<p><strong>ರಾಯಚೂರು:</strong> ಕೋವಿಡ್-19 ಸೋಂಕು ಹರಡದಂತೆ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಜನರಲ್ಲಿರುವ ಆತಂಕ ದೂರ ಮಾಡಬೇಕು ಎಂದು ಶಾಸಕ ಬಸನಗೌಡ ದದ್ದಲ್ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತಂತೆ ಗುರುವಾರ ಆಯೋಜಿಸಿದ್ದ ರಾಯಚೂರು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.</p>.<p>ವಹಿಸಬೇಕಾದ ಎಚ್ಚರಿಕೆ ಕುರಿತು ವ್ಯಾಪಕ ಅರಿವು ಮೂಡಿಸಬೇಕು. ಗ್ರಾಮಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು ಹಾಗೂ ಆರೋಗ್ಯ ಇಲಾಖೆಯ ಕಾರ್ಯಕರ್ತರು ಪ್ರತಿದಿನ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ 100 ಜನರಿಗೆ ಲಸಿಕಾಕರಣ ಮಾಡುವಂತಹ ಗುರಿ ಇಟ್ಟುಕೊಳ್ಳಬೇಕು. ವಿಶೇಷವಾಗಿ 45 ರಿಂದ 59 ವಯಸ್ಸಿನ ಎಲ್ಲ ಹಿರಿಯ ನಾಗರಿಕರಿಗೆ ತಪ್ಪದೆ ಕೋವಿಡ್ ಲಸಿಕೆ ನೀಡಲು ಶ್ರಮಿಸಬೇಕು ಎಂದು ಹೇಳಿದರು.</p>.<p>ಗ್ರಾಮೀಣ ಭಾಗದಲ್ಲಿ ಕೆಲವರಿಗೆ ಲಸಿಕೆಯ ಬಗ್ಗೆ ಇರುವ ಆತಂಕವನ್ನು ಹೋಗಲಾಡಿಸಿ, ಲಸಿಕೆಯನ್ನು ಪಡೆಯುವಂತೆ ಅವರ ಮನವೊಲಿಸಬೇಕಿದೆ. ಆಯಾ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಸಭೆ ಜರುಗಿಸಿ, ಸಾರ್ವಜನಿಕರು ತಮ್ಮ ಗುರುತಿನ ಚೀಟಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ, ನಿಗದಿತ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಪಡೆಯಲು ನೆರವಾಗಬೇಕು. ಇದಕ್ಕಾಗಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದರು.</p>.<p>ಶಾಸಕ ಡಾ. ಶಿವರಾಜ ಪಾಟೀಲ ಮಾತನಾಡಿ, ಕೊರೊನಾ ಹರಡದಿರಲು ಕೆಲವು ಸುರಕ್ಷತಾ ವಿಧಾನಗಳನ್ನು ಪಾಲಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಅನ್ಯತಾ ಮನೆಯಿಂದ ಹೊರಬರಬಾರದು, ಈ ಕುರಿತು ಗ್ರಾಮಾಂತರ ಭಾಗಗಳಲ್ಲಿ ಹೆಚ್ಚು ತಿಳಿವಳಿಕೆ ನೀಡಬೇಕು. ಮುನ್ನೆಚ್ಚರಿಕೆ ಸಂಬಂಧ ಆದೇಶ ಪಾಲನೆ ಮಾಡದೇ ಇರುವವರ ವಿರುದ್ಧ ದಂಡ ವಿಧಿಸುವ ಹಾಗೂ ನಿಯಮಾನುಸಾರ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ತಹಶೀಲ್ದಾರ್ ಡಾ. ಹಂಪಣ್ಣ ಸಜ್ಜನ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಕೋವಿಡ್-19 ಸೋಂಕು ಹರಡದಂತೆ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಜನರಲ್ಲಿರುವ ಆತಂಕ ದೂರ ಮಾಡಬೇಕು ಎಂದು ಶಾಸಕ ಬಸನಗೌಡ ದದ್ದಲ್ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತಂತೆ ಗುರುವಾರ ಆಯೋಜಿಸಿದ್ದ ರಾಯಚೂರು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.</p>.<p>ವಹಿಸಬೇಕಾದ ಎಚ್ಚರಿಕೆ ಕುರಿತು ವ್ಯಾಪಕ ಅರಿವು ಮೂಡಿಸಬೇಕು. ಗ್ರಾಮಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು ಹಾಗೂ ಆರೋಗ್ಯ ಇಲಾಖೆಯ ಕಾರ್ಯಕರ್ತರು ಪ್ರತಿದಿನ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ 100 ಜನರಿಗೆ ಲಸಿಕಾಕರಣ ಮಾಡುವಂತಹ ಗುರಿ ಇಟ್ಟುಕೊಳ್ಳಬೇಕು. ವಿಶೇಷವಾಗಿ 45 ರಿಂದ 59 ವಯಸ್ಸಿನ ಎಲ್ಲ ಹಿರಿಯ ನಾಗರಿಕರಿಗೆ ತಪ್ಪದೆ ಕೋವಿಡ್ ಲಸಿಕೆ ನೀಡಲು ಶ್ರಮಿಸಬೇಕು ಎಂದು ಹೇಳಿದರು.</p>.<p>ಗ್ರಾಮೀಣ ಭಾಗದಲ್ಲಿ ಕೆಲವರಿಗೆ ಲಸಿಕೆಯ ಬಗ್ಗೆ ಇರುವ ಆತಂಕವನ್ನು ಹೋಗಲಾಡಿಸಿ, ಲಸಿಕೆಯನ್ನು ಪಡೆಯುವಂತೆ ಅವರ ಮನವೊಲಿಸಬೇಕಿದೆ. ಆಯಾ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಸಭೆ ಜರುಗಿಸಿ, ಸಾರ್ವಜನಿಕರು ತಮ್ಮ ಗುರುತಿನ ಚೀಟಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ, ನಿಗದಿತ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಪಡೆಯಲು ನೆರವಾಗಬೇಕು. ಇದಕ್ಕಾಗಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದರು.</p>.<p>ಶಾಸಕ ಡಾ. ಶಿವರಾಜ ಪಾಟೀಲ ಮಾತನಾಡಿ, ಕೊರೊನಾ ಹರಡದಿರಲು ಕೆಲವು ಸುರಕ್ಷತಾ ವಿಧಾನಗಳನ್ನು ಪಾಲಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಅನ್ಯತಾ ಮನೆಯಿಂದ ಹೊರಬರಬಾರದು, ಈ ಕುರಿತು ಗ್ರಾಮಾಂತರ ಭಾಗಗಳಲ್ಲಿ ಹೆಚ್ಚು ತಿಳಿವಳಿಕೆ ನೀಡಬೇಕು. ಮುನ್ನೆಚ್ಚರಿಕೆ ಸಂಬಂಧ ಆದೇಶ ಪಾಲನೆ ಮಾಡದೇ ಇರುವವರ ವಿರುದ್ಧ ದಂಡ ವಿಧಿಸುವ ಹಾಗೂ ನಿಯಮಾನುಸಾರ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ತಹಶೀಲ್ದಾರ್ ಡಾ. ಹಂಪಣ್ಣ ಸಜ್ಜನ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>