<p>ರಾಯಚೂರು: ‘ನಗರದಲ್ಲಿ ಬಿಸಿಲಿನ ತಾಪದಿಂದ ಬಳಲುತ್ತ ಬೀದಿಯಲ್ಲಿ ಸಂಚರಿಸುವ ಗೋವುಗಳನ್ನು ರಕ್ಷಣೆ ಮಾಡಬೇಕು’ ಎಂದು ಒತ್ತಾಯಿಸಿ ಶಿವಸೇನಾ ಕರ್ನಾಟಕ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>‘ನಗರದಲ್ಲಿ ಬಿಸಿಲಿನ ತಾಪ ವಿಪರೀತವಾಗಿ ಏರುತ್ತಿದೆ. ತೀವ್ರ ಶಾಖದಿಂದಾಗಿ ನಗರದ ಬೀದಿಗಳಲ್ಲಿ ಅಲೆಯುವ ಗೋವುಗಳು ‘ಸನ್ ಸ್ಟ್ರೋಕ್’ಗೆ ಒಳಗಾಗಿ ಪ್ರಾಣ ಕಳೆದುಕೊಳ್ಳುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿ’ ಎಂದು ಅಸಮಾಧಾನ ಹೊರಹಾಕಿದರು.</p>.<p>‘ರಸ್ತೆಗಳ ಮಧ್ಯೆ ಗೋವುಗಳು ಅಲೆಯುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ’ ಎಂದರು.</p>.<p>‘ಬೀದಿಯಲ್ಲಿ ಅಲೆಯುತ್ತಿರುವ ಗೋವುಗಳನ್ನು ತಕ್ಷಣವೇ ಗುರುತಿಸಿ ಅವುಗಳ ಮಾಲೀಕರಿಗೆ ಹಸ್ತಾಂತರಿಸಬೇಕು. ಅನಾಥ ಗೋವುಗಳನ್ನು ಸರ್ಕಾರಿ ಗೋಶಾಲೆಗಳಿಗೆ ಸ್ಥಳಾಂತರಿಸಬೇಕು’ ಎಂದು ಆಗ್ರಹಿಸಿದರು.</p>.<p>ಶಿವಸೇನಾ ಕರ್ನಾಟಕ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ ಮಡಿವಾಳ, ಮಂಜುನಾಥ, ಸುರೇಶ, ಮುರಳಿ, ವೀರೇಶ, ರಾಜಚಂದ್ರ ಹಾಗೂ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-32-1916367403</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ‘ನಗರದಲ್ಲಿ ಬಿಸಿಲಿನ ತಾಪದಿಂದ ಬಳಲುತ್ತ ಬೀದಿಯಲ್ಲಿ ಸಂಚರಿಸುವ ಗೋವುಗಳನ್ನು ರಕ್ಷಣೆ ಮಾಡಬೇಕು’ ಎಂದು ಒತ್ತಾಯಿಸಿ ಶಿವಸೇನಾ ಕರ್ನಾಟಕ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>‘ನಗರದಲ್ಲಿ ಬಿಸಿಲಿನ ತಾಪ ವಿಪರೀತವಾಗಿ ಏರುತ್ತಿದೆ. ತೀವ್ರ ಶಾಖದಿಂದಾಗಿ ನಗರದ ಬೀದಿಗಳಲ್ಲಿ ಅಲೆಯುವ ಗೋವುಗಳು ‘ಸನ್ ಸ್ಟ್ರೋಕ್’ಗೆ ಒಳಗಾಗಿ ಪ್ರಾಣ ಕಳೆದುಕೊಳ್ಳುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿ’ ಎಂದು ಅಸಮಾಧಾನ ಹೊರಹಾಕಿದರು.</p>.<p>‘ರಸ್ತೆಗಳ ಮಧ್ಯೆ ಗೋವುಗಳು ಅಲೆಯುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ’ ಎಂದರು.</p>.<p>‘ಬೀದಿಯಲ್ಲಿ ಅಲೆಯುತ್ತಿರುವ ಗೋವುಗಳನ್ನು ತಕ್ಷಣವೇ ಗುರುತಿಸಿ ಅವುಗಳ ಮಾಲೀಕರಿಗೆ ಹಸ್ತಾಂತರಿಸಬೇಕು. ಅನಾಥ ಗೋವುಗಳನ್ನು ಸರ್ಕಾರಿ ಗೋಶಾಲೆಗಳಿಗೆ ಸ್ಥಳಾಂತರಿಸಬೇಕು’ ಎಂದು ಆಗ್ರಹಿಸಿದರು.</p>.<p>ಶಿವಸೇನಾ ಕರ್ನಾಟಕ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ ಮಡಿವಾಳ, ಮಂಜುನಾಥ, ಸುರೇಶ, ಮುರಳಿ, ವೀರೇಶ, ರಾಜಚಂದ್ರ ಹಾಗೂ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-32-1916367403</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>