<p>ರಾಯಚೂರು: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಪೋಷಕರಲ್ಲಿ ಆತಂಕ ಮೂಡಿಸಿದೆ. ಈಚೆಗೆ ಒಂದೇ ದಿನ ಮೂರು ಪ್ರತ್ಯೇಕ ಪ್ರದೇಶಗಳಲ್ಲಿ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ.</p>.<p>ಯರಮರಸ್ ಪ್ರದೇಶದ ಅರ್ಫತಲಿ (4), ಬೋಳಮಂಡಿ ರಸ್ತೆಯ ಕಲ್ಯಾಣಿ (8) ಹಾಗೂ ಹರಿಜನ ವಾರ್ಡ್ನ ರಿಯಾ (10) ಎಂಬ ಮಕ್ಕಳು ದಾಳಿಯಲ್ಲಿ ಗಾಯಗೊಂಡಿದ್ದಾರೆ. ಗಾಯಾಳು ಮಕ್ಕಳಿಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಬಾಲಕನನ್ನು ಬೀದಿನಾಯಿ ಎಳೆದಾಡಿ ಮನಸ್ಸೋ ಇಚ್ಛೆ ಕಚ್ಚಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪೋಷಕರು ಸಮಯಕ್ಕೆ ಸರಿಯಾಗಿ ಬಾರದೇ ಇದ್ದರೆ ಬಾಲಕನ ಜೀವಕ್ಕೆ ಅಪಾಯ ಉಂಟಾಗಬಹುದಿತ್ತು ಎನ್ನಲಾಗಿದೆ.</p>.<p>ಘಟನೆಗಳ ಬಳಿಕ ಪೋಷಕರು ತೀವ್ರ ಆತಂಕ ವ್ಯಕ್ತಪಡಿಸಿದ್ದು ಮಕ್ಕಳನ್ನು ಮನೆ ಹೊರಗೆ ಆಟಕ್ಕೆ ಕಳುಹಿಸಲು ಸಹ ಭಯಪಡುತ್ತಿರುವುದಾಗಿ ಹೇಳಿದ್ದಾರೆ. ಬೇಸಿಗೆ ರಜೆ ಹಿನ್ನೆಲೆ ಮಕ್ಕಳು ಹೊರಗಡೆ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಅಳಲು ತೋಡಿಕೊಂಡಿದ್ದಾರೆ.</p>.<p>ರಾಯಚೂರು ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆ, ತಕ್ಷಣ ಕ್ರಮ ಕೈಗೊಂಡು ನಾಯಿಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-32-1442145816</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಪೋಷಕರಲ್ಲಿ ಆತಂಕ ಮೂಡಿಸಿದೆ. ಈಚೆಗೆ ಒಂದೇ ದಿನ ಮೂರು ಪ್ರತ್ಯೇಕ ಪ್ರದೇಶಗಳಲ್ಲಿ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ.</p>.<p>ಯರಮರಸ್ ಪ್ರದೇಶದ ಅರ್ಫತಲಿ (4), ಬೋಳಮಂಡಿ ರಸ್ತೆಯ ಕಲ್ಯಾಣಿ (8) ಹಾಗೂ ಹರಿಜನ ವಾರ್ಡ್ನ ರಿಯಾ (10) ಎಂಬ ಮಕ್ಕಳು ದಾಳಿಯಲ್ಲಿ ಗಾಯಗೊಂಡಿದ್ದಾರೆ. ಗಾಯಾಳು ಮಕ್ಕಳಿಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಬಾಲಕನನ್ನು ಬೀದಿನಾಯಿ ಎಳೆದಾಡಿ ಮನಸ್ಸೋ ಇಚ್ಛೆ ಕಚ್ಚಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪೋಷಕರು ಸಮಯಕ್ಕೆ ಸರಿಯಾಗಿ ಬಾರದೇ ಇದ್ದರೆ ಬಾಲಕನ ಜೀವಕ್ಕೆ ಅಪಾಯ ಉಂಟಾಗಬಹುದಿತ್ತು ಎನ್ನಲಾಗಿದೆ.</p>.<p>ಘಟನೆಗಳ ಬಳಿಕ ಪೋಷಕರು ತೀವ್ರ ಆತಂಕ ವ್ಯಕ್ತಪಡಿಸಿದ್ದು ಮಕ್ಕಳನ್ನು ಮನೆ ಹೊರಗೆ ಆಟಕ್ಕೆ ಕಳುಹಿಸಲು ಸಹ ಭಯಪಡುತ್ತಿರುವುದಾಗಿ ಹೇಳಿದ್ದಾರೆ. ಬೇಸಿಗೆ ರಜೆ ಹಿನ್ನೆಲೆ ಮಕ್ಕಳು ಹೊರಗಡೆ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಅಳಲು ತೋಡಿಕೊಂಡಿದ್ದಾರೆ.</p>.<p>ರಾಯಚೂರು ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆ, ತಕ್ಷಣ ಕ್ರಮ ಕೈಗೊಂಡು ನಾಯಿಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-32-1442145816</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>