<p><strong>ರಾಯಚೂರು:</strong> ತಾಲ್ಲೂಕಿನ ಉಡಮಗಲ್ ಖಾನಾಪುರ ಹಾಗೂ ಯಾಪಲದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ರಾಷ್ಟ್ರೀಯ ಗುಣಮಟ್ಟ ಭರವಸೆ ಮಾನದಂಡಗಳ ರಾಷ್ಟ್ರಮಟ್ಟದ ಮೌಲ್ಯಮಾಪನ ಪೂರ್ಣಗೊಳಿಸಿ ಗಮನಾರ್ಹ ಸಾಧನೆ ಮಾಡಿವೆ ಎಂದು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು ತಿಳಿಸಿದ್ದಾರೆ.</p>.<p>ತಂಡದ ಡಾ.ಗಿರೀಶ್, ಡಾ.ಮೈನುದ್ದೀನ್, ವಿನಿತಾ ಆರ್. ಹಾಗೂ ಅಶೋಕ ಅವರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದರು.</p>.<p>ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಮೂಲ ಸೌಕರ್ಯ, ರೋಗಿ ಸ್ನೇಹಿ ಸೇವೆಗಳು, ಆಸ್ಪತ್ರೆಯ ಸ್ವಚ್ಛತೆ, ಔಷಧಗಳ ಲಭ್ಯತೆ, ತುರ್ತು ಚಿಕಿತ್ಸಾ ವ್ಯವಸ್ಥೆ, ದಾಖಲೆ ನಿರ್ವಹಣೆ ಸೇರಿದಂತೆ ಹಲವು ಅಂಶಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗಿತ್ತು. ಈ ಎಲ್ಲ ವಿಭಾಗಗಳಲ್ಲಿ ಉತ್ತಮ ಕಾರ್ಯನಿರ್ವಹಣೆ ತೋರಿದ ಪರಿಣಾಮ ಉನ್ನತ ಅಂಕಗಳನ್ನು ಪಡೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-32-1762119074</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ತಾಲ್ಲೂಕಿನ ಉಡಮಗಲ್ ಖಾನಾಪುರ ಹಾಗೂ ಯಾಪಲದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ರಾಷ್ಟ್ರೀಯ ಗುಣಮಟ್ಟ ಭರವಸೆ ಮಾನದಂಡಗಳ ರಾಷ್ಟ್ರಮಟ್ಟದ ಮೌಲ್ಯಮಾಪನ ಪೂರ್ಣಗೊಳಿಸಿ ಗಮನಾರ್ಹ ಸಾಧನೆ ಮಾಡಿವೆ ಎಂದು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು ತಿಳಿಸಿದ್ದಾರೆ.</p>.<p>ತಂಡದ ಡಾ.ಗಿರೀಶ್, ಡಾ.ಮೈನುದ್ದೀನ್, ವಿನಿತಾ ಆರ್. ಹಾಗೂ ಅಶೋಕ ಅವರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದರು.</p>.<p>ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಮೂಲ ಸೌಕರ್ಯ, ರೋಗಿ ಸ್ನೇಹಿ ಸೇವೆಗಳು, ಆಸ್ಪತ್ರೆಯ ಸ್ವಚ್ಛತೆ, ಔಷಧಗಳ ಲಭ್ಯತೆ, ತುರ್ತು ಚಿಕಿತ್ಸಾ ವ್ಯವಸ್ಥೆ, ದಾಖಲೆ ನಿರ್ವಹಣೆ ಸೇರಿದಂತೆ ಹಲವು ಅಂಶಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗಿತ್ತು. ಈ ಎಲ್ಲ ವಿಭಾಗಗಳಲ್ಲಿ ಉತ್ತಮ ಕಾರ್ಯನಿರ್ವಹಣೆ ತೋರಿದ ಪರಿಣಾಮ ಉನ್ನತ ಅಂಕಗಳನ್ನು ಪಡೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-32-1762119074</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>