ಲಿಂಗಸುಗೂರು ತಾಲ್ಲೂಕು ಯಲಗಲದಿನ್ನಿ ಗ್ರಾಮದ ಹೊರವಲಯದಲ್ಲಿ ಗಜದಂಡಸ್ವಾಮಿ ತ್ರಿಪುರಾಂತಯ್ಯ (49) ಶವ ಪತ್ತೆಯಾಗಿದೆ. ತಲೆಗೆ ಬಲವಾಗಿ ಕಲ್ಲು ಅಥವಾ ಶಸ್ತ್ರದಿಂದ ಹೊಡೆತ ಬಿದ್ದಿದೆ. ಇವರು ಲಿಂಗಸುಗೂರು ತಾಲ್ಲೂಕು ಕೋಠ ಗ್ರಾಮದವರಾಗಿದ್ದು, ಅದೇ ಗ್ರಾಮದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹುದ್ದೆಯಿಂದ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಬಡ್ತಿ ಪಡೆದು ಕಾರ್ಯನಿರ್ವಹಿಸುತ್ತಿದ್ದರು.