.6 ಮಿ.ಮೀ, ಮಾನ್ವಿ ತಾಲ್ಲೂಕಿನಲ್ಲಿ 5.8 ಮಿ.ಮೀ, ದೇವದುರ್ಗ ತಾಲ್ಲೂಕಿನಲ್ಲಿ 4.6 ಮಿ.ಮೀ, ಸಿಂಧನೂರು ತಾಲ್ಲೂಕಿನಲ್ಲಿ 1.4 ಮಿ.ಮೀ ಮಳೆಯಾಗಿದೆ.</p>.<p>ನಾರಾಯಣಪುರ ಜಲಾಶಯದಿಂದ ನೀರು ಬಿಟ್ಟಿರುವ ಕಾರಣ ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದ್ದು, ಇದರಿಂದಾಗಿ ನಾಲ್ಕು ಗ್ರಾಮಗಳ ಯಳಗುಂದಿ, ಹಂಚಿನಾಳ, ಕಡದರಗಡ್ಡಿ, ಯರಗೋಡಿ ನೇರ ಸಂಪರ್ಕ ಕಡಿದು ಹೋಗಿದೆ.</p>.<p class="Subhead">ನಗರದಲ್ಲಿ ಮುಂದುವರಿದ ಮಳೆ: ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ರಾಯಚೂರು ನಗರ ಪ್ರದೇಶದಲ್ಲಿ ಸಾಧಾರಣ ಮಳೆ ಮುಂದುವರಿದಿದೆ.</p>.<p>ಮಳೆಗೆ ನಗರದ ರಸ್ತೆಗಳು ಕೆಸರುಮಯವಾಗಿದೆ. ಅನೇಕ ರಸ್ತೆಗಳ ಮಧ್ಯೆ ಗುಂಡಿಗಳು ಬಿದ್ದಿವೆ. ನೌಕರರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕೊಡೆ ಹಿಡಿದುಕೊಂಡು ತೆರಳಬೇಕಾಯಿತು. ಮೂರು ದಿನಗಳಿಂದ ಸೂರ್ಯನ ದರ್ಶನವಾಗಿಲ್ಲ.</p>.<p>ಶನಿವಾರದ ವರೆಗೂ ದಟ್ಟ ಮೋಡಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ತುಂಗಭದ್ರಾ ಜಲಾಶಯದಿಂದ 1,40,000 ಕ್ಯೂಸೆಕ್ ನೀರು ಹರಿಸುವ ಸಾಧ್ಯತೆ ಇರುವ ಕಾರಣ ತುಂಗಭದ್ರಾ ನದಿಯ ಕೆಳಭಾಗದ ಹಳ್ಳಿಗಳ ಜನರಿಗೆ ತೊಂದರೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಸೂಚನೆ ನೀಡಿದ್ದಾರೆ.</p>.<p>ತುಂಗಭದ್ರಾ ಜಲಾಶಯದ ಅಧಿಕಾರಿಗಳಿಂದ ಎಚ್ಚರಿಕೆ ಸಂದೇಶ ಬಂದಿರುವುದರಿಂದ ಅಧಿಕಾರಿಗಳು, ತುಂಗಭದ್ರಾ ಅಣೆಕಟ್ಟಿನ ಕೆಳಭಾಗದ ಪ್ರದೇಶದ ಬಗ್ಗೆ ಕಾಳಜಿ ವಹಿಸಬೇಕು ಎಂದು ಹೇಳಿದ್ದಾರೆ.</p>.<p>ಶೀಲಹಳ್ಳಿ ಸೇತುವೆ ಮುಳುಗಡೆ: ರಾಯಚೂರು ಜಿಲ್ಲೆಯಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ 8 ಮಿ.ಮೀ ಹಾಗೂ ಲಿಂಗಸುಗೂರು ಪಟ್ಟಣದಲ್ಲಿ 4.9 ಮಿ.ಮೀ ಮಳೆಯಾಗಿದೆ.</p>.<p>ರಾಯಚೂರು ತಾಲ್ಲೂಕಿನಲ್ಲಿ 7 ಮಿ.ಮೀ, ಸಿರವಾರ ತಾಲ್ಲೂಕಿನಲ್ಲಿ 6.6 ಮಿ.ಮೀ, ಮಾನ್ವಿ ತಾಲ್ಲೂಕಿನಲ್ಲಿ 5.8 ಮಿ.ಮೀ, ದೇವದುರ್ಗ ತಾಲ್ಲೂಕಿನಲ್ಲಿ 4.6 ಮಿ.ಮೀ, ಸಿಂಧನೂರು ತಾಲ್ಲೂಕಿನಲ್ಲಿ 1.4 ಮಿ.ಮೀ ಮಳೆಯಾಗಿದೆ.</p>.<p>ನಾರಾಯಣಪುರ ಜಲಾಶಯದಿಂದ ನೀರು ಬಿಟ್ಟಿರುವ ಕಾರಣ ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದ್ದು, ಇದರಿಂದಾಗಿ ನಾಲ್ಕು ಗ್ರಾಮಗಳ ಯಳಗುಂದಿ, ಹಂಚಿನಾಳ, ಕಡದರಗಡ್ಡಿ, ಯರಗೋಡಿ ನೇರ ಸಂಪರ್ಕ ಕಡಿದು ಹೋಗಿದೆ.</p>.<p class="Subhead">ನಗರದಲ್ಲಿ ಮುಂದುವರಿದ ಮಳೆ: ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ರಾಯಚೂರು ನಗರ ಪ್ರದೇಶದಲ್ಲಿ ಸಾಧಾರಣ ಮಳೆ ಮುಂದುವರಿದಿದೆ.</p>.<p>ಮಳೆಗೆ ನಗರದ ರಸ್ತೆಗಳು ಕೆಸರುಮಯವಾಗಿದೆ. ಅನೇಕ ರಸ್ತೆಗಳ ಮಧ್ಯೆ ಗುಂಡಿಗಳು ಬಿದ್ದಿವೆ. ನೌಕರರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕೊಡೆ ಹಿಡಿದುಕೊಂಡು ತೆರಳಬೇಕಾಯಿತು. ಮೂರು ದಿನಗಳಿಂದ ಸೂರ್ಯನ ದರ್ಶನವಾಗಿಲ್ಲ.</p>.<p>ಶನಿವಾರದ ವರೆಗೂ ದಟ್ಟ ಮೋಡಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>