<p><strong>ಕವಿತಾಳ:</strong> ಮಸ್ಕಿ ತಾಲ್ಲೂಕಿನ ವಟಗಲ್ ಮತ್ತು ಅಮೀನಗಡ ಗ್ರಾಮದ ನಡುವಿನ ರಾಯಚೂರು–ಲಿಂಗಸುಗೂರು ರಾಜ್ಯ ಹೆದ್ದಾರಿಯಲ್ಲಿ ಜಿಂಕೆ ಮತ್ತು ಜಿಂಕೆ ಮರಿಯ ಕಳೆಬರ ಭಾನುವಾರ ಬೆಳಿಗ್ಗೆ ಕಂಡು ಬಂದಿದೆ.</p>.<p>ಜಿಂಕೆಗಳ ಮುಖದ ಮೇಲೆ ಗಾಯಗಳಾಗಿದ್ದು, ಬಾಯಿಯಿಂದ ರಕ್ತ ಸೋರುತ್ತಿರುವುದು ಕಂಡು ಬಂದಿದೆ. ರಸ್ತೆ ಜಿಗಿಯುವಾಗ ವಾಹನ ಡಿಕ್ಕಿ ಹೊಡೆದು ಜಿಂಕೆಗಳು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.</p>.<p>ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಬೈಕ್ ಮೇಲೆ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಸತ್ತು ಬಿದ್ದ ಜಿಂಕೆಗಳನ್ನು ಗಮನಿಸಿ ತಮ್ಮ ಮೊಬೈಲ್ನಲ್ಲಿ ಚಿತ್ರ ತೆಗೆದು, ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ದಾರಿಹೋಕರು ಜಿಂಕೆಗಳ ಕಳೆಬರ ತೆಗೆದು ರಸ್ತೆ ಬದಿ ಹಾಕಿದ್ದಾರೆ.</p>.<p>ತಾವು ದೇವಸ್ಥಾನಕ್ಕೆ ತೆರಳುವಾಗ ರಸ್ತೆಯಲ್ಲಿ ಜಿಂಕೆಗಳು ಸತ್ತು ಬಿದ್ದಿದ್ದವು ಎಂದು ಮಾಳಪ್ಪ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-32-832415606</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ:</strong> ಮಸ್ಕಿ ತಾಲ್ಲೂಕಿನ ವಟಗಲ್ ಮತ್ತು ಅಮೀನಗಡ ಗ್ರಾಮದ ನಡುವಿನ ರಾಯಚೂರು–ಲಿಂಗಸುಗೂರು ರಾಜ್ಯ ಹೆದ್ದಾರಿಯಲ್ಲಿ ಜಿಂಕೆ ಮತ್ತು ಜಿಂಕೆ ಮರಿಯ ಕಳೆಬರ ಭಾನುವಾರ ಬೆಳಿಗ್ಗೆ ಕಂಡು ಬಂದಿದೆ.</p>.<p>ಜಿಂಕೆಗಳ ಮುಖದ ಮೇಲೆ ಗಾಯಗಳಾಗಿದ್ದು, ಬಾಯಿಯಿಂದ ರಕ್ತ ಸೋರುತ್ತಿರುವುದು ಕಂಡು ಬಂದಿದೆ. ರಸ್ತೆ ಜಿಗಿಯುವಾಗ ವಾಹನ ಡಿಕ್ಕಿ ಹೊಡೆದು ಜಿಂಕೆಗಳು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.</p>.<p>ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಬೈಕ್ ಮೇಲೆ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಸತ್ತು ಬಿದ್ದ ಜಿಂಕೆಗಳನ್ನು ಗಮನಿಸಿ ತಮ್ಮ ಮೊಬೈಲ್ನಲ್ಲಿ ಚಿತ್ರ ತೆಗೆದು, ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ದಾರಿಹೋಕರು ಜಿಂಕೆಗಳ ಕಳೆಬರ ತೆಗೆದು ರಸ್ತೆ ಬದಿ ಹಾಕಿದ್ದಾರೆ.</p>.<p>ತಾವು ದೇವಸ್ಥಾನಕ್ಕೆ ತೆರಳುವಾಗ ರಸ್ತೆಯಲ್ಲಿ ಜಿಂಕೆಗಳು ಸತ್ತು ಬಿದ್ದಿದ್ದವು ಎಂದು ಮಾಳಪ್ಪ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-32-832415606</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>