<p>ಲಿಂಗಸುಗೂರು: ಪುರಸಭೆ ವ್ಯಾಪ್ತಿಯ ಹುಲಿಗುಡ್ಡ ಗ್ರಾಮಕ್ಕೆ ಸ್ಮಶಾನ ಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ್ ಸತ್ಯಮ್ಮ ಅವರಿಗೆ ಮನವಿ ಸಲ್ಲಿಸಿದರು.</p>.<p>ಹುಲಿಗುಡ್ಡದಲ್ಲಿ ಅಂತ್ಯಕ್ರಿಯೆ ಮಾಡಲು ಸ್ಮಶಾನ ಭೂಮಿ ಇಲ್ಲ. ಕಸಬಾಲಿಂಗಸುಗೂರಿನ ಸರ್ವೆ ನಂ–492ರಲ್ಲಿ ಒಟ್ಟು 47.38 ಎಕರೆ ಸರ್ಕಾರಿ ಭೂಮಿ ಇದೆ. ಅದರಲ್ಲಿ 4 ಎಕರೆಯನ್ನು ಸ್ಮಶಾನಕ್ಕೆ ಒದಗಿಸಬೇಕು. ಇದೇ ಭೂಮಿಯಲ್ಲಿ ಅಂತ್ಯಕ್ರಿಯೆ ಮಾಡುವಂತೆ ಅಧಿಕಾರಿಗಳು ಮೌಖಿಕವಾಗಿ ಹೇಳಿದ್ದರಿಂದ ಹಿಂದಿನಿಂದಲೂ ಅಲ್ಲಿಯೇ ಅಂತ್ಯಕ್ರಿಯೆ ಮಾಡಲಾಗುತ್ತಿತ್ತು. ಆದರೆ, ರುದ್ರಭೂಮಿಗೆ ಪ್ರತ್ಯೇಕ ಪಹಣಿ ಹಾಗೂ ಹದ್ದುಬಸ್ತು ಮಾಡಿಕೊಡಬೇಕು ಎಂದು ಆಗ್ರಹಿಸಿದರು.</p>.<p>ರವಿಕುಮಾರ ಭೋವಿ, ಗಣೇಶ, ವಿಜಯಕುಮಾರ, ರಾಚಪ್ಪ ಆಲ್ವಿ, ನಾಗಪ್ಪ, ಬಸವರಾಜ ಭಜಂತ್ರಿ, ಚಂದ್ರು ಬಡಿಗೇರ, ವಿರೇಶ ಬಡಿಗೇರ, ಅಮರೇಶ ನಾಯಕ, ಶಿವಮ್ಮ ಹಾಗೂ ದೇವಮ್ಮ ಸೇರಿದಂತೆ ಅನೇಕರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-32-1972986166</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಿಂಗಸುಗೂರು: ಪುರಸಭೆ ವ್ಯಾಪ್ತಿಯ ಹುಲಿಗುಡ್ಡ ಗ್ರಾಮಕ್ಕೆ ಸ್ಮಶಾನ ಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ್ ಸತ್ಯಮ್ಮ ಅವರಿಗೆ ಮನವಿ ಸಲ್ಲಿಸಿದರು.</p>.<p>ಹುಲಿಗುಡ್ಡದಲ್ಲಿ ಅಂತ್ಯಕ್ರಿಯೆ ಮಾಡಲು ಸ್ಮಶಾನ ಭೂಮಿ ಇಲ್ಲ. ಕಸಬಾಲಿಂಗಸುಗೂರಿನ ಸರ್ವೆ ನಂ–492ರಲ್ಲಿ ಒಟ್ಟು 47.38 ಎಕರೆ ಸರ್ಕಾರಿ ಭೂಮಿ ಇದೆ. ಅದರಲ್ಲಿ 4 ಎಕರೆಯನ್ನು ಸ್ಮಶಾನಕ್ಕೆ ಒದಗಿಸಬೇಕು. ಇದೇ ಭೂಮಿಯಲ್ಲಿ ಅಂತ್ಯಕ್ರಿಯೆ ಮಾಡುವಂತೆ ಅಧಿಕಾರಿಗಳು ಮೌಖಿಕವಾಗಿ ಹೇಳಿದ್ದರಿಂದ ಹಿಂದಿನಿಂದಲೂ ಅಲ್ಲಿಯೇ ಅಂತ್ಯಕ್ರಿಯೆ ಮಾಡಲಾಗುತ್ತಿತ್ತು. ಆದರೆ, ರುದ್ರಭೂಮಿಗೆ ಪ್ರತ್ಯೇಕ ಪಹಣಿ ಹಾಗೂ ಹದ್ದುಬಸ್ತು ಮಾಡಿಕೊಡಬೇಕು ಎಂದು ಆಗ್ರಹಿಸಿದರು.</p>.<p>ರವಿಕುಮಾರ ಭೋವಿ, ಗಣೇಶ, ವಿಜಯಕುಮಾರ, ರಾಚಪ್ಪ ಆಲ್ವಿ, ನಾಗಪ್ಪ, ಬಸವರಾಜ ಭಜಂತ್ರಿ, ಚಂದ್ರು ಬಡಿಗೇರ, ವಿರೇಶ ಬಡಿಗೇರ, ಅಮರೇಶ ನಾಯಕ, ಶಿವಮ್ಮ ಹಾಗೂ ದೇವಮ್ಮ ಸೇರಿದಂತೆ ಅನೇಕರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-32-1972986166</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>