<p><strong>ಅರಕೇರಾ (ದೇವದುರ್ಗ)</strong>: ‘ಸರ್ಕಾರಿ ಶಾಲಾ ಮಕ್ಕಳ ಭೌತಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಯಲ್ಲಿ ಅಕ್ಷರ ದಾಸೋಹ ಸಿಬ್ಬಂದಿ ಸೇವೆಯೂ ಪ್ರಮುಖ ಪಾತ್ರ ವಹಿಸುತ್ತದೆ’ ಎಂದು ತಾ.ಪಂ ಇಒ ಬಸವರಾಜ ಹಟ್ಟಿ ಹೇಳಿದರು.</p>.<p>ಪಟ್ಟಣದಲ್ಲಿ ತಾಲ್ಲೂಕು ಪಂಚಾಯಿತಿ ಮತ್ತು ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಕ್ಷರ ದಾಸೋಹ ನೌಕರರಿಗೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸ್ವಚ್ಛತೆಗೆ ಹೆಚ್ಚು ಮಹತ್ವ ನೀಡಿ ಸಿಲಿಂಡರ್ ಬಳಕೆಯ ಬಗ್ಗೆ ಜಾಗೃತರಾಗಿರಬೇಕು. ವೈಯಕ್ತಿಕ ರಕ್ಷಣೆ ಬಗ್ಗೆ ಜಾಗೃತರಾಗಿರಬೇಕು’ ಎಂದು ತಿಳಿಸಿದರು.</p>.<p>ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಸವರಾಜ ಕಟ್ಟಿಮನಿ ಮಾತನಾಡಿ, ‘ಬಿಸಿಯೂಟ ಯೋಜನೆಯಿಂದ ಶಾಲಾ ಮಕ್ಕಳ ಆರೋಗ್ಯ ಪೋಷಣೆ ಮತ್ತು ಶೈಕ್ಷಣಿಕ ಪ್ರಗತಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತಿದೆ. ಬಿಸಿಯೂಟ ತಯಾರಿಸುವ ಸಿಬ್ಬಂದಿಯ ಸೇವೆ ಕೂಡಾ ಮಕ್ಕಳ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ’ ಎಂದರು.</p>.<p>ತರಬೇತಿಯಲ್ಲಿ ಭಾಗವಹಿಸಿದ್ದ ತಾಲ್ಲೂಕಿನ ಎಲ್ಲಾ ಬಿಸಿಊಟ ನೌಕರರಿಗೆ ಅಡುಗೆ ತಯಾರಿಕೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸ್ವಚ್ಛತೆ ತಾಜಾ ತರಕಾರಿಗಳ ಬಳಕೆಯ ಬಗ್ಗೆ ಅಧಿಕಾರಿಗಳು ತರಬೇತಿ ನೀಡಿದರು.</p>.<p>ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲಾ ಅಡುಗೆ ಸಿಬ್ಬಂದಿಗಳಿಗೆ ಅಗ್ನಿಶಾಮಕ ದಳದ ಬೆಂಕಿ ನಂದಿಸುವ ಪ್ರಾತ್ಯಕ್ಷಿತೆಯ ಬಗ್ಗೆ ಮಾಹಿತಿ ನೀಡಿದರು.</p>.<p>ಕ್ಷೇತ್ರ ಸಮನ್ವಯ ಅಧಿಕಾರಿ ಶಿವರಾಜ ಪೂಜಾರಿ, ಪಿಡಿಒ ವೆಂಕೋಬ ನಾಯಕ, ಸಿಆರ್ಪಿ ಬಸವರಾಜ ನಾಯಕ ಸಾತಲ್, ಮುಖ್ಯಶಿಕ್ಷಕ ಹುಸೇನ್ ಬಾಷಾ , ಆರೋಗ್ಯ ಇಲಾಖೆಯ ಸಿಬ್ಬಂದಿ ಶಿವಪ್ಪ ಭೂಮನಗುಂಡ, ನಾಗಲಿಂಗಪ್ಪ, ಸಹಾಯಕ ಅಗ್ನಿಶಾಮಕ ಠಾಣಾ ಅಧಿಕಾರಿಗಳಾದ ಹನುಮೇಶ, ಅಂಜಿನಪ್ಪ, ಮಹೇಶಕುಮಾರ, ಪರಶುರಾಮ,ಅರುಣಕುಮಾರ, ರಮೇಶ ಅಕ್ಕರಕಿ .