<p>ರಾಯಚೂರು: ಜಿಲ್ಲೆಯ ಮಾನ್ವಿ ತಾಲ್ಲೂಕಿನ ನೀರಮಾನ್ವಿ ತಾಂಡಾದಲ್ಲಿ 2017ರಲ್ಲಿ ನಡೆದಿದ್ದ ದರೋಡೆ ಮತ್ತು ಕೊಲೆ ಪ್ರಕರಣದ ಆದೇಶ ಪ್ರಕ ಟವಾಗಿದ್ದು ಅಲೆಮಾರಿ ದರೋಡೆ ಗ್ಯಾಂಗ್ನ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.</p>.<p>ಆರೋಪಿ ಹಶ್ಯಾ ಅಲಿಯಾಸ್ ರಮೇಶ್ಗೆ ಜೀವಾವಧಿ ಶಿಕ್ಷೆ ಹಾಗೂ ₹30 ಸಾವಿರ ದಂಡ ವಿಧಿಸಲಾಗಿದೆ. ಕದ್ದ ಚಿನ್ನಾಭರಣ ಕೊಳ್ಳುತ್ತಿದ್ದ ಆರೋಪಿ ಮೌನೇಶ್ಗೆ 2 ವರ್ಷ ಜೈಲು ಮತ್ತು ₹20ಸಾವಿರ ದಂಡ ವಿಧಿಸಿ ರಾಯಚೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ ನೀಡಿದೆ.</p>.<p>ದರೋಡೆ ವೇಳೆ ತಡೆಯಲು ಮುಂದಾದ ಮನೆ ಮಾಲೀಕ ಡಾಕ್ಯಾನಾಯಕ್ ಎದೆಗೆ ಚಾಕು ಚುಚ್ಚಿ ಪರಾರಿಯಾಗಿದ್ದರು. ಡಾಕ್ಯಾನಾಯಕ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರಿದ್ದ ತಂಡ ಈ ಕೃತ್ಯ ಎಸಗಿತ್ತು. ₹50 ಸಾವಿರ ಹಣ, ₹30,400 ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ್ದರು. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪರ್ಲಿ ಮೂಲದ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಆರೋಪಿಗಳಾದ ಇಸ್ರಾಮ್, ಪಲ್ಲು ಗೋವಿಂದ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ತಪ್ಪಿಸಿಕೊಂಡಿದ್ದು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.</p>.<p>ಆರೋಪಿಗಳಾದ ಗೌರಿತಾಯಿ, ಶಿಶಬಾಯಿ ಜಾಮೀನು ಪಡೆದ ಬಳಿಕ ನಾಪತ್ತೆಯಾಗಿದ್ದಾರೆ. ಹೀಗಾಗಿ ಪ್ರಕರಣದ ಇಬ್ಬರು ಆರೋಪಿಗಳಿಗೆ ಮಾತ್ರ ಶಿಕ್ಷೆ ಪ್ರಕಟವಾಗಿದೆ. ಜಿಲ್ಲೆಯ ಹಲವೆಡೆ ಕಳ್ಳತನ ಮಾಡಿಕೊಂಡು ಓಡಾಡಿಕೊಂಡಿದ್ದ ಅಲೆಮಾರಿ ಗ್ಯಾಂಗ್ ಕದ್ದ ಚಿನ್ನಾಭರಣ ಮೌನೇಶ್ಗೆ ನೀಡಿ ಹಣ ಪಡೆಯುತ್ತಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-32-206036675</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಜಿಲ್ಲೆಯ ಮಾನ್ವಿ ತಾಲ್ಲೂಕಿನ ನೀರಮಾನ್ವಿ ತಾಂಡಾದಲ್ಲಿ 2017ರಲ್ಲಿ ನಡೆದಿದ್ದ ದರೋಡೆ ಮತ್ತು ಕೊಲೆ ಪ್ರಕರಣದ ಆದೇಶ ಪ್ರಕ ಟವಾಗಿದ್ದು ಅಲೆಮಾರಿ ದರೋಡೆ ಗ್ಯಾಂಗ್ನ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.</p>.<p>ಆರೋಪಿ ಹಶ್ಯಾ ಅಲಿಯಾಸ್ ರಮೇಶ್ಗೆ ಜೀವಾವಧಿ ಶಿಕ್ಷೆ ಹಾಗೂ ₹30 ಸಾವಿರ ದಂಡ ವಿಧಿಸಲಾಗಿದೆ. ಕದ್ದ ಚಿನ್ನಾಭರಣ ಕೊಳ್ಳುತ್ತಿದ್ದ ಆರೋಪಿ ಮೌನೇಶ್ಗೆ 2 ವರ್ಷ ಜೈಲು ಮತ್ತು ₹20ಸಾವಿರ ದಂಡ ವಿಧಿಸಿ ರಾಯಚೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ ನೀಡಿದೆ.</p>.<p>ದರೋಡೆ ವೇಳೆ ತಡೆಯಲು ಮುಂದಾದ ಮನೆ ಮಾಲೀಕ ಡಾಕ್ಯಾನಾಯಕ್ ಎದೆಗೆ ಚಾಕು ಚುಚ್ಚಿ ಪರಾರಿಯಾಗಿದ್ದರು. ಡಾಕ್ಯಾನಾಯಕ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರಿದ್ದ ತಂಡ ಈ ಕೃತ್ಯ ಎಸಗಿತ್ತು. ₹50 ಸಾವಿರ ಹಣ, ₹30,400 ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ್ದರು. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪರ್ಲಿ ಮೂಲದ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಆರೋಪಿಗಳಾದ ಇಸ್ರಾಮ್, ಪಲ್ಲು ಗೋವಿಂದ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ತಪ್ಪಿಸಿಕೊಂಡಿದ್ದು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.</p>.<p>ಆರೋಪಿಗಳಾದ ಗೌರಿತಾಯಿ, ಶಿಶಬಾಯಿ ಜಾಮೀನು ಪಡೆದ ಬಳಿಕ ನಾಪತ್ತೆಯಾಗಿದ್ದಾರೆ. ಹೀಗಾಗಿ ಪ್ರಕರಣದ ಇಬ್ಬರು ಆರೋಪಿಗಳಿಗೆ ಮಾತ್ರ ಶಿಕ್ಷೆ ಪ್ರಕಟವಾಗಿದೆ. ಜಿಲ್ಲೆಯ ಹಲವೆಡೆ ಕಳ್ಳತನ ಮಾಡಿಕೊಂಡು ಓಡಾಡಿಕೊಂಡಿದ್ದ ಅಲೆಮಾರಿ ಗ್ಯಾಂಗ್ ಕದ್ದ ಚಿನ್ನಾಭರಣ ಮೌನೇಶ್ಗೆ ನೀಡಿ ಹಣ ಪಡೆಯುತ್ತಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-32-206036675</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>