<p>ರಾಯಚೂರು: ನಗರದ 19ನೇ ವಾರ್ಡ್ನಲ್ಲಿ ನಿರ್ಮಿಸಲಾಗಿರುವ ಬೃಹತ್ ಕುಡಿಯುವ ನೀರಿನ ಟ್ಯಾಂಕ್ ಕಾಮಗಾರಿ ಅತ್ಯಂತ ಕಳಪೆಯಾಗಿದೆ. ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಸೇವಕ ಸಣ್ಣ ಬಾಬು ಒತ್ತಾಯಿಸಿದರು.</p>.<p>ಕಾಮಗಾರಿ ಅಂದಾಜು ಪತ್ರಿಕೆ ಪ್ರಕಾರ ನಡೆದಿಲ್ಲ. ಕಾಮಗಾರಿ ಸಂಪೂರ್ಣ ಕಳಪೆಯಾಗಿರುವುದು ಕಂಡುಬಂದಿದೆ. ಒಳಭಾಗದಲ್ಲಿ ಸಮರ್ಪಕವಾಗಿ ಪ್ಲಾಸ್ಟರಿಂಗ್ ಮಾಡಿಲ್ಲ, ಅಗತ್ಯ ಎತ್ತರದಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ ಮತ್ತು ಸರಿಯಾಗಿ ಕ್ಯೂರಿಂಗ್ ಮಾಡದಿರುವುದು ಕಂಡುಬಂದಿದೆ. ಇದರ ಜೊತೆಗೆ ಸುಣ್ಣ-ಬಣ್ಣದ ಕೆಲಸವನ್ನೂ ಮಾಡಿಲ್ಲ ಎಂದು ಗುರುವಾರ ಮಾಧ್ಯಮಗೋಷ್ಠಿಯಲ್ಲಿ ದೂರಿದರು.</p>.<p>ಕಾಮಗಾರಿಯಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಟ್ಯಾಂಕ್ಗೆ ಸಂಪರ್ಕ ಹೊಂದಿರುವ ಪೈಪ್ಗಳು ಹಲವೆಡೆ ಒಡೆದು ನೀರು ಸೋರಿಕೆಯಾಗುತ್ತಿದೆ. ಈ ಕುರಿತು ಈಗಾಗಲೇ ದೂರು ನೀಡಿದ್ದರೂ ಯಾವುದೇ ಅಧಿಕಾರಿಗಳು ಗಮನಹರಿಸಿಲ್ಲ ಎಂದು ಆರೋಪಿಸಿದರು.</p>.<p>ವಾರ್ಡ್ ನಂ.19, 20ರ ಬಡಾವಣೆಗಳಿಗೆ ಇದೇ ಟ್ಯಾಂಕ್ನಿಂದ ನೀರು ಸರಬರಾಜಾಗುತ್ತಿರುವುದರಿಂದ ಕೂಡಲೇ ಗುಣಮಟ್ಟದ ಕಾಮಗಾರಿ ನಡೆಸಿ, ಸೋರಿಕೆಯಾಗುತ್ತಿರುವ ಪೈಪ್ಲೈನ್ಗಳನ್ನು ದುರಸ್ತಿ ಮಾಡಬೇಕು. ಇಲ್ಲವಾದಲ್ಲಿ ನಗರದ 35 ವಾರ್ಡ್ಗಳ ಜನರನ್ನು ಸಂಘಟಿಸಿಕೊಂಡು ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ರಘು, ವೆಂಕಟೇಶ, ರಾಜೇಶ, ಭರತ ಸೇರಿದಂತೆ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-32-338515763</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ನಗರದ 19ನೇ ವಾರ್ಡ್ನಲ್ಲಿ ನಿರ್ಮಿಸಲಾಗಿರುವ ಬೃಹತ್ ಕುಡಿಯುವ ನೀರಿನ ಟ್ಯಾಂಕ್ ಕಾಮಗಾರಿ ಅತ್ಯಂತ ಕಳಪೆಯಾಗಿದೆ. ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಸೇವಕ ಸಣ್ಣ ಬಾಬು ಒತ್ತಾಯಿಸಿದರು.</p>.<p>ಕಾಮಗಾರಿ ಅಂದಾಜು ಪತ್ರಿಕೆ ಪ್ರಕಾರ ನಡೆದಿಲ್ಲ. ಕಾಮಗಾರಿ ಸಂಪೂರ್ಣ ಕಳಪೆಯಾಗಿರುವುದು ಕಂಡುಬಂದಿದೆ. ಒಳಭಾಗದಲ್ಲಿ ಸಮರ್ಪಕವಾಗಿ ಪ್ಲಾಸ್ಟರಿಂಗ್ ಮಾಡಿಲ್ಲ, ಅಗತ್ಯ ಎತ್ತರದಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ ಮತ್ತು ಸರಿಯಾಗಿ ಕ್ಯೂರಿಂಗ್ ಮಾಡದಿರುವುದು ಕಂಡುಬಂದಿದೆ. ಇದರ ಜೊತೆಗೆ ಸುಣ್ಣ-ಬಣ್ಣದ ಕೆಲಸವನ್ನೂ ಮಾಡಿಲ್ಲ ಎಂದು ಗುರುವಾರ ಮಾಧ್ಯಮಗೋಷ್ಠಿಯಲ್ಲಿ ದೂರಿದರು.</p>.<p>ಕಾಮಗಾರಿಯಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಟ್ಯಾಂಕ್ಗೆ ಸಂಪರ್ಕ ಹೊಂದಿರುವ ಪೈಪ್ಗಳು ಹಲವೆಡೆ ಒಡೆದು ನೀರು ಸೋರಿಕೆಯಾಗುತ್ತಿದೆ. ಈ ಕುರಿತು ಈಗಾಗಲೇ ದೂರು ನೀಡಿದ್ದರೂ ಯಾವುದೇ ಅಧಿಕಾರಿಗಳು ಗಮನಹರಿಸಿಲ್ಲ ಎಂದು ಆರೋಪಿಸಿದರು.</p>.<p>ವಾರ್ಡ್ ನಂ.19, 20ರ ಬಡಾವಣೆಗಳಿಗೆ ಇದೇ ಟ್ಯಾಂಕ್ನಿಂದ ನೀರು ಸರಬರಾಜಾಗುತ್ತಿರುವುದರಿಂದ ಕೂಡಲೇ ಗುಣಮಟ್ಟದ ಕಾಮಗಾರಿ ನಡೆಸಿ, ಸೋರಿಕೆಯಾಗುತ್ತಿರುವ ಪೈಪ್ಲೈನ್ಗಳನ್ನು ದುರಸ್ತಿ ಮಾಡಬೇಕು. ಇಲ್ಲವಾದಲ್ಲಿ ನಗರದ 35 ವಾರ್ಡ್ಗಳ ಜನರನ್ನು ಸಂಘಟಿಸಿಕೊಂಡು ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ರಘು, ವೆಂಕಟೇಶ, ರಾಜೇಶ, ಭರತ ಸೇರಿದಂತೆ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-32-338515763</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>