<p><strong>ರಾಯಚೂರು:</strong> ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಆಶ್ರಯದಲ್ಲಿ ರಾಯಚೂರು ತಾಲ್ಲೂಕಿನ ಆಯ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಬೇಸಿಗೆ ಸಂಭ್ರಮ ಶಿಬಿರ ನಡೆಯಿತು.</p>.<p>ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೇಂಟಿಂಗ್, ಚಿತ್ರಕಲೆ, ವಿಜ್ಞಾನದ ಚಟುವಟಿಕೆ, ಗಾಯನ, ಕಥೆ ಕಟ್ಟುವುದು ಹಾಗೂ ಪರಿಸರದ ಪರಿಚಯ ಇತ್ಯಾದಿ ವಿಷಯಗಳ ಕುರಿತು ಚಟುವಟಿಕೆಯ ರೂಪದಲ್ಲಿ ಮಕ್ಕಳಿಗೆ ತಿಳಿಸಲಾಯಿತು.</p>.<p>ಸಂಗಮಕುಂಟ ಶಾಲೆಯಲ್ಲಿ ನಡೆದ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ ಮಾತನಾಡಿ, ‘ವಿದ್ಯಾರ್ಥಿಗಳು ಸದಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಮಕ್ಕಳಲ್ಲಿ ಶೈಕ್ಷಣಿಕ ಚಿಂತನೆ ಹಾಗೂ ವೈಜ್ಞಾನಿಕ ಮನೋಭಾವ ಮೂಡಲು ಇಂತಹ ಶಿಬಿರಗಳು ಬಹಳ ಅನುಕೂಲ. ಇಲಾಖೆ ಹಾಗೂ ಭಾರತ ಜ್ಞಾನ ವಿಜ್ಞಾನಿ ಸಮಿತಿ ಜಂಟಿಯಾಗಿ ಎಂಟು ಕೇಂದ್ರಗಳಲ್ಲಿ ಶಿಬಿರಗಳನ್ನು ನಡೆಸಲಾಗಿದೆ’ ಎಂದು ತಿಳಿಸಿದರು.</p>.<p>ಭಾರತ ಜ್ಞಾನ ವಿಜ್ಞಾನಿ ಸಮಿತಿ ರಾಜ್ಯ ಸಂಚಾಲಕ ಸೈಯದ್ ಹಫೀಜುಲ್ಲಾ, ರಾಘವೇಂದ್ರ ಹಾಗೂ ಶಾಲೆಯ ಮುಖ್ಯಪಾದ್ಯರು, ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಆಶ್ರಯದಲ್ಲಿ ರಾಯಚೂರು ತಾಲ್ಲೂಕಿನ ಆಯ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಬೇಸಿಗೆ ಸಂಭ್ರಮ ಶಿಬಿರ ನಡೆಯಿತು.</p>.<p>ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೇಂಟಿಂಗ್, ಚಿತ್ರಕಲೆ, ವಿಜ್ಞಾನದ ಚಟುವಟಿಕೆ, ಗಾಯನ, ಕಥೆ ಕಟ್ಟುವುದು ಹಾಗೂ ಪರಿಸರದ ಪರಿಚಯ ಇತ್ಯಾದಿ ವಿಷಯಗಳ ಕುರಿತು ಚಟುವಟಿಕೆಯ ರೂಪದಲ್ಲಿ ಮಕ್ಕಳಿಗೆ ತಿಳಿಸಲಾಯಿತು.</p>.<p>ಸಂಗಮಕುಂಟ ಶಾಲೆಯಲ್ಲಿ ನಡೆದ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ ಮಾತನಾಡಿ, ‘ವಿದ್ಯಾರ್ಥಿಗಳು ಸದಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಮಕ್ಕಳಲ್ಲಿ ಶೈಕ್ಷಣಿಕ ಚಿಂತನೆ ಹಾಗೂ ವೈಜ್ಞಾನಿಕ ಮನೋಭಾವ ಮೂಡಲು ಇಂತಹ ಶಿಬಿರಗಳು ಬಹಳ ಅನುಕೂಲ. ಇಲಾಖೆ ಹಾಗೂ ಭಾರತ ಜ್ಞಾನ ವಿಜ್ಞಾನಿ ಸಮಿತಿ ಜಂಟಿಯಾಗಿ ಎಂಟು ಕೇಂದ್ರಗಳಲ್ಲಿ ಶಿಬಿರಗಳನ್ನು ನಡೆಸಲಾಗಿದೆ’ ಎಂದು ತಿಳಿಸಿದರು.</p>.<p>ಭಾರತ ಜ್ಞಾನ ವಿಜ್ಞಾನಿ ಸಮಿತಿ ರಾಜ್ಯ ಸಂಚಾಲಕ ಸೈಯದ್ ಹಫೀಜುಲ್ಲಾ, ರಾಘವೇಂದ್ರ ಹಾಗೂ ಶಾಲೆಯ ಮುಖ್ಯಪಾದ್ಯರು, ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>