<p><strong>ರಾಯಚೂರು: </strong>ಜಿಲ್ಲೆಯ ಕೆಲವು ಭಾಗಗಳಲ್ಲಿ ಸೋಮವಾರ ರಾತ್ರಿ ಪೂರ್ತಿಮಳೆ ಸುರಿದಿದ್ದು,ಜನಜೀವನ ಅಸ್ತವ್ಯಸ್ತವಾಗಿದೆ.</p>.<p>ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಕಸ್ತೂರಿ ಬಾ ಶಾಲೆಗೆ ಜಲ ದಿಗ್ಬಂಧನವಾಗಿದೆ. ಮಕ್ಕಳು ಶಾಲಾ ಆವರಣಕ್ಕೆ ಹೋಗುವುದಕ್ಕೆ ಸಾಧ್ಯವಾಗುತ್ತಿಲ್ಲ.</p>.<p>ಬಾಗಲವಾಡ ಹಳ್ಳವು ತುಂಬಿ ರಸ್ತೆ ಮೇಲೆ ಹರಿಯುತ್ತಿದ್ದು, ಹಿರೆಕೋಟ್ನೆಕಲ್ ಮತ್ತು ಹಣಗಿ ಮಾರ್ಗದ ಸಂಚಾರ ಸ್ಥಗಿತವಾಗಿದೆ.</p>.<p>ಲಿಂಗಸುಗೂರು ತಾಲ್ಲೂಕಿನ ಹಟ್ಟಿಯಲ್ಲಿ ಸುರಿದ ಮಳೆಯಿಂದಾಗಿ ರಸ್ತೆಗಳೆಲ್ಲ ಕೆಸರು ಗದ್ದೆಗಳಾಗಿದ್ದು, ವಾಹನ ಮತ್ತು ಜನರು ಸಂಚರಿಸಲು ಪರದಾಡುತ್ತಿದ್ದಾರೆ.</p>.<p>ಕವಿತಾಳ ಸಮೀಪದ ಗುಡ್ಡದ ಮೇಲಿಂದ ದೊಡ್ಡ ಗಾತ್ರದ ಕಲ್ಲು ಉರುಳಿ ಬಿದ್ದಿದೆ. ಮನೆ ಕೊಠಡಿಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಮನೆಯವರು ಬೆಂಗಳೂರಿಗೆ ಗುಳೆ ಹೋಗಿದ್ದಾರೆ.</p>.<p><strong>ಶಾಲೆಗೆ ನುಗ್ಗಿದ ನೀರು</strong></p>.<p>ಸಿರವಾರ ತಾಲ್ಲೂಕಿನ ಕವಿತಾಳ ಸಮೀಪದ ದಿನ್ನಿಕ್ಯಾಂಪ್ ಸರ್ಕಾರಿ ಶಾಲೆಗೆ ನೀರು ನುಗ್ಗಿ ಸಮಸ್ಯೆಯಾಗಿದೆ. ತರಗತಿ ಕೊಠಡಿಗಳು, ಆವರಣ ಮತ್ತು ಬಿಸಿಯೂಟದ ಆಹಾರ ಧಾನ್ಯ ಸಂಗ್ರಹಿಸಿದ ಕೊಠಡಿ ಗೆ ಮಳೆ ನೀರು ನುಗ್ಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಜಿಲ್ಲೆಯ ಕೆಲವು ಭಾಗಗಳಲ್ಲಿ ಸೋಮವಾರ ರಾತ್ರಿ ಪೂರ್ತಿಮಳೆ ಸುರಿದಿದ್ದು,ಜನಜೀವನ ಅಸ್ತವ್ಯಸ್ತವಾಗಿದೆ.</p>.<p>ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಕಸ್ತೂರಿ ಬಾ ಶಾಲೆಗೆ ಜಲ ದಿಗ್ಬಂಧನವಾಗಿದೆ. ಮಕ್ಕಳು ಶಾಲಾ ಆವರಣಕ್ಕೆ ಹೋಗುವುದಕ್ಕೆ ಸಾಧ್ಯವಾಗುತ್ತಿಲ್ಲ.</p>.<p>ಬಾಗಲವಾಡ ಹಳ್ಳವು ತುಂಬಿ ರಸ್ತೆ ಮೇಲೆ ಹರಿಯುತ್ತಿದ್ದು, ಹಿರೆಕೋಟ್ನೆಕಲ್ ಮತ್ತು ಹಣಗಿ ಮಾರ್ಗದ ಸಂಚಾರ ಸ್ಥಗಿತವಾಗಿದೆ.</p>.<p>ಲಿಂಗಸುಗೂರು ತಾಲ್ಲೂಕಿನ ಹಟ್ಟಿಯಲ್ಲಿ ಸುರಿದ ಮಳೆಯಿಂದಾಗಿ ರಸ್ತೆಗಳೆಲ್ಲ ಕೆಸರು ಗದ್ದೆಗಳಾಗಿದ್ದು, ವಾಹನ ಮತ್ತು ಜನರು ಸಂಚರಿಸಲು ಪರದಾಡುತ್ತಿದ್ದಾರೆ.</p>.<p>ಕವಿತಾಳ ಸಮೀಪದ ಗುಡ್ಡದ ಮೇಲಿಂದ ದೊಡ್ಡ ಗಾತ್ರದ ಕಲ್ಲು ಉರುಳಿ ಬಿದ್ದಿದೆ. ಮನೆ ಕೊಠಡಿಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಮನೆಯವರು ಬೆಂಗಳೂರಿಗೆ ಗುಳೆ ಹೋಗಿದ್ದಾರೆ.</p>.<p><strong>ಶಾಲೆಗೆ ನುಗ್ಗಿದ ನೀರು</strong></p>.<p>ಸಿರವಾರ ತಾಲ್ಲೂಕಿನ ಕವಿತಾಳ ಸಮೀಪದ ದಿನ್ನಿಕ್ಯಾಂಪ್ ಸರ್ಕಾರಿ ಶಾಲೆಗೆ ನೀರು ನುಗ್ಗಿ ಸಮಸ್ಯೆಯಾಗಿದೆ. ತರಗತಿ ಕೊಠಡಿಗಳು, ಆವರಣ ಮತ್ತು ಬಿಸಿಯೂಟದ ಆಹಾರ ಧಾನ್ಯ ಸಂಗ್ರಹಿಸಿದ ಕೊಠಡಿ ಗೆ ಮಳೆ ನೀರು ನುಗ್ಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>