ಸಿ ಆರ್ ಪಿ ಬಸವರಾಜ, ಬಿಆರ್ಪಿ ಶಶಿಧರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಕೇರಾ (ದೇವದುರ್ಗ)</strong>: ‘ಸರ್ಕಾರಿ ಶಾಲಾ ಮಕ್ಕಳ ಭೌತಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಯಲ್ಲಿ ಅಕ್ಷರ ದಾಸೋಹ ಸಿಬ್ಬಂದಿ ಸೇವೆಯೂ ಪ್ರಮುಖ ಪಾತ್ರ ವಹಿಸುತ್ತದೆ’ ಎಂದು ತಾ.ಪಂ ಇಒ ಬಸವರಾಜ ಹಟ್ಟಿ ಹೇಳಿದರು.</p>.<p>ಪಟ್ಟಣದಲ್ಲಿ ತಾಲ್ಲೂಕು ಪಂಚಾಯಿತಿ ಮತ್ತು ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಕ್ಷರ ದಾಸೋಹ ನೌಕರರಿಗೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸ್ವಚ್ಛತೆಗೆ ಹೆಚ್ಚು ಮಹತ್ವ ನೀಡಿ ಸಿಲಿಂಡರ್ ಬಳಕೆಯ ಬಗ್ಗೆ ಜಾಗೃತರಾಗಿರಬೇಕು. ವೈಯಕ್ತಿಕ ರಕ್ಷಣೆ ಬಗ್ಗೆ ಜಾಗೃತರಾಗಿರಬೇಕು’ ಎಂದು ತಿಳಿಸಿದರು.</p>.<p>ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಸವರಾಜ ಕಟ್ಟಿಮನಿ ಮಾತನಾಡಿ, ‘ಬಿಸಿಯೂಟ ಯೋಜನೆಯಿಂದ ಶಾಲಾ ಮಕ್ಕಳ ಆರೋಗ್ಯ ಪೋಷಣೆ ಮತ್ತು ಶೈಕ್ಷಣಿಕ ಪ್ರಗತಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತಿದೆ. ಬಿಸಿಯೂಟ ತಯಾರಿಸುವ ಸಿಬ್ಬಂದಿಯ ಸೇವೆ ಕೂಡಾ ಮಕ್ಕಳ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ’ ಎಂದರು.</p>.<p>ತರಬೇತಿಯಲ್ಲಿ ಭಾಗವಹಿಸಿದ್ದ ತಾಲ್ಲೂಕಿನ ಎಲ್ಲಾ ಬಿಸಿಊಟ ನೌಕರರಿಗೆ ಅಡುಗೆ ತಯಾರಿಕೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸ್ವಚ್ಛತೆ ತಾಜಾ ತರಕಾರಿಗಳ ಬಳಕೆಯ ಬಗ್ಗೆ ಅಧಿಕಾರಿಗಳು ತರಬೇತಿ ನೀಡಿದರು.</p>.<p>ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲಾ ಅಡುಗೆ ಸಿಬ್ಬಂದಿಗಳಿಗೆ ಅಗ್ನಿಶಾಮಕ ದಳದ ಬೆಂಕಿ ನಂದಿಸುವ ಪ್ರಾತ್ಯಕ್ಷಿತೆಯ ಬಗ್ಗೆ ಮಾಹಿತಿ ನೀಡಿದರು.</p>.<p>ಕ್ಷೇತ್ರ ಸಮನ್ವಯ ಅಧಿಕಾರಿ ಶಿವರಾಜ ಪೂಜಾರಿ, ಪಿಡಿಒ ವೆಂಕೋಬ ನಾಯಕ, ಸಿಆರ್ಪಿ ಬಸವರಾಜ ನಾಯಕ ಸಾತಲ್, ಮುಖ್ಯಶಿಕ್ಷಕ ಹುಸೇನ್ ಬಾಷಾ , ಆರೋಗ್ಯ ಇಲಾಖೆಯ ಸಿಬ್ಬಂದಿ ಶಿವಪ್ಪ ಭೂಮನಗುಂಡ, ನಾಗಲಿಂಗಪ್ಪ, ಸಹಾಯಕ ಅಗ್ನಿಶಾಮಕ ಠಾಣಾ ಅಧಿಕಾರಿಗಳಾದ ಹನುಮೇಶ, ಅಂಜಿನಪ್ಪ, ಮಹೇಶಕುಮಾರ, ಪರಶುರಾಮ,ಅರುಣಕುಮಾರ, ರಮೇಶ ಅಕ್ಕರಕಿ .ಸಿ ಆರ್ ಪಿ ಬಸವರಾಜ, ಬಿಆರ್ಪಿ ಶಶಿಧರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>