<p><strong>ರಾಯಚೂರು:</strong> ‘ನಾನು ಅಧ್ಯಕ್ಷರ ಬಳಿ ಒಂದು ರೂಪಾಯಿ ವಸೂಲಿ ಮಾಡಿಲ್ಲ. ಅದನ್ನು ಸಾಬೀತು ಪಡಿಸಿದರೆ ನಗರಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ನಗರಸಭೆ ಸದಸ್ಯ ಜಿಂದಪ್ಪ ಹೇಳಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.</p>.<p>ಕಾಂಗ್ರೆಸ್ ಮುಖಂಡ ನರಸಿಂಹಲು ಮಾಡಗಿರಿ ಮಾತನಾಡಿ, ‘ನಗರಸಭೆ ಅಧ್ಯಕ್ಷ ಈ.ವಿನಯಕುಮಾರ್ ಅವರು ಸದಸ್ಯರೊಂದಿಗೆ ಗೂಂಡಾ ವರ್ತನೆ ತೋರುತ್ತಿದ್ದು, ಅವರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ದೂರು ಸಲ್ಲಿಸಲಾಗುವುದು‘ ಎಂದು ತಿಳಿಸಿದರು.</p>.<p>‘ಹಾದಿ ಬೀದಿಗಳಲ್ಲಿ ನಗರಸಭೆ ಸದಸ್ಯರ ಮೇಲೆ ಹಲ್ಲೆಗೆ ಮುಂದಾಗುತ್ತಿದ್ದಾರೆ. ತಿರಸ್ಕೃತಗೊಂಡಿದ್ದ ಚೈತನ್ಯ ಎಲೆಕ್ಟ್ರಿಕಲ್ ಟೆಂಡರ್ ಮುಂಜೂರು ಮಾಡಿ ವಿದ್ಯುತ್ ದೀಪಗಳನ್ನು ಅಳವಡಿಸದೆ ಲಕ್ಷಾಂತರ ಹಣ ಅವ್ಯವಹಾರ ಮಾಡಿದ್ದಾರೆ‘ ಎಂದು ಆರೋಪಿಸಿದ ಅವರು, ಈ ಬಗ್ಗೆ ಜಿಲ್ಲಾಧಿಕಾರಿ ಮತ್ತು ಲೋಕಾಯುಕ್ತರಿಗೂ ದೂರು ಸಲ್ಲಿಸಲಾಗುವುದು ಎಂದು ಹೇಳಿದರು.</p>.<p>‘ವಿನಾಕಾರಣ ಹಣ ವಸೂಲಿ ಆರೋಪ ಮಾಡಿದ್ದು, ಅದನ್ನು ಸಾಬೀತು ಮಾಡಿದರೆ ನಗರಸಭೆ ಉಪಾಧ್ಯಕ್ಷ ಸ್ಥಾನದಲ್ಲಿರುವ ನನ್ನ ಪತ್ನಿಗೆ ರಾಜೀನಾಮೆ ಸಲ್ಲಿಸಲು ಹೇಳುತ್ತೇನೆ’ ಎಂದು ತಿಳಿಸಿದರು.</p>.<p>ನಗರಸಭೆ ಉಪಾಧ್ಯಕ್ಷೆ ನರಸಮ್ಮ ಮಾಡಗಿರಿ, ಗೋಪಾಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ನಾನು ಅಧ್ಯಕ್ಷರ ಬಳಿ ಒಂದು ರೂಪಾಯಿ ವಸೂಲಿ ಮಾಡಿಲ್ಲ. ಅದನ್ನು ಸಾಬೀತು ಪಡಿಸಿದರೆ ನಗರಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ನಗರಸಭೆ ಸದಸ್ಯ ಜಿಂದಪ್ಪ ಹೇಳಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.</p>.<p>ಕಾಂಗ್ರೆಸ್ ಮುಖಂಡ ನರಸಿಂಹಲು ಮಾಡಗಿರಿ ಮಾತನಾಡಿ, ‘ನಗರಸಭೆ ಅಧ್ಯಕ್ಷ ಈ.ವಿನಯಕುಮಾರ್ ಅವರು ಸದಸ್ಯರೊಂದಿಗೆ ಗೂಂಡಾ ವರ್ತನೆ ತೋರುತ್ತಿದ್ದು, ಅವರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ದೂರು ಸಲ್ಲಿಸಲಾಗುವುದು‘ ಎಂದು ತಿಳಿಸಿದರು.</p>.<p>‘ಹಾದಿ ಬೀದಿಗಳಲ್ಲಿ ನಗರಸಭೆ ಸದಸ್ಯರ ಮೇಲೆ ಹಲ್ಲೆಗೆ ಮುಂದಾಗುತ್ತಿದ್ದಾರೆ. ತಿರಸ್ಕೃತಗೊಂಡಿದ್ದ ಚೈತನ್ಯ ಎಲೆಕ್ಟ್ರಿಕಲ್ ಟೆಂಡರ್ ಮುಂಜೂರು ಮಾಡಿ ವಿದ್ಯುತ್ ದೀಪಗಳನ್ನು ಅಳವಡಿಸದೆ ಲಕ್ಷಾಂತರ ಹಣ ಅವ್ಯವಹಾರ ಮಾಡಿದ್ದಾರೆ‘ ಎಂದು ಆರೋಪಿಸಿದ ಅವರು, ಈ ಬಗ್ಗೆ ಜಿಲ್ಲಾಧಿಕಾರಿ ಮತ್ತು ಲೋಕಾಯುಕ್ತರಿಗೂ ದೂರು ಸಲ್ಲಿಸಲಾಗುವುದು ಎಂದು ಹೇಳಿದರು.</p>.<p>‘ವಿನಾಕಾರಣ ಹಣ ವಸೂಲಿ ಆರೋಪ ಮಾಡಿದ್ದು, ಅದನ್ನು ಸಾಬೀತು ಮಾಡಿದರೆ ನಗರಸಭೆ ಉಪಾಧ್ಯಕ್ಷ ಸ್ಥಾನದಲ್ಲಿರುವ ನನ್ನ ಪತ್ನಿಗೆ ರಾಜೀನಾಮೆ ಸಲ್ಲಿಸಲು ಹೇಳುತ್ತೇನೆ’ ಎಂದು ತಿಳಿಸಿದರು.</p>.<p>ನಗರಸಭೆ ಉಪಾಧ್ಯಕ್ಷೆ ನರಸಮ್ಮ ಮಾಡಗಿರಿ, ಗೋಪಾಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>