<p>ರಾಯಚೂರು: ‘ರಕ್ತಸ್ರಾವ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಹಿಮೋಫಿಲಿಯಾ ಇಂಜೆಕ್ಷನ್ ನೀಡುತ್ತಿದ್ದು, ಕಾಯಿಲೆಗೆ ಒಳಗಾದ ಮಕ್ಕಳು ಇದರ ಸದುಪಯೋಗ ಪಡೆಯಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬು ಸಲಹೆ ನೀಡಿದರು.</p>.<p>ಇಲ್ಲಿನ ರಿಮ್ಸ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಿಮ್ಸ್ ಆಸ್ಪತ್ರೆ ಸಹಯೋಗದಲ್ಲಿ ಕುಸುಮ ಸಂಜೀವಿನಿ ಯೋಜನೆಯಡಿ ಈಚೆಗೆ ಹಮ್ಮಿಕೊಂಡಿದ್ದ ಚುಚ್ಚುಮದ್ದು ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಈಗಗಾಲೇ 18 ಜನರಿಗೆ ಚುಚ್ಚುಮದ್ದು ನೀಡಲಾಗಿದ್ದು, ಒಂದು ಇಂಜೆಕ್ಷನ್ ಬೆಲೆ ₹1.4 ಲಕ್ಷ ಆಗಲಿದೆ. ಇದರಿಂದ ಹಿಮೋಫಿಲಿಯಾ ರೋಗಿಗಳಿಗೆ ಅನುಕೂಲವಾಗಲಿದೆ ಎಂದರು.</p>.<p>ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಶಂಕರ, ಜಿಲ್ಲಾ ಆರ್.ಸಿ.ಆರ್ ಅಧಿಕಾರಿ ಡಾ.ನಂದಿತಾ ಎಂ.ಎನ್. ಮಾತನಾಡಿದರು.</p>.<p>ಈ ಸಂದರ್ಭದಲ್ಲಿ ವೈದ್ಯಕೀಯ ಅಧೀಕ್ಷಕ ಡಾ.ಸೂರ್ಯಕಾಂತ ಎಂ, ರಿಮ್ಸ್ ಕಾಲೇಜಿನ ಪ್ರಾಚಾರ್ಯ ರಾಹುಲ್ ಸಿ.ಕೀರ್ತೆ, ತಜ್ಞ ವೈದ್ಯ ಡಾ.ಬಸವರಾಜ, ಮಕ್ಕಳ ತಜ್ಞ ಡಾ.ಸುಕಾಣಿ, ಡಾ.ನಸೀಮಾ ಬೇಗಂ, ಪೆಥಾಲಜಿಸ್ಟ್ ಡಾ.ರಶೀದ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹಮ್ಮದ್ ಶಾಕೀರ್ ಮೊಹಿಯುದ್ದೀನ್ ಅವರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-32-1189258068</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ‘ರಕ್ತಸ್ರಾವ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಹಿಮೋಫಿಲಿಯಾ ಇಂಜೆಕ್ಷನ್ ನೀಡುತ್ತಿದ್ದು, ಕಾಯಿಲೆಗೆ ಒಳಗಾದ ಮಕ್ಕಳು ಇದರ ಸದುಪಯೋಗ ಪಡೆಯಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬು ಸಲಹೆ ನೀಡಿದರು.</p>.<p>ಇಲ್ಲಿನ ರಿಮ್ಸ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಿಮ್ಸ್ ಆಸ್ಪತ್ರೆ ಸಹಯೋಗದಲ್ಲಿ ಕುಸುಮ ಸಂಜೀವಿನಿ ಯೋಜನೆಯಡಿ ಈಚೆಗೆ ಹಮ್ಮಿಕೊಂಡಿದ್ದ ಚುಚ್ಚುಮದ್ದು ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಈಗಗಾಲೇ 18 ಜನರಿಗೆ ಚುಚ್ಚುಮದ್ದು ನೀಡಲಾಗಿದ್ದು, ಒಂದು ಇಂಜೆಕ್ಷನ್ ಬೆಲೆ ₹1.4 ಲಕ್ಷ ಆಗಲಿದೆ. ಇದರಿಂದ ಹಿಮೋಫಿಲಿಯಾ ರೋಗಿಗಳಿಗೆ ಅನುಕೂಲವಾಗಲಿದೆ ಎಂದರು.</p>.<p>ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಶಂಕರ, ಜಿಲ್ಲಾ ಆರ್.ಸಿ.ಆರ್ ಅಧಿಕಾರಿ ಡಾ.ನಂದಿತಾ ಎಂ.ಎನ್. ಮಾತನಾಡಿದರು.</p>.<p>ಈ ಸಂದರ್ಭದಲ್ಲಿ ವೈದ್ಯಕೀಯ ಅಧೀಕ್ಷಕ ಡಾ.ಸೂರ್ಯಕಾಂತ ಎಂ, ರಿಮ್ಸ್ ಕಾಲೇಜಿನ ಪ್ರಾಚಾರ್ಯ ರಾಹುಲ್ ಸಿ.ಕೀರ್ತೆ, ತಜ್ಞ ವೈದ್ಯ ಡಾ.ಬಸವರಾಜ, ಮಕ್ಕಳ ತಜ್ಞ ಡಾ.ಸುಕಾಣಿ, ಡಾ.ನಸೀಮಾ ಬೇಗಂ, ಪೆಥಾಲಜಿಸ್ಟ್ ಡಾ.ರಶೀದ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹಮ್ಮದ್ ಶಾಕೀರ್ ಮೊಹಿಯುದ್ದೀನ್ ಅವರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-32-1189258068</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>