<p>ರಾಯಚೂರು: ಶಹೀದ್ ರಾಮ್ಪ್ರಸಾದ್ ಬಿಸ್ಮಿಲ್, ಅಸ್ಪಾಕ್ ಉಲ್ಲಾಖಾನ್ ಮತ್ತು ರೋಶನ್ ಸಿಂಗ್ ಅವರ ಪ್ರತಿಮೆಗಳನ್ನು ಮಾ.23ರಂದು ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಧ್ವಂಸ ಗೊಳಿಸಿರುವುದು ಖಂಡನೀಯ ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಜಿಲ್ಲಾ ಕಾರ್ಯದರ್ಶಿ ವಿನೋದಕುಮಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ನಗರದ ಸೌಂದರ್ಯೀಕರಣದ ಹೆಸರಿನಲ್ಲಿ ಶಾಜಹಾನಪುರದ ನಗರಸಭಾ ಅಧಿಕಾರಿಗಳು ಮತ್ತು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮಹಾನ್ ಕ್ರಾಂತಿಕಾರಿಗಳ ಪ್ರತಿಮೆಗಳನ್ನು ಕೆಡವಿಸಿದೆ. ಈ ಮೂಲಕ ಮಹಾನ್ ಕ್ರಾಂತಿಕಾರಿಗಳ ನೆನಪನ್ನು ಜನಮಾನಸದಿಂದ ಅಳಿಸಿ ಹಾಕಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ.</p>.<p>ಈ ಘಟನೆಗೆ ಉತ್ತರ ಪ್ರದೇಶದಾದ್ಯಂತ ಜನರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಜನವಿರೋಧಕ್ಕೆ ಮಣಿದ ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ಅಲ್ಲಿನ ನಗರಸಭೆಯ ಎಂಜಿನಿಯರ್ ಮತ್ತು ಅಧಿಕಾರಿಯನ್ನು ಅಮಾನತುಗೊಳಿಸಿದೆ. ಆದರೆ, ಇಷ್ಟು ಸಾಲದು. ಕೆಡವಿರುವ ಆ ಪ್ರತಿಮೆಗಳನ್ನು ತಕ್ಷಣವೇ ಸೂಕ್ತ ಗೌರವದೊಂದಿಗೆ ಮರು ಸ್ಥಾಪಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-32-1374862617</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಶಹೀದ್ ರಾಮ್ಪ್ರಸಾದ್ ಬಿಸ್ಮಿಲ್, ಅಸ್ಪಾಕ್ ಉಲ್ಲಾಖಾನ್ ಮತ್ತು ರೋಶನ್ ಸಿಂಗ್ ಅವರ ಪ್ರತಿಮೆಗಳನ್ನು ಮಾ.23ರಂದು ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಧ್ವಂಸ ಗೊಳಿಸಿರುವುದು ಖಂಡನೀಯ ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಜಿಲ್ಲಾ ಕಾರ್ಯದರ್ಶಿ ವಿನೋದಕುಮಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ನಗರದ ಸೌಂದರ್ಯೀಕರಣದ ಹೆಸರಿನಲ್ಲಿ ಶಾಜಹಾನಪುರದ ನಗರಸಭಾ ಅಧಿಕಾರಿಗಳು ಮತ್ತು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮಹಾನ್ ಕ್ರಾಂತಿಕಾರಿಗಳ ಪ್ರತಿಮೆಗಳನ್ನು ಕೆಡವಿಸಿದೆ. ಈ ಮೂಲಕ ಮಹಾನ್ ಕ್ರಾಂತಿಕಾರಿಗಳ ನೆನಪನ್ನು ಜನಮಾನಸದಿಂದ ಅಳಿಸಿ ಹಾಕಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ.</p>.<p>ಈ ಘಟನೆಗೆ ಉತ್ತರ ಪ್ರದೇಶದಾದ್ಯಂತ ಜನರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಜನವಿರೋಧಕ್ಕೆ ಮಣಿದ ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ಅಲ್ಲಿನ ನಗರಸಭೆಯ ಎಂಜಿನಿಯರ್ ಮತ್ತು ಅಧಿಕಾರಿಯನ್ನು ಅಮಾನತುಗೊಳಿಸಿದೆ. ಆದರೆ, ಇಷ್ಟು ಸಾಲದು. ಕೆಡವಿರುವ ಆ ಪ್ರತಿಮೆಗಳನ್ನು ತಕ್ಷಣವೇ ಸೂಕ್ತ ಗೌರವದೊಂದಿಗೆ ಮರು ಸ್ಥಾಪಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-32-1374862617</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>