<p><strong>ರಾಯಚೂರು:</strong> ಜಿಲ್ಲೆಯ ವಿವಿಧೆಡೆ ಭಾನುವಾರ ಬೆಳಗಿನ ಜಾವ ಮಳೆ ಅಬ್ಬರಿಸಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆಲ ಕಡೆ ಹಳ್ಳದ ಸೇತುವೆಗಳ ಮೇಲೆ ನೀರು ಬಂದು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.</p><p>ಲಿಂಗಸುಗೂರು ತಾಲ್ಲೂಕಿನ ಆನಾಹೊಸೂರು- ಜಾಗಿರನಂದಿಹಾಳ ನಡುವಿನ ಹಳ್ಳ ಭರ್ತಿಯಾಗಿ ಹರಿಯುತ್ತಿದ್ದರಿಂದ ಜಾಗಿರನಂದಿಹಾಳ ಗ್ರಾಮದ ರಸ್ತೆ ಸಂಪರ್ಕ ಕಡಿತಗೊಂಡಿದೆ. </p>.ರಾಯಚೂರು | ಅಪೂರ್ಣ ಕಾಮಗಾರಿ: ಗದ್ದೆಯಂತಾದ ರಸ್ತೆ.<p>ಇಂದಿನಿಂದ ಅರ್ಧವಾರ್ಷಿಕ ಪರೀಕ್ಷೆ ಆರಂಭವಾಗಿದ್ದರಿಂದ ಜಾಗಿರನಂದಿಹಾಳ ಗ್ರಾಮದ ವಿದ್ಯಾರ್ಥಿಗಳು 20 ಕಿ.ಮೀ ಸುತ್ತುವರಿದು ಲಿಂಗಸುಗೂರು ಪಟ್ಟಣಕ್ಕೆ ತೆರಳಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ.</p><p>ಲಿಂಗಸುಗೂರು ಪಟ್ಟಣದ ಐದನೇ ವಾರ್ಡಿನ ಮನೆಯೊಂದಕ್ಕೆ ಸಿಡಿಲು ಬಡಿದು ಮನೆಯ ಗೋಡೆ ಕುಸಿದು ಬಿದ್ದು ಬೈಕ್ ಜಖಂಗೊಂಡಿದೆ. ಪಟ್ಟಣದ ತಾ.ಪಂ ಇಒ ಮನೆ ಹತ್ತಿರದಲ್ಲಿ ಬೃಹತ್ ಮರ ಬಿದ್ದಿದೆ.</p><p>ಹಟ್ಟಿ ಚಿನ್ನದ ಗಣಿ ಸಮೀಪ ಗುಡದನಾಳ ಹಳ್ಳದ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ರಸ್ತೆ ಸಂಚಾರ ಸ್ಥಗಿತಗೊಂಡಿದೆ.</p>.ರಾಯಚೂರು | ಸರ್ಕಾರಿ ಕಚೇರಿಯಲ್ಲಿ ನಾಗರಹಾವು: ಬೆಚ್ಚಿಬಿದ್ದ ಸಿಬ್ಬಂದಿ.<p>ಸಿಂಧನೂರು ತಾಲ್ಲೂಕಿನಲ್ಲೂ ಮಳೆ ಸುರಿದಿದೆ. ಸಿಂಧನೂರು - ಮಸ್ಕಿ ರಾಷ್ಟ್ರೀಯ ಹೆದ್ದಾರಿ (150 ಎ) ಕಲ್ಲೂರು ಬಳಿ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿರುವ ಕಾರಣ ಬಳಗಾನೂರು ಮಾರ್ಗವಾಗಿ ಬಸ್ಗಳು ಹಾಗೂ ಸರಕು ಸಾಗಣೆ ವಾಹನಗಳು ಹೋಗುತ್ತಿವೆ.</p> .ರಾಯಚೂರು: ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಜಿಲ್ಲೆಯ ವಿವಿಧೆಡೆ ಭಾನುವಾರ ಬೆಳಗಿನ ಜಾವ ಮಳೆ ಅಬ್ಬರಿಸಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆಲ ಕಡೆ ಹಳ್ಳದ ಸೇತುವೆಗಳ ಮೇಲೆ ನೀರು ಬಂದು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.</p><p>ಲಿಂಗಸುಗೂರು ತಾಲ್ಲೂಕಿನ ಆನಾಹೊಸೂರು- ಜಾಗಿರನಂದಿಹಾಳ ನಡುವಿನ ಹಳ್ಳ ಭರ್ತಿಯಾಗಿ ಹರಿಯುತ್ತಿದ್ದರಿಂದ ಜಾಗಿರನಂದಿಹಾಳ ಗ್ರಾಮದ ರಸ್ತೆ ಸಂಪರ್ಕ ಕಡಿತಗೊಂಡಿದೆ. </p>.ರಾಯಚೂರು | ಅಪೂರ್ಣ ಕಾಮಗಾರಿ: ಗದ್ದೆಯಂತಾದ ರಸ್ತೆ.<p>ಇಂದಿನಿಂದ ಅರ್ಧವಾರ್ಷಿಕ ಪರೀಕ್ಷೆ ಆರಂಭವಾಗಿದ್ದರಿಂದ ಜಾಗಿರನಂದಿಹಾಳ ಗ್ರಾಮದ ವಿದ್ಯಾರ್ಥಿಗಳು 20 ಕಿ.ಮೀ ಸುತ್ತುವರಿದು ಲಿಂಗಸುಗೂರು ಪಟ್ಟಣಕ್ಕೆ ತೆರಳಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ.</p><p>ಲಿಂಗಸುಗೂರು ಪಟ್ಟಣದ ಐದನೇ ವಾರ್ಡಿನ ಮನೆಯೊಂದಕ್ಕೆ ಸಿಡಿಲು ಬಡಿದು ಮನೆಯ ಗೋಡೆ ಕುಸಿದು ಬಿದ್ದು ಬೈಕ್ ಜಖಂಗೊಂಡಿದೆ. ಪಟ್ಟಣದ ತಾ.ಪಂ ಇಒ ಮನೆ ಹತ್ತಿರದಲ್ಲಿ ಬೃಹತ್ ಮರ ಬಿದ್ದಿದೆ.</p><p>ಹಟ್ಟಿ ಚಿನ್ನದ ಗಣಿ ಸಮೀಪ ಗುಡದನಾಳ ಹಳ್ಳದ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ರಸ್ತೆ ಸಂಚಾರ ಸ್ಥಗಿತಗೊಂಡಿದೆ.</p>.ರಾಯಚೂರು | ಸರ್ಕಾರಿ ಕಚೇರಿಯಲ್ಲಿ ನಾಗರಹಾವು: ಬೆಚ್ಚಿಬಿದ್ದ ಸಿಬ್ಬಂದಿ.<p>ಸಿಂಧನೂರು ತಾಲ್ಲೂಕಿನಲ್ಲೂ ಮಳೆ ಸುರಿದಿದೆ. ಸಿಂಧನೂರು - ಮಸ್ಕಿ ರಾಷ್ಟ್ರೀಯ ಹೆದ್ದಾರಿ (150 ಎ) ಕಲ್ಲೂರು ಬಳಿ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿರುವ ಕಾರಣ ಬಳಗಾನೂರು ಮಾರ್ಗವಾಗಿ ಬಸ್ಗಳು ಹಾಗೂ ಸರಕು ಸಾಗಣೆ ವಾಹನಗಳು ಹೋಗುತ್ತಿವೆ.</p> .ರಾಯಚೂರು: ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>