<p><strong>ರಾಯಚೂರು:</strong> ಇಲ್ಲಿನ ಜವಾಹರನಗರದ ಸಮೀಪ ಕರ್ನಾಟಕ ಸಂಘದ ಬಳಿ ಮನೆಯಲ್ಲಿ ಗುರುವಾರ ಚಿನ್ನಾಭರಣ ಕಳ್ಳತನ ನಡೆದಿದೆ.</p>.<p>ನರಸಿಂಹಮೂರ್ತಿ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಅವರು ಮನೆಯಲ್ಲಿ ಇರದಿದ್ದಾಗ ಅಲಮಾರಿಯಲ್ಲಿದ್ದ 21 ತೊಲ ಚಿನ್ನಾಭರಣ ಸೇರಿ ₹ 2 ಕೋಟಿ ಮೌಲ್ಯದ ಅಭರಣ ಕಳ್ಳತನವಾಗಿದೆ ಎನ್ನಲಾಗಿದ್ದು, ಖಚಿತ ಮಾಹಿತಿ ಸಿಕ್ಕಿಲ್ಲ. ಬೆಂಗಳೂರಿನಿಂದ ಗುರುವಾರ ಮುಂಜಾನೆ ಮನೆಗೆ ಬಂದಾಗ ಮನೆಯಲ್ಲಿ ಅಲಮಾರಿ ಚೆಲ್ಲಾಪಿಲ್ಲಿಯಾಗಿರುವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>ಪೊಲೀಸರು ಶ್ವಾನ ದಳ, ಬೆರಳಚ್ಚು ತಜ್ಞರ ತಂಡದೊಂದಿಗೆ ತನಿಖೆ ಪ್ರಾರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷುಗಿರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹರೀಶ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p>ಮನೆಯ ಹಿಂಬಾಗಿಲು ಮುರಿದು ಕಳ್ಳತನ ನಡೆದಿದೆ. ಎಷ್ಟು ಮೌಲ್ಯದ ಕಳ್ಳತನವಾಗಿದೆ ಎಂದು ನಿಖರವಾಗಿ ಗೊತ್ತಾಗಿಲ್ಲ ಎಂದು ಎಸ್ಪಿ ಅರುಣಾಂಗ್ಷುಗಿರಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-32-540235732</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಇಲ್ಲಿನ ಜವಾಹರನಗರದ ಸಮೀಪ ಕರ್ನಾಟಕ ಸಂಘದ ಬಳಿ ಮನೆಯಲ್ಲಿ ಗುರುವಾರ ಚಿನ್ನಾಭರಣ ಕಳ್ಳತನ ನಡೆದಿದೆ.</p>.<p>ನರಸಿಂಹಮೂರ್ತಿ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಅವರು ಮನೆಯಲ್ಲಿ ಇರದಿದ್ದಾಗ ಅಲಮಾರಿಯಲ್ಲಿದ್ದ 21 ತೊಲ ಚಿನ್ನಾಭರಣ ಸೇರಿ ₹ 2 ಕೋಟಿ ಮೌಲ್ಯದ ಅಭರಣ ಕಳ್ಳತನವಾಗಿದೆ ಎನ್ನಲಾಗಿದ್ದು, ಖಚಿತ ಮಾಹಿತಿ ಸಿಕ್ಕಿಲ್ಲ. ಬೆಂಗಳೂರಿನಿಂದ ಗುರುವಾರ ಮುಂಜಾನೆ ಮನೆಗೆ ಬಂದಾಗ ಮನೆಯಲ್ಲಿ ಅಲಮಾರಿ ಚೆಲ್ಲಾಪಿಲ್ಲಿಯಾಗಿರುವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>ಪೊಲೀಸರು ಶ್ವಾನ ದಳ, ಬೆರಳಚ್ಚು ತಜ್ಞರ ತಂಡದೊಂದಿಗೆ ತನಿಖೆ ಪ್ರಾರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷುಗಿರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹರೀಶ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p>ಮನೆಯ ಹಿಂಬಾಗಿಲು ಮುರಿದು ಕಳ್ಳತನ ನಡೆದಿದೆ. ಎಷ್ಟು ಮೌಲ್ಯದ ಕಳ್ಳತನವಾಗಿದೆ ಎಂದು ನಿಖರವಾಗಿ ಗೊತ್ತಾಗಿಲ್ಲ ಎಂದು ಎಸ್ಪಿ ಅರುಣಾಂಗ್ಷುಗಿರಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-32-540235732</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>