<p><strong>ರಾಯಚೂರು: ‘</strong>ಮುಂಗಾರು ಹಂಗಾಮಿನಲ್ಲಿ ಖರೀದಿಸಿದ ಜೋಳದ ಬಾಕಿ ಹಣ ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಜಿಲ್ಲೆಯ ರೈತರನ್ನು ಸಂಘಟಿಸಿ, ಹೋರಾಟ ನಡೆಸಲಾಗುವುದು’ ಎಂದು ರೈತ ಮುಖಂಡ ಅಮೀನ್ ಪಾಷಾ ದಿದ್ದಿಗಿ ಎಚ್ಚರಿಕೆ ನೀಡಿದರು.</p>.<p>‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಂಗಾರು ಹಂಗಾಮಿನಲ್ಲಿ ರೈತರಿಂದ 8 ಲಕ್ಷ 20 ಸಾವಿರ ಕ್ವಿಂಟಲ್ ಜೋಳ ಖರೀದಿಸಿದೆ. ಇದುವರೆಗೆ ಕೇವಲ 80 ಸಾವಿರ ಕ್ವಿಂಟಲ್ ಜೋಳದ ₹38.55 ಕೋಟಿ ಮಾತ್ರ ರೈತರಿಗೆ ಪಾವತಿಸಿದೆ. ಇನ್ನೂ ₹303 ಕೋಟಿ 31 ಲಕ್ಷ 80 ಸಾವಿರ ರೈತರಿಗೆ ನೀಡಬೇಕು. ಜೋಳ ಕಟಾವು ಮಾಡಿ ಆರು ತಿಂಗಳು ಕಳೆದರೂ ಸಂಪೂರ್ಣ ಹಣ ಬಿಡುಗಡೆಯಾಗಿಲ್ಲ’ ಎಂದು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಮುಕ್ತ ಮಾರುಕಟ್ಟೆಯಲ್ಲಿ ಜೋಳಕ್ಕೆ ಸಮರ್ಪಕ ಬೆಲೆ ದೊರೆಯದೆ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಈ ನಡುವೆ ಹಿಂಗಾರು ಜೋಳ ಖರೀದಿ ಪ್ರಕ್ರಿಯೆಯೂ ಆರಂಭವಾಗಿದ್ದು, ರೈತರು ತಂದಿರುವ ಹೊಸ ಜೋಳ ನುಸಿಯಾಗುತ್ತಿರುವುದರಿಂದ ಮತ್ತಷ್ಟು ಆತಂಕ ಎದುರಾಗಿದೆ’ ಎಂದು ತಿಳಿಸಿದರು.</p>.<p>‘ಈ ಸಮಸ್ಯೆ ನೂತನ ಜಿಲ್ಲಾಧಿಕಾರಿ ಗಮನಕ್ಕೂ ತರಲಾಗಿದೆ. ಜಿಲ್ಲಾಡಳಿತ ಹಾಗೂ ಸರ್ಕಾರ ರೈತರ ಸಂಕಷ್ಟವನ್ನು ಅರ್ಥಮಾಡಿಕೊಂಡು ವಿಳಂಬ ಮಾಡದೇ ತಕ್ಷಣ ಮುಂಗಾರು ಜೋಳದ ಬಾಕಿ ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡಬೇಕು’ ಎಂದರು.</p>.<p>ನಿಂಗಪ್ಪ, ಬಡೇಸಾಬ್, ಬಸವರಾಜ, ಪ್ರಹ್ಲಾದರೆಡ್ಡಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-32-360454133</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: ‘</strong>ಮುಂಗಾರು ಹಂಗಾಮಿನಲ್ಲಿ ಖರೀದಿಸಿದ ಜೋಳದ ಬಾಕಿ ಹಣ ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಜಿಲ್ಲೆಯ ರೈತರನ್ನು ಸಂಘಟಿಸಿ, ಹೋರಾಟ ನಡೆಸಲಾಗುವುದು’ ಎಂದು ರೈತ ಮುಖಂಡ ಅಮೀನ್ ಪಾಷಾ ದಿದ್ದಿಗಿ ಎಚ್ಚರಿಕೆ ನೀಡಿದರು.</p>.<p>‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಂಗಾರು ಹಂಗಾಮಿನಲ್ಲಿ ರೈತರಿಂದ 8 ಲಕ್ಷ 20 ಸಾವಿರ ಕ್ವಿಂಟಲ್ ಜೋಳ ಖರೀದಿಸಿದೆ. ಇದುವರೆಗೆ ಕೇವಲ 80 ಸಾವಿರ ಕ್ವಿಂಟಲ್ ಜೋಳದ ₹38.55 ಕೋಟಿ ಮಾತ್ರ ರೈತರಿಗೆ ಪಾವತಿಸಿದೆ. ಇನ್ನೂ ₹303 ಕೋಟಿ 31 ಲಕ್ಷ 80 ಸಾವಿರ ರೈತರಿಗೆ ನೀಡಬೇಕು. ಜೋಳ ಕಟಾವು ಮಾಡಿ ಆರು ತಿಂಗಳು ಕಳೆದರೂ ಸಂಪೂರ್ಣ ಹಣ ಬಿಡುಗಡೆಯಾಗಿಲ್ಲ’ ಎಂದು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಮುಕ್ತ ಮಾರುಕಟ್ಟೆಯಲ್ಲಿ ಜೋಳಕ್ಕೆ ಸಮರ್ಪಕ ಬೆಲೆ ದೊರೆಯದೆ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಈ ನಡುವೆ ಹಿಂಗಾರು ಜೋಳ ಖರೀದಿ ಪ್ರಕ್ರಿಯೆಯೂ ಆರಂಭವಾಗಿದ್ದು, ರೈತರು ತಂದಿರುವ ಹೊಸ ಜೋಳ ನುಸಿಯಾಗುತ್ತಿರುವುದರಿಂದ ಮತ್ತಷ್ಟು ಆತಂಕ ಎದುರಾಗಿದೆ’ ಎಂದು ತಿಳಿಸಿದರು.</p>.<p>‘ಈ ಸಮಸ್ಯೆ ನೂತನ ಜಿಲ್ಲಾಧಿಕಾರಿ ಗಮನಕ್ಕೂ ತರಲಾಗಿದೆ. ಜಿಲ್ಲಾಡಳಿತ ಹಾಗೂ ಸರ್ಕಾರ ರೈತರ ಸಂಕಷ್ಟವನ್ನು ಅರ್ಥಮಾಡಿಕೊಂಡು ವಿಳಂಬ ಮಾಡದೇ ತಕ್ಷಣ ಮುಂಗಾರು ಜೋಳದ ಬಾಕಿ ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡಬೇಕು’ ಎಂದರು.</p>.<p>ನಿಂಗಪ್ಪ, ಬಡೇಸಾಬ್, ಬಸವರಾಜ, ಪ್ರಹ್ಲಾದರೆಡ್ಡಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-32-360454133</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>