<p>ರಾಯಚೂರು: ಜಿಲ್ಲೆಯ ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಗುರು ಬೋಳಬಸವೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ಏ.20 ರಂದು ಸಾಮೂಹಿಕ ವಿವಾಹ, ಉಡಿ ತುಂಬುವ ಕಾರ್ಯಕ್ರಮ, ಆಧ್ಯಾತ್ಮಿಕ, ಸಾಂಸ್ಕೃತಿಕ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಾಸ್ಥಾನದ 5ನೇ ಪಟ್ಟಾಧ್ಯಕ್ಷ ಎಸ್.ನರಸಣ್ಣ ಪೂಜಾರಿ ತಿಳಿಸಿದರು.</p>.<p>ಅಂದು ಬೆಳಿಗ್ಗೆ ವಿಶೇಷ ಜಲಾಭಿಷೇಕ ಮತ್ತು ಬಿಲ್ವಾರ್ಚನೆ ನಡೆಯಲಿದೆ. ಕಾಗೋನೆಟ್ ಕಲಾವಿದರು, ಗಣಪತಿ ಶಾರದಾ ಪೂಜಾರಿ ದಿನ್ನಿ ಮತ್ತು ತಬಲಾ ಸಾಥ್ ರಾಘವೇಂದ್ರ ನಾಯಕ, ಕೆ. ಮಹಾಲಕ್ಷ್ಮೀ ಅವರಿಂದ ಸಂಗಿತ ಕಾರ್ಯಕ್ರಮ ನಡೆಯಲಿದೆ ಎಂದು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.</p>.<p>ಮಧ್ಯಾಹ್ನ12 ರಿಂದ 12.36 ರವರೆಗೆ 11 ಸಾಮೂಹಿಕ ವಿವಾಹ ಕಾರ್ಯಕ್ರಮ, ಉಡಿ ತುಂಬುವ ಕಾರ್ಯಕ್ರಮ ಹಾಗೂ ಧರ್ಮಸಭೆ ನಡೆಯಲಿದೆ. ಹೊಕ್ರಾಣಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ವಿವಿಧ ಮಠದ ಮಠಾಧಿಶರು, ಶಾಸಕರು, ಜನ ಪ್ರತಿನಿಧಿಗಳು ಪಾಲ್ಗೊಳ್ಳವರು ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ವಕೀಲ ಶಿವುಕುಮಾರ, ಉದಯಕುಮಾರ, ನರಸಿಂಹ ದೊರೆ, ಮಾರುತಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-32-1702264660</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಜಿಲ್ಲೆಯ ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಗುರು ಬೋಳಬಸವೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ಏ.20 ರಂದು ಸಾಮೂಹಿಕ ವಿವಾಹ, ಉಡಿ ತುಂಬುವ ಕಾರ್ಯಕ್ರಮ, ಆಧ್ಯಾತ್ಮಿಕ, ಸಾಂಸ್ಕೃತಿಕ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಾಸ್ಥಾನದ 5ನೇ ಪಟ್ಟಾಧ್ಯಕ್ಷ ಎಸ್.ನರಸಣ್ಣ ಪೂಜಾರಿ ತಿಳಿಸಿದರು.</p>.<p>ಅಂದು ಬೆಳಿಗ್ಗೆ ವಿಶೇಷ ಜಲಾಭಿಷೇಕ ಮತ್ತು ಬಿಲ್ವಾರ್ಚನೆ ನಡೆಯಲಿದೆ. ಕಾಗೋನೆಟ್ ಕಲಾವಿದರು, ಗಣಪತಿ ಶಾರದಾ ಪೂಜಾರಿ ದಿನ್ನಿ ಮತ್ತು ತಬಲಾ ಸಾಥ್ ರಾಘವೇಂದ್ರ ನಾಯಕ, ಕೆ. ಮಹಾಲಕ್ಷ್ಮೀ ಅವರಿಂದ ಸಂಗಿತ ಕಾರ್ಯಕ್ರಮ ನಡೆಯಲಿದೆ ಎಂದು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.</p>.<p>ಮಧ್ಯಾಹ್ನ12 ರಿಂದ 12.36 ರವರೆಗೆ 11 ಸಾಮೂಹಿಕ ವಿವಾಹ ಕಾರ್ಯಕ್ರಮ, ಉಡಿ ತುಂಬುವ ಕಾರ್ಯಕ್ರಮ ಹಾಗೂ ಧರ್ಮಸಭೆ ನಡೆಯಲಿದೆ. ಹೊಕ್ರಾಣಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ವಿವಿಧ ಮಠದ ಮಠಾಧಿಶರು, ಶಾಸಕರು, ಜನ ಪ್ರತಿನಿಧಿಗಳು ಪಾಲ್ಗೊಳ್ಳವರು ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ವಕೀಲ ಶಿವುಕುಮಾರ, ಉದಯಕುಮಾರ, ನರಸಿಂಹ ದೊರೆ, ಮಾರುತಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-32-1702264660</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>